AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA Awards: ಒಂದೇ ಕಾರ್ಯಕ್ರಮದಲ್ಲಿ ರಕ್ಷಿತ್​ ಶೆಟ್ಟಿ-ರಶ್ಮಿಕಾ; ಪ್ರತಿಷ್ಠಿತ ಅವಾರ್ಡ್​ ಬಾಚಿಕೊಂಡ ಕಿರಿಕ್​ ಜೋಡಿ

ಸೈಮಾ ಸಮಾರಂಭದಲ್ಲಿ ರಕ್ಷಿತ್​ ಶೆಟ್ಟಿ ‘ಅತ್ಯುತ್ತಮ ನಟ’ (ಕ್ರಿಟಿಕ್ಸ್​) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಯಜಮಾನ’ ಹಾಗೂ ‘ಡಿಯರ್​ ಕಾಮ್ರೇಡ್​​’ ಸಿನಿಮಾಗಳ ನಟನೆಗಾಗಿ ರಶ್ಮಿಕಾ ಮಂದಣ್ಣ ಅವರಿಗೆ ‘ಅತ್ಯುತ್ತಮ ನಟಿ’ (ಕ್ರಿಟಿಕ್ಸ್​) ಪ್ರಶಸ್ತಿ ಸಿಕ್ಕಿದೆ.

SIIMA Awards: ಒಂದೇ ಕಾರ್ಯಕ್ರಮದಲ್ಲಿ ರಕ್ಷಿತ್​ ಶೆಟ್ಟಿ-ರಶ್ಮಿಕಾ; ಪ್ರತಿಷ್ಠಿತ ಅವಾರ್ಡ್​ ಬಾಚಿಕೊಂಡ ಕಿರಿಕ್​ ಜೋಡಿ
ರಶ್ಮಿಕಾ-ರಕ್ಷಿತ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on:Sep 19, 2021 | 10:06 AM

ಒಂದು ಕಾಲದಲ್ಲಿ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಮಧ್ಯೆ ಮನಸ್ತಾಪ ಮೂಡಿತ್ತು. ಬಳಿಕ ಅದಕ್ಕೆ ಸ್ವತಃ ರಕ್ಷಿತ್​ ಶೆಟ್ಟಿ ಫುಲ್​ ಸ್ಟಾಪ್​ ಇಟ್ಟಿದ್ದರು. ಈಗ ಒಂದೇ ಕಾರ್ಯಕ್ರಮದಲ್ಲಿ ರಶ್ಮಿಕಾ ಮತ್ತು ರಕ್ಷಿತ್​ ಕಾಣಿಸಿಕೊಂಡಿದ್ದಾರೆ. ಅದ್ದೂರಿಯಾಗಿ ನಡೆದ ಸೈಮಾ ಅವಾರ್ಡ್ಸ್​ ಕಾರ್ಯಕ್ರಮಕ್ಕೆ ಶನಿವಾರ (ಸೆ.18) ರಾತ್ರಿ ಅವರಿಬ್ಬರು ಹಾಜರಾಗಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡು ಸಂಭ್ರಮಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಕರಲ್​ಫುಲ್​ ಕಾರ್ಯಕ್ರಮ ಹೈದರಾಬಾದ್​ನಲ್ಲಿ ನಡೆದಿದೆ. ರಕ್ಷಿತ್​ ಶೆಟ್ಟಿ ಅತ್ಯುತ್ತಮ ನಟ (ಕ್ರಿಟಿಕ್ಸ್​) ಪ್ರಶಸ್ತಿ ಪಡೆದುಕೊಂಡಿದ್ದರೆ, ರಶ್ಮಿಕಾ ಮಂದಣ್ಣ ಪಾಲಿಗೆ ಅತ್ಯುತ್ತಮ ನಟಿ (ಕ್ರಿಟಿಕ್ಸ್​) ಪ್ರಶಸ್ತಿ ಒಲಿದುಬಂದಿದೆ. 2019ನೇ ಸಾಲಿನ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ.

ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ರಶ್ಮಿಕಾ ಬ್ಯುಸಿ ಆಗಿದ್ದಾರೆ. ಕನ್ನಡದಲ್ಲಿ ನಟಿಸಿದ ‘ಯಜಮಾನ’ ಹಾಗೂ ತೆಲುಗಿನಲ್ಲಿ ನಟಿಸಿದ ‘ಡಿಯರ್​ ಕಾಮ್ರೇಡ್​​’ ಸಿನಿಮಾಗಳ ನಟನೆಗಾಗಿ ಅವರು ಸೈಮಾ ಅವಾರ್ಡ್ಸ್​ಗೆ ನಾಮಿನೇಟ್​ ಆಗಿದ್ದರು. ಈ ಎರಡೂ ಸಿನಿಮಾಗಳಿಂದಲೂ ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ (ಕ್ರಿಟಿಕ್ಸ್​) ಸಿಕ್ಕಿದೆ. ಈ ಸಂಭ್ರಮದಿಂದ ರಶ್ಮಿಕಾ ಅಭಿಮಾನಿಗಳು ಹಿರಿಹಿರಿ ಹಿಗ್ಗಿದ್ದಾರೆ. ಕೆಂಪು ಗೌನ್​ ಧರಿಸಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ರಶ್ಮಿಕಾ ಸಖತ್​ ಮಿಂಚಿದ್ದಾರೆ.

ಇನ್ನು, ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಹುಭಾಷೆಯಲ್ಲಿ ಬಿಡುಗಡೆ ಆಗಿತ್ತು. ಭಾರಿ ಬಜೆಟ್​ನಲ್ಲಿ ಮೂಡಿಬಂದ ಆ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಫಲ ಸಿಕ್ಕಿರಲಿಲ್ಲ. ಆದರೆ ಪ್ರಶಸ್ತಿ ಪಡೆಯುವಲ್ಲಿ ರಕ್ಷಿತ್​ ಶೆಟ್ಟಿ ಹಿಂದೆ ಬಿದ್ದಿಲ್ಲ. ಸೈಮಾ ಸಮಾರಂಭದಲ್ಲಿ ಅವರು ಅತ್ಯುತ್ತಮ ನಟ (ಕ್ರಿಟಿಕ್ಸ್​) ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರ ಫೋಟೋ ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಇದಲ್ಲದೇ ಕನ್ನಡ ಚಿತ್ರರಂಗದ ಅನೇಕ ತಂತ್ರಜ್ಞರು ಮತ್ತು ಕಲಾವಿದರು ಸೈಮಾ ಪ್ರಶಸ್ತಿ ಪಡೆದುಕೊಂಡು ಸಂಭ್ರಮಿಸುತ್ತಿದ್ದಾರೆ. ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್​ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಅಮರ್​’ ಚಿತ್ರದಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಅಭಿಷೇಕ್​ ಅಂಬರೀಷ್​ ಅವರಿಗೆ ‘ಅತ್ಯುತ್ತಮ ಹೊಸ ನಟ’ ಪ್ರಶಸ್ತಿ ನೀಡಲಾಗಿದೆ. ‘ಕನ್ನಡ್​ ಗೊತ್ತಿಲ್ಲ’ ಚಿತ್ರಕ್ಕಾಗಿ ಮಯೂರ ರಾಘವೇಂದ್ರ ಅವರಿಗೆ ‘ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ ಸಿಕ್ಕಿದೆ. ‘ಮನೆ ಮಾರಾಟಕ್ಕಿದೆ’ ಚಿತ್ರದ ನಟನೆಗಾಗಿ ಕಾರುಣ್ಯ ರಾಮ್ ಅವರು ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ಹಿಂದಿಕ್ಕಿದ ಪೂಜಾ ಹೆಗ್ಡೆ; ಕೊಡಗಿನ ಬೆಡಗಿಗೆ ಕಡಿಮೆ ಆಯ್ತಾ ಬೇಡಿಕೆ?

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

Published On - 9:09 am, Sun, 19 September 21

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು