AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿರಿಕ್​ ಪಾರ್ಟಿ 2’ ಸಿನಿಮಾಗಾಗಿ ಕಾಯುತ್ತಿದ್ದೀರಾ? ಹಾಗಾದರೆ ಇಲ್ಲಿದೆ ರಕ್ಷಿತ್​ ಶೆಟ್ಟಿ ನೀಡಿದ ಗುಡ್​ ನ್ಯೂಸ್​!

‘ಕಿರಿಕ್​ ಪಾರ್ಟಿ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿತ್ತು. ಅದರ 2ನೇ ಪಾರ್ಟ್​ಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ. ಅಂಥವರಿಗೆ ಇದು ಸಿಹಿ ಸುದ್ದಿ.

‘ಕಿರಿಕ್​ ಪಾರ್ಟಿ 2’ ಸಿನಿಮಾಗಾಗಿ ಕಾಯುತ್ತಿದ್ದೀರಾ? ಹಾಗಾದರೆ ಇಲ್ಲಿದೆ ರಕ್ಷಿತ್​ ಶೆಟ್ಟಿ ನೀಡಿದ ಗುಡ್​ ನ್ಯೂಸ್​!
ಕಿರಿಕ್ ಪಾರ್ಟಿ
ಮದನ್​ ಕುಮಾರ್​
|

Updated on:Mar 12, 2021 | 5:00 PM

Share

ರಕ್ಷಿತ್​ ಶೆಟ್ಟಿ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್​ ನೀಡಿದ ಸಿನಿಮಾ ಎಂದರೆ ಅದು ‘ಕಿರಿಕ್​ ಪಾರ್ಟಿ’. ಕಾಲೇಜು ಕಥೆಯುಳ್ಳ ಆ ಸಿನಿಮಾ ಮೂಲಕ ರಕ್ಷಿತ್​ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ‘ಕಿರಿಕ್​ ಪಾರ್ಟಿ’ಯ ಸೀಕ್ವೆಲ್​ ಯಾವಾಗ ಬರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿ ಒಂದು ಗುಡ್ ನ್ಯೂಸ್​ ಕೇಳಿಬಂದಿದೆ.

ಪ್ರಸ್ತುತ ರಕ್ಷಿತ್​ ಶೆಟ್ಟಿ ಅವರು ‘777 ಚಾರ್ಲಿ’ ಮತ್ತು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಗೆ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಹೇಮಂತ್​ ಎಂ. ರಾವ್​ ನಿರ್ದೇಶನ ಮಾಡುತ್ತಿದ್ದು, ಮಾ.12ರಂದು ಮುಹೂರ್ತ ನೆರವೇರಿಸಲಾಗಿದೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ರಕ್ಷಿತ್​ ಮಾತನಾಡಿದರು. ಈ ಸಂದರ್ಭದಲ್ಲಿ ಅವರಿಗೆ ‘ಕಿರಿಕ್​ ಪಾರ್ಟಿ 2’ ಬಗ್ಗೆ ಪ್ರಶ್ನೆ ಎದುರಾಯಿತು.

‘ಕಿರಿಕ್​ ಪಾರ್ಟಿ’ ಸಿನಿಮಾ ಮಾಡಿದ ತಂಡವೇ ಈಗ ‘ಕಿರಿಕ್​ ಪಾರ್ಟಿ 2’ ಮಾಡುತ್ತಿದೆ. ರಿಷಬ್​ ಶೆಟ್ಟಿ ಅವರೇ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಸ್ಕ್ರಿಪ್ಟ್​ ಬರೆಯುವ ಕೆಲಸ ಆರಂಭ ಆಗಿದೆ. 2021ರಲ್ಲಿಯೇ ಚಿತ್ರೀಕರಣ ಮುಗಿಸಬೇಕು ಎಂಬ ಗುರಿ ಇಟ್ಟುಕೊಳ್ಳಲಾಗಿದೆ. ಅಂದರೆ ಚಿತ್ರದ ಕೆಲಸಗಳು ವೇಗವಾಗಿ ನಡೆಯುತ್ತಿವೆ ಎಂಬುದು ಖಚಿತ. 2016ರಲ್ಲಿ ಕಿರಿಕ್​ ಪಾರ್ಟಿ ಚಿತ್ರವನ್ನು ಇಷ್ಟಪಟ್ಟವರು ಈಗ ಅದರ ಸೀಕ್ವೆಲ್​ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಕಿರಿಕ್​ ಪಾರ್ಟಿ’ ಮೂಲಕ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬಹುದೊಡ್ಡ ಎಂಟ್ರಿ ಸಿಕ್ಕಿತ್ತು. ಮೊದಲ ಸಿನಿಮಾದಲ್ಲೇ ಅವರು ಕರುನಾಡ ಕ್ರಶ್​ ಅಂತ ಫೇಮಸ್​ ಆದರು. ನಂತರ ಪರಭಾಷೆಯಲ್ಲಿ ಅವರಿಗೆ ಅವಕಾಶಗಳು ಹುಡುಕಿಕೊಂಡು ಬಂದವು. ಸದ್ಯ ಅವರು ಬಾಲಿವುಡ್​ನ ಕದ ತಟ್ಟಿದ್ದಾರೆ. ‘ಕಿರಿಕ್​ ಪಾರ್ಟಿ 2’ ಸಿನಿಮಾದಲ್ಲಿ ರಶ್ಮಿಕಾ ಮತ್ತು ಸಂಯುಕ್ತಾ ಹೆಗಡೆ ಇರುವುದಿಲ್ಲ ಎಂಬುದು ಖಚಿತ. ಈ ವಿಚಾರವನ್ನು ರಕ್ಷಿತ್​ ಕೂಡ ಸ್ಪಷ್ಟಪಡಿಸಿದ್ದಾರೆ. ಸೀಕ್ವೆಲ್​ನಲ್ಲಿ ನಾಯಕಿಯರು ಬದಲಾಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸದ್ಯಕ್ಕಂತೂ ರಕ್ಷಿತ್​ ಶೆಟ್ಟಿ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ಅವರ ಡ್ರೀಮ್​ ಪ್ರಾಜೆಕ್ಟ್​ ಆದಂತಹ ‘ಪುಣ್ಯಕೋಟಿ’ ಚಿತ್ರದ ಸ್ಕ್ರಿಪ್ಟ್​ ಕೆಲಸಕ್ಕೆ ಅವರು ಸಮಯ ಮೀಸಲಿಡಬೇಕಿದೆ. ನಟನಾಗಿ ಅನೇಕ ಸಿನಿಮಾಗಳ ಕಥೆ ಕೇಳುತ್ತಿದ್ದಾರೆ. ಇಂಥ ಬ್ಯುಸಿ ಶೆಡ್ಯೂಲ್​ನ ನಡುವೆ ಪ್ರತಿ ಭಾನುವಾರ ‘ಕಿರಿಕ್​ ಪಾರ್ಟಿ 2’ ಚಿತ್ರಕ್ಕೆ ಸಂಬಂಧಿಸಿದಂತೆ ಟೀಮ್​ ಜೊತೆ ಚರ್ಚೆ ನಡೆಸಲು ಅವರು ಸಮಯ ಮೀಸಲಿಡುತ್ತಿದ್ದಾರೆ.

ಇದನ್ನೂ ಓದಿ: 8 ವರ್ಷಗಳ ಹಿಂದೆ ಶುರುವಾದ ಲವ್​ಸ್ಟೋರಿ ಬಗ್ಗೆ ರಕ್ಷಿತ್​ ಶೆಟ್ಟಿ ಮನದಾಳದ ಮಾತು!

ಮುಂಬೈನಲ್ಲಿ ಐಷಾರಾಮಿ ಫ್ಲಾಟ್​ ಖರೀದಿಸಿದ್ದಾರಂತೆ ನಟಿ ರಶ್ಮಿಕಾ ಮಂದಣ್ಣ !

Published On - 4:56 pm, Fri, 12 March 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್