AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RJ Rachana: ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್​ಜೆ ರಚನಾ

RJ Rachana Passes Away: ಖ್ಯಾತ ಆರ್​ಜೆ ರಚನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಅಂಗಾಂಗ ದಾನದ ಮೂಲಕ ಆರ್​ಜೆ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

RJ Rachana: ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್​ಜೆ ರಚನಾ
ಆರ್​ಜೆ ರಚನಾ
TV9 Web
| Edited By: |

Updated on:Feb 22, 2022 | 4:32 PM

Share

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಖ್ಯಾತಿಯ ರೇಡಿಯೋ ಜಾಕಿ ರಚನಾ (RJ Rachana) ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ನಿಧನರಾಗಿದ್ದು, ರಚನಾ ಅವರ ಅನಿರೀಕ್ಷಿತ ನಿಧನ ಅಭಿಮಾನಿಗಳಿಗೆ ಶಾಕ್ ನೀಡಿದೆ. ರೇಡಿಯೋ ಮಿರ್ಚಿಯಲ್ಲಿ ಆರ್​ಜೆ ಆಗಿದ್ದ ಅವರು, ತಮ್ಮ ಮಾತು, ಧ್ವನಿಯಿಂದ ಅಪಾರ ಕೇಳುಗ ಅಭಿಮಾನಿಗಳನ್ನು ಸಂಪಾದಿಸಿದ್ದರು. ಜೆಪಿ ನಗರದ ಪ್ಲಾಟ್​ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ನಿಧನರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ರಚನಾ ಅವರು ಅರ್​ಜೆ ಕೆಲಸ ಬಿಟ್ಟಿದ್ದರು. ರಚನಾ ತಂದೆ-ತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದು, ರಚನಾ ಪಾರ್ಥಿವ ಶರೀರವನ್ನು ಚಾಮರಾಜ ಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರು ಮಾಹಿತಿ ನೀಡಿದ್ದಾರೆ.

ಆರ್​ಜೆ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕುಟುಂಬಸ್ಥರು ರಚನಾ ಅವರ ಅಂಗಾಂಗವನ್ನು ದಾನ ಮಾಡಿದ್ದಾರೆ.  ಮುಂಜಾನೆ ಹೃದಯಘಾತವಾಗಿದ್ದ ಕಾರಣ ಅಪೋಲೊ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿತ್ತು. 12 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಚನಾ ಅವರ ನಿಧನಕ್ಕೆ ಚಿತ್ರರಂಗ, ಸಹದ್ಯೋಗಿಗಳು, ಅಪಾರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ರಚನಾ ನಿಧನಕ್ಕೆ ಆರ್​​ಜೆ ರಾಜೇಶ್ ಕಂಬನಿ: 

ಆರ್​ಜೆ ರಚನಾ ಅವರಿಗೆ ದೊಡ್ಡ ಅಭಿಮಾನಿ ಬಳಗವಿತ್ತು. ತಮ್ಮ ಮಾತಿನ ಮೂಲಕ ಅವರು ಕೇಳುಗರನ್ನು ರಂಜಿಸುತ್ತಿದ್ದರು. ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಚಿತ್ರದಲ್ಲೂ ಆರ್​ಜೆಯಾಗಿ ಕಾಣಿಸಿಕೊಂಡಿದ್ದ ರಚನಾ ತಮ್ಮ ಸಂಭಾಷಣೆಗಳಿಂದ ಗಮನ ಸೆಳೆದಿದ್ದರು. ಚಿತ್ರದಲ್ಲಿ ಅವರ ಪಾತ್ರಕ್ಕೂ ದೊಡ್ಡ ಪ್ರಾಮುಖ್ಯತೆ ಇತ್ತು. ಅದನ್ನು ಸಮರ್ಥವಾಗಿ ಅವರು ನಿಭಾಯಿಸಿ, ಮೆಚ್ಚುಗೆ ಗಳಿಸಿದ್ದರು.

ಹೀಗೆ ಆರ್​ಜೆಯಾಗಿ ಗುರುತಿಸಿಕೊಂಡಿದ್ದ ರಚನಾ ಅವರು ಕಳೆದ ಮೂರು ವರ್ಷಗಳಿಂದ ಕೆಲಸವನ್ನು ತ್ಯಜಿಸಿದ್ದರು. ಅವರ ನಿಧನದ ಕುರಿತು ಮತ್ತಷ್ಟು ಮಾಹಿತಿಗಳು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ:

ಮಕ್ಕಳಿಗೆ ವಿಭಜನೆಯ ವಿಷ ಉಣಿಸಬೇಡಿ, ಪೂರ್ವಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು: ಹಿಜಾಬ್ ವಿವಾದ ಬಗ್ಗೆ ಸದ್ಗುರು ಹೇಳಿದ್ದೇನು?

ಬದಲಾದ ‘ಕಚ್ಚಾ ಬದಾಮ್​’ ಸಿಂಗರ್ ಬದುಕು; ಕಾಡುತ್ತಿದೆ ಅವಮಾನ ಎದುರಿಸುವ ಆತಂಕ

Published On - 3:01 pm, Tue, 22 February 22

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?