AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RJ Rachana: ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್​ಜೆ ರಚನಾ

RJ Rachana Passes Away: ಖ್ಯಾತ ಆರ್​ಜೆ ರಚನಾ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಅಂಗಾಂಗ ದಾನದ ಮೂಲಕ ಆರ್​ಜೆ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

RJ Rachana: ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್​ಜೆ ರಚನಾ
ಆರ್​ಜೆ ರಚನಾ
TV9 Web
| Edited By: |

Updated on:Feb 22, 2022 | 4:32 PM

Share

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಖ್ಯಾತಿಯ ರೇಡಿಯೋ ಜಾಕಿ ರಚನಾ (RJ Rachana) ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ನಿಧನರಾಗಿದ್ದು, ರಚನಾ ಅವರ ಅನಿರೀಕ್ಷಿತ ನಿಧನ ಅಭಿಮಾನಿಗಳಿಗೆ ಶಾಕ್ ನೀಡಿದೆ. ರೇಡಿಯೋ ಮಿರ್ಚಿಯಲ್ಲಿ ಆರ್​ಜೆ ಆಗಿದ್ದ ಅವರು, ತಮ್ಮ ಮಾತು, ಧ್ವನಿಯಿಂದ ಅಪಾರ ಕೇಳುಗ ಅಭಿಮಾನಿಗಳನ್ನು ಸಂಪಾದಿಸಿದ್ದರು. ಜೆಪಿ ನಗರದ ಪ್ಲಾಟ್​ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಅವರು ನಿಧನರಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ರಚನಾ ಅವರು ಅರ್​ಜೆ ಕೆಲಸ ಬಿಟ್ಟಿದ್ದರು. ರಚನಾ ತಂದೆ-ತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದು, ರಚನಾ ಪಾರ್ಥಿವ ಶರೀರವನ್ನು ಚಾಮರಾಜ ಪೇಟೆ ನಿವಾಸಕ್ಕೆ ಕೊಂಡೊಯ್ಯುತ್ತಿರುವುದಾಗಿ ರಚನಾ ಸ್ನೇಹಿತರು ಮಾಹಿತಿ ನೀಡಿದ್ದಾರೆ.

ಆರ್​ಜೆ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕುಟುಂಬಸ್ಥರು ರಚನಾ ಅವರ ಅಂಗಾಂಗವನ್ನು ದಾನ ಮಾಡಿದ್ದಾರೆ.  ಮುಂಜಾನೆ ಹೃದಯಘಾತವಾಗಿದ್ದ ಕಾರಣ ಅಪೋಲೊ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿತ್ತು. 12 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಚನಾ ಅವರ ನಿಧನಕ್ಕೆ ಚಿತ್ರರಂಗ, ಸಹದ್ಯೋಗಿಗಳು, ಅಪಾರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ರಚನಾ ನಿಧನಕ್ಕೆ ಆರ್​​ಜೆ ರಾಜೇಶ್ ಕಂಬನಿ: 

ಆರ್​ಜೆ ರಚನಾ ಅವರಿಗೆ ದೊಡ್ಡ ಅಭಿಮಾನಿ ಬಳಗವಿತ್ತು. ತಮ್ಮ ಮಾತಿನ ಮೂಲಕ ಅವರು ಕೇಳುಗರನ್ನು ರಂಜಿಸುತ್ತಿದ್ದರು. ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಚಿತ್ರದಲ್ಲೂ ಆರ್​ಜೆಯಾಗಿ ಕಾಣಿಸಿಕೊಂಡಿದ್ದ ರಚನಾ ತಮ್ಮ ಸಂಭಾಷಣೆಗಳಿಂದ ಗಮನ ಸೆಳೆದಿದ್ದರು. ಚಿತ್ರದಲ್ಲಿ ಅವರ ಪಾತ್ರಕ್ಕೂ ದೊಡ್ಡ ಪ್ರಾಮುಖ್ಯತೆ ಇತ್ತು. ಅದನ್ನು ಸಮರ್ಥವಾಗಿ ಅವರು ನಿಭಾಯಿಸಿ, ಮೆಚ್ಚುಗೆ ಗಳಿಸಿದ್ದರು.

ಹೀಗೆ ಆರ್​ಜೆಯಾಗಿ ಗುರುತಿಸಿಕೊಂಡಿದ್ದ ರಚನಾ ಅವರು ಕಳೆದ ಮೂರು ವರ್ಷಗಳಿಂದ ಕೆಲಸವನ್ನು ತ್ಯಜಿಸಿದ್ದರು. ಅವರ ನಿಧನದ ಕುರಿತು ಮತ್ತಷ್ಟು ಮಾಹಿತಿಗಳು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ:

ಮಕ್ಕಳಿಗೆ ವಿಭಜನೆಯ ವಿಷ ಉಣಿಸಬೇಡಿ, ಪೂರ್ವಗ್ರಹಗಳೊಂದಿಗೆ ಮಕ್ಕಳು ಬೆಳೆಯಬಾರದು: ಹಿಜಾಬ್ ವಿವಾದ ಬಗ್ಗೆ ಸದ್ಗುರು ಹೇಳಿದ್ದೇನು?

ಬದಲಾದ ‘ಕಚ್ಚಾ ಬದಾಮ್​’ ಸಿಂಗರ್ ಬದುಕು; ಕಾಡುತ್ತಿದೆ ಅವಮಾನ ಎದುರಿಸುವ ಆತಂಕ

Published On - 3:01 pm, Tue, 22 February 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ