AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Rajkumar: ವಿನಯ್​ ರಾಜ್​ಕುಮಾರ್​ ಹೊಸ ಸಿನಿಮಾ ಅನೌನ್ಸ್​; ದೊಡ್ಮನೆ ನಟನ ಜತೆ ಕೈ ಜೋಡಿಸಿದ ಸಿಂಪಲ್​ ಸುನಿ

Simple Suni | Vinay Rajkumar: ವಿನಯ್​ ರಾಜ್​ಕುಮಾರ್​ ಮತ್ತು ಸಿಂಪಲ್​ ಸುನಿ ಅವರ ಹೊಸ ಚಿತ್ರಕ್ಕೆ ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಚಿತ್ರದ ಶೀರ್ಷಿಕೆ ಏನೆಂಬುದು ಗೊತ್ತಾಗಲಿದೆ.

Vinay Rajkumar: ವಿನಯ್​ ರಾಜ್​ಕುಮಾರ್​ ಹೊಸ ಸಿನಿಮಾ ಅನೌನ್ಸ್​; ದೊಡ್ಮನೆ ನಟನ ಜತೆ ಕೈ ಜೋಡಿಸಿದ ಸಿಂಪಲ್​ ಸುನಿ
ಸಿಂಪಲ್​ ಸುನಿ, ವಿನಯ್​ ರಾಜ್​ಕುಮಾರ್
TV9 Web
| Edited By: |

Updated on: Jan 05, 2023 | 8:20 PM

Share

ಡಾ. ರಾಜ್​ಕುಮಾರ್​ ಮೊಮ್ಮಗ ವಿನಯ್​ ರಾಜ್​ಕುಮಾರ್​ (Vinay Rajkumar) ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವು ವರ್ಷಗಳು ಕಳೆದಿವೆ. ಮೊದಲ ಸಿನಿಮಾ ‘ಸಿದ್ದಾರ್ಥ’ ಇಂದ ಇಲ್ಲಿಯ ತನಕ ಅವರು ಬಣ್ಣ ಹಚ್ಚಿದ್ದು ಕೆಲವೇ ಪ್ರಾಜೆಕ್ಟ್​ಗಳಲ್ಲಿ ಮಾತ್ರ. ಸಿನಿಮಾಗಳ ಆಯ್ಕೆಯಲ್ಲಿ ಅವರು ಚ್ಯೂಸಿ ಆಗಿದ್ದಾರೆ. ಪ್ರತಿ ಬಾರಿಯೂ ಅವರು ಭಿನ್ನ ಪ್ರಯತ್ನಗಳನ್ನು ಮಾಡುತ್ತಾರೆ. ಡಾ. ರಾಜ್​ಕುಮಾರ್​ ಕುಟುಂಬದ (Dr Rajkumar Family) ನಟರ ಸಿನಿಮಾ ಎಂದರೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದ್ದೇ ಇರುತ್ತದೆ. ಈಗ ವಿನಯ್​ ರಾಜ್​ಕುಮಾರ್​ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಸಿಂಪಲ್​ ಸುನಿ (Simple Suni) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎಂಬುದು ವಿಶೇಷ.

ಮೊದಲ ಬಾರಿ ಸುನಿ-ವಿನಯ್​ ಕಾಂಬಿನೇಷನ್​:

‘ಸಿಂಪಲ್’ ಸುನಿ ಅವರ ಮುಂದಿನ ಚಿತ್ರ ರೊಮ್ಯಾಂಟಿಕ್ ಕಥಾಹಂದರವನ್ನು ಒಳಗೊಂಡಿದ್ದು, ಈ ಚಿತ್ರದಲ್ಲಿ ಹೀರೋ ಆಗಿ ವಿನಯ್ ರಾಜ್​ಕುಮಾರ್ ಬಣ್ಣ ಹಚ್ಚಲಿದ್ದಾರೆ. ಇದೇ ಮೊದಲ ಬಾರಿಗೆ ‘ಸಿಂಪಲ್’ ಸುನಿ ಹಾಗೂ ವಿನಯ್ ರಾಜ್​ಕುಮಾರ್ ಜೊತೆಯಾಗಿ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಷನ್ ಮೇಲೆ ಸಹಜವಾಗಿಯೇ ನಿರೀಕ್ಷೆ ಮೂಡಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಸುನಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಚಿತ್ರಕಥೆ ಮತ್ತು ಸಂಭಾಷಣೆಯ ಜಬಾವ್ದಾರಿಯನ್ನೂ ನಿಭಾಯಿಸಲಿದ್ದಾರೆ.

ಇದನ್ನೂ ಓದಿ: Avatara Purusha Review: ಅವತಾರ ಪುರುಷನ ಹಲವು ಅವತಾರ, ನಿಜವಾದದ್ದು ಯಾವುದು?

ಇದನ್ನೂ ಓದಿ
Image
ಈ ಬಾರಿಯ ಲಾಲ್​ಬಾಗ್ ಫ್ಲಾವರ್ ಶೋ ಮೂಲಕ ಡಾ ರಾಜ್ ಮತ್ತು ಪುನೀತ್ ರಾಜಕುಮಾರರಿಗೆ ಶ್ರದ್ಧಾಂಜಲಿ!
Image
Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?
Image
ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು; ನಟಿ ಲಕ್ಷ್ಮೀ
Image
‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ

ಯಾವ ಹಂತದಲ್ಲಿದೆ ಸಿನಿಮಾ ಕೆಲಸ?

ವಿನಯ್​ ರಾಜ್​ಕುಮಾರ್​ ಮತ್ತು ಸಿಂಪಲ್​ ಸುನಿ ಅವರ ಹೊಸ ಚಿತ್ರಕ್ಕೆ ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಸುನಿ ಅವರು ಶೀಘ್ರದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಿದ್ದಾರೆ. ವಿನಯ್ ರಾಜ್​ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅವುಗಳ ಸಾಲಿಗೆ ಈ ಹೊಸ ಚಿತ್ರ ಸೇರ್ಪಡೆ ಆಗುತ್ತಿದೆ. 2023ರಲ್ಲಿ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ರಿಲೀಸ್​ ಆಗಲಿವೆ.

ಇದನ್ನೂ ಓದಿ: Sakath Movie Review: ‘ಸಖತ್’​ ಮನರಂಜನೆ, ‘ಸಖತ್’​ ಸಂದೇಶ; ಇದು ಗಣೇಶ್​-ಸುನಿ ಪಂಚ್​

ಈ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದಾರೆ. ವೀರ್ ಸಮರ್ಥ್ ಸಂಗೀತ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಭಾ ಛಾಯಾಗ್ರಾಹಣ ಮಾಡಲಿದ್ದಾರೆ. ಸಿಂಪಲ್​ ಸುನಿ ನಿರ್ದೇಶನದ ಸಿನಿಮಾ ಎಂದರೆ ಏನಾದರೊಂದು ವಿಶೇಷ ಇದ್ದೇ ಇರುತ್ತದೆ. ಪ್ರತಿ ಬಾರಿ ಅವರು ಹೊಸ ಸಿನಿಮಾ ಅನೌನ್ಸ್​ ಆದಾಗಲೂ ಫ್ಯಾನ್ಸ್​ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಈ ಬಾರಿ ಅವರು ಯಾವ ರೀತಿಯ ಕಥೆಯನ್ನು ತೆರೆಗೆ ತರಲಿದ್ದಾರೆ ಎಂಬುದನ್ನು ಕಾದು ನೀಡಬೇಕು. ಅವರ ‘ಗತ ವೈಭವ’ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ