AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Rajkumar: ಅಪ್ಪು ಇಷ್ಟಪಟ್ಟಿದ್ದ ಕತೆಗೆ ವಿನಯ್ ರಾಜ್​ಕುಮಾರ್ ನಾಯಕ

ಪುನೀತ್ ರಾಜ್​ಕುಮಾರ್ ಕೇಳಿ ಇಷ್ಟಪಟ್ಟಿದ್ದ ಕತೆಗೆ ಈಗ ವಿನಯ್ ರಾಜ್​ಕುಮಾರ್ ನಾಯಕ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಶುರುವಾಗಿದ್ದು ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರಲಿದೆ.

Vinay Rajkumar: ಅಪ್ಪು ಇಷ್ಟಪಟ್ಟಿದ್ದ ಕತೆಗೆ ವಿನಯ್ ರಾಜ್​ಕುಮಾರ್ ನಾಯಕ
ವಿನಯ್ ರಾಜ್​ಕುಮಾರ್
ಮಂಜುನಾಥ ಸಿ.
|

Updated on: Mar 08, 2023 | 8:27 PM

Share

ಯುವ ರಾಜ್​ಕುಮಾರ್ (Yuva Rajkumar) ಮೊದಲ ಸಿನಿಮಾದ ಮುಹೂರ್ತ ಆದ ಬೆನ್ನಲ್ಲೆ ಅವರ ಸಹೋದರ ವಿನಯ್ ರಾಜ್​ಕುಮಾರ್ (Vinay Rajkumar) ಅವರ ಹೊಸ ಸಿನಿಮಾವೊಂದು ಸೆಟ್ಟೇರಿದೆ. ಪುನೀತ್​ಗಾಗಿ ಸಂತೋಷ್ ಆನಂದ್ ರಾಮ್ ಮಾಡಿದ್ದ ಕತೆಯಲ್ಲಿ ಯುವ ರಾಜ್​ಕುಮಾರ್ ನಟಿಸುತ್ತಿದ್ದರೆ, ಅಪ್ಪುಗಾಗಿ ನಿರ್ದೇಶಕ ಸಿಂಪಲ್ ಸುನಿ (Simple Suni) ಮಾಡಿದ್ದ ಕತೆಯಲ್ಲಿ ಈಗ ವಿನಯ್ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ, ಪುನೀತ್ ರಾಜ್​ಕುಮಾರ್​ಗಾಗಿ ಕತೆಯೊಂದನ್ನು ಮಾಡಿದ್ದರು ಅದು ಪುನೀತ್ ರಾಜ್​ಕುಮಾರ್​ಗೆ ಇಷ್ಟವಾಗಿತ್ತು, ಕತೆಯನ್ನು ಚಿತ್ರಕತೆಯನ್ನಾಗಿ ಬದಲಾಯಿಸುವ ವೇಳೆಗೆ ಅಪ್ಪು ನಿಧನ ಹೊಂದಿದರು. ಈಗ ಅದೇ ಕತೆಯನ್ನು ಒಂದು ಸರಳ ಪ್ರೇಮಕತೆ ಹೆಸರಿನಲ್ಲಿ ತೆರೆಗೆ ತರಲು ಸಿಂಪಲ್ ಸುನಿ ಮುಂದಾಗಿದ್ದು ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ನಾಯಕರಾಗಿ ನಟಿಸುತ್ತಿದ್ದಾರೆ.

ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಇಂದು (ಮಾರ್ಚ್ 08) ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸಿಂಪಲ್ ಸುನಿ ನಿರ್ದೇಶನದ ಸಿಂಪಲ್ ಆಗ್ ಒಂದ್ ಲವ್ ಸ್ಟೋರಿ ಸಿನಿಮಾ ಬಿಡುಗಡೆ ಆಗಿ ಹತ್ತು ವರ್ಷವಾದ ಹಿನ್ನೆಲೆಯಲ್ಲಿ ಒಂದು ಸರಳ ಪ್ರೇಮ ಕತೆ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.

ಈ ಸಿನಿಮಾದ ಕತೆಯನ್ನು ಪುನೀತ್ ರಾಜ್​ಕುಮಾರ್ ಇಷ್ಟಪಟ್ಟಿದ್ದರು. ಮೊದಲು ನಾಲ್ಕು ಸಾಲಲ್ಲಿ ಕತೆ ಹೇಳಿದ್ದೆ ಆಗ ಪುನೀತ್ ರಾಜ್​ಕುಮಾರ್ ಒಪ್ಪಿದ್ದರು ಕತೆಯನ್ನು ಡೆವೆಲಪ್ ಮಾಡಬೇಕಿತ್ತು ಆದರೆ ಅಷ್ಟರಲ್ಲಿ ದುರ್ಘಟನೆ ಸಂಭವಿಸಿತು ಈಗ ಅದೇ ಕತೆಯಲ್ಲಿ ವಿನಯ್ ರಾಜ್​ಕುಮಾರ್ ನಟಿಸುತ್ತಿದ್ದಾರೆ ಎಂದಿದ್ದಾರೆ ನಿರ್ದೇಶಕ ಸಿಂಪಲ್ ಸುನಿ.

ನಟ ವಿನಯ್ ರಾಜ್​ಕುಮಾರ್ ಮಾತನಾಡಿ, ಮೊದಲಿನಿಂದಲೂ ನನಗೆ ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳೆಂದರೆ ಬಹಳ ಇಷ್ಟ. ಇದೂ ಸಹ ಅದೇ ಜಾನರ್​ನ ಸಿನಿಮಾ. ಈ ಸಿನಿಮಾದಲ್ಲಿ ಅತಿಶಯ್ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದೀನಿ. ಸಂಗೀತ ನಿರ್ದೇಶಕ ಆಗುವ ಕನಸು ಹೊತ್ತಿರುವ ಯುವಕನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎಂದರು. ಸಿನಿಮಾದಲ್ಲಿ ಮಲ್ಲಿಕಾ ಹಾಗೂ ಸ್ವಾತಿಷ್ಟಾ ಹೆಸರಿನ ಇಬ್ಬರು ನಾಯಕಿಯರಿದ್ದಾರೆ.

ಸಿಂಪಲ್ ಸುನಿ ಈಗಾಗಲೇ ನಾಲ್ಕು ಸಿನಿಮಾಗಳನ್ನು ನಿರ್ದೇಶನ ಮಾಡುತ್ತಿದ್ದಾರೆ. ರಾಬಿನ್ ಹುಡ್, ಸ್ಟೋರಿ ಆಫ್ ರಾಯಘಡ, ಗತವೈಭವ ಜೊತೆಗೆ ಅವತಾರ ಪುರುಷ 2 ಸಿನಿಮಾವನ್ನು ಘೋಷಿಸಿದ್ದಾರೆ. ಇದರ ನಡುವೆ ಒಂದು ಸರಳ ಪ್ರೇಮಕತೆ ಸಿನಿಮಾ ಸಹ ಪ್ರಾರಂಭಿಸಿದ್ದಾರೆ. ಒಂದರ ಹಿಂದೊಂದು ಸಿನಿಮಾವನ್ನು ಸಿಂಪಲ್ ಸುನಿ ತೆರೆಗೆ ತರಲು ಹೊರಟಿದ್ದಾರೆ.

ಇನ್ನು ನಟ ವಿನಯ್ ರಾಜ್​ಕುಮಾರ್ ಸಹ ಬ್ಯುಸಿ ನಟರೇ ಆಗಿದ್ದಾರೆ. ಅವರ ನಟನೆಯ ಅಂದೊಂದಿತ್ತು ಕಾಲ ಹಾಗೂ ಪೆಪೆ ಸಿನಿಮಾಗಳು ತೆರೆಗೆ ಬರಬೇಕಿದೆ. ಗ್ರಾಮಾಯಣ ಹೆಸರಿನ ಸಿನಿಮಾದ ಶೂಟಿಂಗ್ ಅರ್ಧ ಮುಗಿಸಿದ್ದರು ಆ ವೇಳೆಗೆ ನಿರ್ಮಾಪಕ ನಿಧನರಾದರು. ಆ ಸಿನಿಮಾ ಸಹ ಇನ್ನೂ ಬಿಡುಗಡೆ ಆಗಬೇಕಿದೆ. ಇದೀಗ ಒಂದು ಸರಳ ಪ್ರೇಮ ಕತೆ ಸಿನಿಮಾ ಸೆಟ್ಟೇರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ