AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿರಿಕ್​ ಪಾರ್ಟಿ 2’ ಸಿನಿಮಾಗಾಗಿ ಕಾಯುತ್ತಿದ್ದೀರಾ? ಹಾಗಾದರೆ ಇಲ್ಲಿದೆ ರಕ್ಷಿತ್​ ಶೆಟ್ಟಿ ನೀಡಿದ ಗುಡ್​ ನ್ಯೂಸ್​!

‘ಕಿರಿಕ್​ ಪಾರ್ಟಿ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿತ್ತು. ಅದರ 2ನೇ ಪಾರ್ಟ್​ಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ. ಅಂಥವರಿಗೆ ಇದು ಸಿಹಿ ಸುದ್ದಿ.

‘ಕಿರಿಕ್​ ಪಾರ್ಟಿ 2’ ಸಿನಿಮಾಗಾಗಿ ಕಾಯುತ್ತಿದ್ದೀರಾ? ಹಾಗಾದರೆ ಇಲ್ಲಿದೆ ರಕ್ಷಿತ್​ ಶೆಟ್ಟಿ ನೀಡಿದ ಗುಡ್​ ನ್ಯೂಸ್​!
ಕಿರಿಕ್ ಪಾರ್ಟಿ
ಮದನ್​ ಕುಮಾರ್​
|

Updated on:Mar 12, 2021 | 5:00 PM

Share

ರಕ್ಷಿತ್​ ಶೆಟ್ಟಿ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್​ ನೀಡಿದ ಸಿನಿಮಾ ಎಂದರೆ ಅದು ‘ಕಿರಿಕ್​ ಪಾರ್ಟಿ’. ಕಾಲೇಜು ಕಥೆಯುಳ್ಳ ಆ ಸಿನಿಮಾ ಮೂಲಕ ರಕ್ಷಿತ್​ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡರು. ‘ಕಿರಿಕ್​ ಪಾರ್ಟಿ’ಯ ಸೀಕ್ವೆಲ್​ ಯಾವಾಗ ಬರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿ ಒಂದು ಗುಡ್ ನ್ಯೂಸ್​ ಕೇಳಿಬಂದಿದೆ.

ಪ್ರಸ್ತುತ ರಕ್ಷಿತ್​ ಶೆಟ್ಟಿ ಅವರು ‘777 ಚಾರ್ಲಿ’ ಮತ್ತು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಗೆ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಹೇಮಂತ್​ ಎಂ. ರಾವ್​ ನಿರ್ದೇಶನ ಮಾಡುತ್ತಿದ್ದು, ಮಾ.12ರಂದು ಮುಹೂರ್ತ ನೆರವೇರಿಸಲಾಗಿದೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ರಕ್ಷಿತ್​ ಮಾತನಾಡಿದರು. ಈ ಸಂದರ್ಭದಲ್ಲಿ ಅವರಿಗೆ ‘ಕಿರಿಕ್​ ಪಾರ್ಟಿ 2’ ಬಗ್ಗೆ ಪ್ರಶ್ನೆ ಎದುರಾಯಿತು.

‘ಕಿರಿಕ್​ ಪಾರ್ಟಿ’ ಸಿನಿಮಾ ಮಾಡಿದ ತಂಡವೇ ಈಗ ‘ಕಿರಿಕ್​ ಪಾರ್ಟಿ 2’ ಮಾಡುತ್ತಿದೆ. ರಿಷಬ್​ ಶೆಟ್ಟಿ ಅವರೇ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಸ್ಕ್ರಿಪ್ಟ್​ ಬರೆಯುವ ಕೆಲಸ ಆರಂಭ ಆಗಿದೆ. 2021ರಲ್ಲಿಯೇ ಚಿತ್ರೀಕರಣ ಮುಗಿಸಬೇಕು ಎಂಬ ಗುರಿ ಇಟ್ಟುಕೊಳ್ಳಲಾಗಿದೆ. ಅಂದರೆ ಚಿತ್ರದ ಕೆಲಸಗಳು ವೇಗವಾಗಿ ನಡೆಯುತ್ತಿವೆ ಎಂಬುದು ಖಚಿತ. 2016ರಲ್ಲಿ ಕಿರಿಕ್​ ಪಾರ್ಟಿ ಚಿತ್ರವನ್ನು ಇಷ್ಟಪಟ್ಟವರು ಈಗ ಅದರ ಸೀಕ್ವೆಲ್​ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಕಿರಿಕ್​ ಪಾರ್ಟಿ’ ಮೂಲಕ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಬಹುದೊಡ್ಡ ಎಂಟ್ರಿ ಸಿಕ್ಕಿತ್ತು. ಮೊದಲ ಸಿನಿಮಾದಲ್ಲೇ ಅವರು ಕರುನಾಡ ಕ್ರಶ್​ ಅಂತ ಫೇಮಸ್​ ಆದರು. ನಂತರ ಪರಭಾಷೆಯಲ್ಲಿ ಅವರಿಗೆ ಅವಕಾಶಗಳು ಹುಡುಕಿಕೊಂಡು ಬಂದವು. ಸದ್ಯ ಅವರು ಬಾಲಿವುಡ್​ನ ಕದ ತಟ್ಟಿದ್ದಾರೆ. ‘ಕಿರಿಕ್​ ಪಾರ್ಟಿ 2’ ಸಿನಿಮಾದಲ್ಲಿ ರಶ್ಮಿಕಾ ಮತ್ತು ಸಂಯುಕ್ತಾ ಹೆಗಡೆ ಇರುವುದಿಲ್ಲ ಎಂಬುದು ಖಚಿತ. ಈ ವಿಚಾರವನ್ನು ರಕ್ಷಿತ್​ ಕೂಡ ಸ್ಪಷ್ಟಪಡಿಸಿದ್ದಾರೆ. ಸೀಕ್ವೆಲ್​ನಲ್ಲಿ ನಾಯಕಿಯರು ಬದಲಾಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಸದ್ಯಕ್ಕಂತೂ ರಕ್ಷಿತ್​ ಶೆಟ್ಟಿ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ಅವರ ಡ್ರೀಮ್​ ಪ್ರಾಜೆಕ್ಟ್​ ಆದಂತಹ ‘ಪುಣ್ಯಕೋಟಿ’ ಚಿತ್ರದ ಸ್ಕ್ರಿಪ್ಟ್​ ಕೆಲಸಕ್ಕೆ ಅವರು ಸಮಯ ಮೀಸಲಿಡಬೇಕಿದೆ. ನಟನಾಗಿ ಅನೇಕ ಸಿನಿಮಾಗಳ ಕಥೆ ಕೇಳುತ್ತಿದ್ದಾರೆ. ಇಂಥ ಬ್ಯುಸಿ ಶೆಡ್ಯೂಲ್​ನ ನಡುವೆ ಪ್ರತಿ ಭಾನುವಾರ ‘ಕಿರಿಕ್​ ಪಾರ್ಟಿ 2’ ಚಿತ್ರಕ್ಕೆ ಸಂಬಂಧಿಸಿದಂತೆ ಟೀಮ್​ ಜೊತೆ ಚರ್ಚೆ ನಡೆಸಲು ಅವರು ಸಮಯ ಮೀಸಲಿಡುತ್ತಿದ್ದಾರೆ.

ಇದನ್ನೂ ಓದಿ: 8 ವರ್ಷಗಳ ಹಿಂದೆ ಶುರುವಾದ ಲವ್​ಸ್ಟೋರಿ ಬಗ್ಗೆ ರಕ್ಷಿತ್​ ಶೆಟ್ಟಿ ಮನದಾಳದ ಮಾತು!

ಮುಂಬೈನಲ್ಲಿ ಐಷಾರಾಮಿ ಫ್ಲಾಟ್​ ಖರೀದಿಸಿದ್ದಾರಂತೆ ನಟಿ ರಶ್ಮಿಕಾ ಮಂದಣ್ಣ !

Published On - 4:56 pm, Fri, 12 March 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ