AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Rajkumar: ವಿನಯ್​ ರಾಜ್​ಕುಮಾರ್​ ಹೊಸ ಸಿನಿಮಾ ಅನೌನ್ಸ್​; ದೊಡ್ಮನೆ ನಟನ ಜತೆ ಕೈ ಜೋಡಿಸಿದ ಸಿಂಪಲ್​ ಸುನಿ

Simple Suni | Vinay Rajkumar: ವಿನಯ್​ ರಾಜ್​ಕುಮಾರ್​ ಮತ್ತು ಸಿಂಪಲ್​ ಸುನಿ ಅವರ ಹೊಸ ಚಿತ್ರಕ್ಕೆ ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಚಿತ್ರದ ಶೀರ್ಷಿಕೆ ಏನೆಂಬುದು ಗೊತ್ತಾಗಲಿದೆ.

Vinay Rajkumar: ವಿನಯ್​ ರಾಜ್​ಕುಮಾರ್​ ಹೊಸ ಸಿನಿಮಾ ಅನೌನ್ಸ್​; ದೊಡ್ಮನೆ ನಟನ ಜತೆ ಕೈ ಜೋಡಿಸಿದ ಸಿಂಪಲ್​ ಸುನಿ
ಸಿಂಪಲ್​ ಸುನಿ, ವಿನಯ್​ ರಾಜ್​ಕುಮಾರ್
TV9 Web
| Edited By: |

Updated on: Jan 05, 2023 | 8:20 PM

Share

ಡಾ. ರಾಜ್​ಕುಮಾರ್​ ಮೊಮ್ಮಗ ವಿನಯ್​ ರಾಜ್​ಕುಮಾರ್​ (Vinay Rajkumar) ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವು ವರ್ಷಗಳು ಕಳೆದಿವೆ. ಮೊದಲ ಸಿನಿಮಾ ‘ಸಿದ್ದಾರ್ಥ’ ಇಂದ ಇಲ್ಲಿಯ ತನಕ ಅವರು ಬಣ್ಣ ಹಚ್ಚಿದ್ದು ಕೆಲವೇ ಪ್ರಾಜೆಕ್ಟ್​ಗಳಲ್ಲಿ ಮಾತ್ರ. ಸಿನಿಮಾಗಳ ಆಯ್ಕೆಯಲ್ಲಿ ಅವರು ಚ್ಯೂಸಿ ಆಗಿದ್ದಾರೆ. ಪ್ರತಿ ಬಾರಿಯೂ ಅವರು ಭಿನ್ನ ಪ್ರಯತ್ನಗಳನ್ನು ಮಾಡುತ್ತಾರೆ. ಡಾ. ರಾಜ್​ಕುಮಾರ್​ ಕುಟುಂಬದ (Dr Rajkumar Family) ನಟರ ಸಿನಿಮಾ ಎಂದರೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದ್ದೇ ಇರುತ್ತದೆ. ಈಗ ವಿನಯ್​ ರಾಜ್​ಕುಮಾರ್​ ಅವರ ಹೊಸ ಸಿನಿಮಾ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಸಿಂಪಲ್​ ಸುನಿ (Simple Suni) ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎಂಬುದು ವಿಶೇಷ.

ಮೊದಲ ಬಾರಿ ಸುನಿ-ವಿನಯ್​ ಕಾಂಬಿನೇಷನ್​:

‘ಸಿಂಪಲ್’ ಸುನಿ ಅವರ ಮುಂದಿನ ಚಿತ್ರ ರೊಮ್ಯಾಂಟಿಕ್ ಕಥಾಹಂದರವನ್ನು ಒಳಗೊಂಡಿದ್ದು, ಈ ಚಿತ್ರದಲ್ಲಿ ಹೀರೋ ಆಗಿ ವಿನಯ್ ರಾಜ್​ಕುಮಾರ್ ಬಣ್ಣ ಹಚ್ಚಲಿದ್ದಾರೆ. ಇದೇ ಮೊದಲ ಬಾರಿಗೆ ‘ಸಿಂಪಲ್’ ಸುನಿ ಹಾಗೂ ವಿನಯ್ ರಾಜ್​ಕುಮಾರ್ ಜೊತೆಯಾಗಿ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಷನ್ ಮೇಲೆ ಸಹಜವಾಗಿಯೇ ನಿರೀಕ್ಷೆ ಮೂಡಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಸುನಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಚಿತ್ರಕಥೆ ಮತ್ತು ಸಂಭಾಷಣೆಯ ಜಬಾವ್ದಾರಿಯನ್ನೂ ನಿಭಾಯಿಸಲಿದ್ದಾರೆ.

ಇದನ್ನೂ ಓದಿ: Avatara Purusha Review: ಅವತಾರ ಪುರುಷನ ಹಲವು ಅವತಾರ, ನಿಜವಾದದ್ದು ಯಾವುದು?

ಇದನ್ನೂ ಓದಿ
Image
ಈ ಬಾರಿಯ ಲಾಲ್​ಬಾಗ್ ಫ್ಲಾವರ್ ಶೋ ಮೂಲಕ ಡಾ ರಾಜ್ ಮತ್ತು ಪುನೀತ್ ರಾಜಕುಮಾರರಿಗೆ ಶ್ರದ್ಧಾಂಜಲಿ!
Image
Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?
Image
ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು; ನಟಿ ಲಕ್ಷ್ಮೀ
Image
‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ

ಯಾವ ಹಂತದಲ್ಲಿದೆ ಸಿನಿಮಾ ಕೆಲಸ?

ವಿನಯ್​ ರಾಜ್​ಕುಮಾರ್​ ಮತ್ತು ಸಿಂಪಲ್​ ಸುನಿ ಅವರ ಹೊಸ ಚಿತ್ರಕ್ಕೆ ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಸುನಿ ಅವರು ಶೀಘ್ರದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಿದ್ದಾರೆ. ವಿನಯ್ ರಾಜ್​ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅವುಗಳ ಸಾಲಿಗೆ ಈ ಹೊಸ ಚಿತ್ರ ಸೇರ್ಪಡೆ ಆಗುತ್ತಿದೆ. 2023ರಲ್ಲಿ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ರಿಲೀಸ್​ ಆಗಲಿವೆ.

ಇದನ್ನೂ ಓದಿ: Sakath Movie Review: ‘ಸಖತ್’​ ಮನರಂಜನೆ, ‘ಸಖತ್’​ ಸಂದೇಶ; ಇದು ಗಣೇಶ್​-ಸುನಿ ಪಂಚ್​

ಈ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದಾರೆ. ವೀರ್ ಸಮರ್ಥ್ ಸಂಗೀತ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಭಾ ಛಾಯಾಗ್ರಾಹಣ ಮಾಡಲಿದ್ದಾರೆ. ಸಿಂಪಲ್​ ಸುನಿ ನಿರ್ದೇಶನದ ಸಿನಿಮಾ ಎಂದರೆ ಏನಾದರೊಂದು ವಿಶೇಷ ಇದ್ದೇ ಇರುತ್ತದೆ. ಪ್ರತಿ ಬಾರಿ ಅವರು ಹೊಸ ಸಿನಿಮಾ ಅನೌನ್ಸ್​ ಆದಾಗಲೂ ಫ್ಯಾನ್ಸ್​ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಈ ಬಾರಿ ಅವರು ಯಾವ ರೀತಿಯ ಕಥೆಯನ್ನು ತೆರೆಗೆ ತರಲಿದ್ದಾರೆ ಎಂಬುದನ್ನು ಕಾದು ನೀಡಬೇಕು. ಅವರ ‘ಗತ ವೈಭವ’ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್