SIIMA Awards: ಒಂದೇ ಕಾರ್ಯಕ್ರಮದಲ್ಲಿ ರಕ್ಷಿತ್​ ಶೆಟ್ಟಿ-ರಶ್ಮಿಕಾ; ಪ್ರತಿಷ್ಠಿತ ಅವಾರ್ಡ್​ ಬಾಚಿಕೊಂಡ ಕಿರಿಕ್​ ಜೋಡಿ

ಸೈಮಾ ಸಮಾರಂಭದಲ್ಲಿ ರಕ್ಷಿತ್​ ಶೆಟ್ಟಿ ‘ಅತ್ಯುತ್ತಮ ನಟ’ (ಕ್ರಿಟಿಕ್ಸ್​) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಯಜಮಾನ’ ಹಾಗೂ ‘ಡಿಯರ್​ ಕಾಮ್ರೇಡ್​​’ ಸಿನಿಮಾಗಳ ನಟನೆಗಾಗಿ ರಶ್ಮಿಕಾ ಮಂದಣ್ಣ ಅವರಿಗೆ ‘ಅತ್ಯುತ್ತಮ ನಟಿ’ (ಕ್ರಿಟಿಕ್ಸ್​) ಪ್ರಶಸ್ತಿ ಸಿಕ್ಕಿದೆ.

SIIMA Awards: ಒಂದೇ ಕಾರ್ಯಕ್ರಮದಲ್ಲಿ ರಕ್ಷಿತ್​ ಶೆಟ್ಟಿ-ರಶ್ಮಿಕಾ; ಪ್ರತಿಷ್ಠಿತ ಅವಾರ್ಡ್​ ಬಾಚಿಕೊಂಡ ಕಿರಿಕ್​ ಜೋಡಿ
ರಶ್ಮಿಕಾ-ರಕ್ಷಿತ್ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on:Sep 19, 2021 | 10:06 AM

ಒಂದು ಕಾಲದಲ್ಲಿ ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಮಧ್ಯೆ ಮನಸ್ತಾಪ ಮೂಡಿತ್ತು. ಬಳಿಕ ಅದಕ್ಕೆ ಸ್ವತಃ ರಕ್ಷಿತ್​ ಶೆಟ್ಟಿ ಫುಲ್​ ಸ್ಟಾಪ್​ ಇಟ್ಟಿದ್ದರು. ಈಗ ಒಂದೇ ಕಾರ್ಯಕ್ರಮದಲ್ಲಿ ರಶ್ಮಿಕಾ ಮತ್ತು ರಕ್ಷಿತ್​ ಕಾಣಿಸಿಕೊಂಡಿದ್ದಾರೆ. ಅದ್ದೂರಿಯಾಗಿ ನಡೆದ ಸೈಮಾ ಅವಾರ್ಡ್ಸ್​ ಕಾರ್ಯಕ್ರಮಕ್ಕೆ ಶನಿವಾರ (ಸೆ.18) ರಾತ್ರಿ ಅವರಿಬ್ಬರು ಹಾಜರಾಗಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡು ಸಂಭ್ರಮಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಕರಲ್​ಫುಲ್​ ಕಾರ್ಯಕ್ರಮ ಹೈದರಾಬಾದ್​ನಲ್ಲಿ ನಡೆದಿದೆ. ರಕ್ಷಿತ್​ ಶೆಟ್ಟಿ ಅತ್ಯುತ್ತಮ ನಟ (ಕ್ರಿಟಿಕ್ಸ್​) ಪ್ರಶಸ್ತಿ ಪಡೆದುಕೊಂಡಿದ್ದರೆ, ರಶ್ಮಿಕಾ ಮಂದಣ್ಣ ಪಾಲಿಗೆ ಅತ್ಯುತ್ತಮ ನಟಿ (ಕ್ರಿಟಿಕ್ಸ್​) ಪ್ರಶಸ್ತಿ ಒಲಿದುಬಂದಿದೆ. 2019ನೇ ಸಾಲಿನ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ.

ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ರಶ್ಮಿಕಾ ಬ್ಯುಸಿ ಆಗಿದ್ದಾರೆ. ಕನ್ನಡದಲ್ಲಿ ನಟಿಸಿದ ‘ಯಜಮಾನ’ ಹಾಗೂ ತೆಲುಗಿನಲ್ಲಿ ನಟಿಸಿದ ‘ಡಿಯರ್​ ಕಾಮ್ರೇಡ್​​’ ಸಿನಿಮಾಗಳ ನಟನೆಗಾಗಿ ಅವರು ಸೈಮಾ ಅವಾರ್ಡ್ಸ್​ಗೆ ನಾಮಿನೇಟ್​ ಆಗಿದ್ದರು. ಈ ಎರಡೂ ಸಿನಿಮಾಗಳಿಂದಲೂ ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ (ಕ್ರಿಟಿಕ್ಸ್​) ಸಿಕ್ಕಿದೆ. ಈ ಸಂಭ್ರಮದಿಂದ ರಶ್ಮಿಕಾ ಅಭಿಮಾನಿಗಳು ಹಿರಿಹಿರಿ ಹಿಗ್ಗಿದ್ದಾರೆ. ಕೆಂಪು ಗೌನ್​ ಧರಿಸಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ರಶ್ಮಿಕಾ ಸಖತ್​ ಮಿಂಚಿದ್ದಾರೆ.

ಇನ್ನು, ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಹುಭಾಷೆಯಲ್ಲಿ ಬಿಡುಗಡೆ ಆಗಿತ್ತು. ಭಾರಿ ಬಜೆಟ್​ನಲ್ಲಿ ಮೂಡಿಬಂದ ಆ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಫಲ ಸಿಕ್ಕಿರಲಿಲ್ಲ. ಆದರೆ ಪ್ರಶಸ್ತಿ ಪಡೆಯುವಲ್ಲಿ ರಕ್ಷಿತ್​ ಶೆಟ್ಟಿ ಹಿಂದೆ ಬಿದ್ದಿಲ್ಲ. ಸೈಮಾ ಸಮಾರಂಭದಲ್ಲಿ ಅವರು ಅತ್ಯುತ್ತಮ ನಟ (ಕ್ರಿಟಿಕ್ಸ್​) ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರ ಫೋಟೋ ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಇದಲ್ಲದೇ ಕನ್ನಡ ಚಿತ್ರರಂಗದ ಅನೇಕ ತಂತ್ರಜ್ಞರು ಮತ್ತು ಕಲಾವಿದರು ಸೈಮಾ ಪ್ರಶಸ್ತಿ ಪಡೆದುಕೊಂಡು ಸಂಭ್ರಮಿಸುತ್ತಿದ್ದಾರೆ. ಆಯುಷ್ಮಾನ್​ ಭವ ಚಿತ್ರದ ನಟನೆಗಾಗಿ ರಚಿತಾ ರಾಮ್​ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಅಮರ್​’ ಚಿತ್ರದಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಅಭಿಷೇಕ್​ ಅಂಬರೀಷ್​ ಅವರಿಗೆ ‘ಅತ್ಯುತ್ತಮ ಹೊಸ ನಟ’ ಪ್ರಶಸ್ತಿ ನೀಡಲಾಗಿದೆ. ‘ಕನ್ನಡ್​ ಗೊತ್ತಿಲ್ಲ’ ಚಿತ್ರಕ್ಕಾಗಿ ಮಯೂರ ರಾಘವೇಂದ್ರ ಅವರಿಗೆ ‘ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ ಸಿಕ್ಕಿದೆ. ‘ಮನೆ ಮಾರಾಟಕ್ಕಿದೆ’ ಚಿತ್ರದ ನಟನೆಗಾಗಿ ಕಾರುಣ್ಯ ರಾಮ್ ಅವರು ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ಹಿಂದಿಕ್ಕಿದ ಪೂಜಾ ಹೆಗ್ಡೆ; ಕೊಡಗಿನ ಬೆಡಗಿಗೆ ಕಡಿಮೆ ಆಯ್ತಾ ಬೇಡಿಕೆ?

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

Published On - 9:09 am, Sun, 19 September 21

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ