AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Rajkumar: ಅಪ್ಪು ಇಷ್ಟಪಟ್ಟಿದ್ದ ಕತೆಗೆ ವಿನಯ್ ರಾಜ್​ಕುಮಾರ್ ನಾಯಕ

ಪುನೀತ್ ರಾಜ್​ಕುಮಾರ್ ಕೇಳಿ ಇಷ್ಟಪಟ್ಟಿದ್ದ ಕತೆಗೆ ಈಗ ವಿನಯ್ ರಾಜ್​ಕುಮಾರ್ ನಾಯಕ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಶುರುವಾಗಿದ್ದು ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರಲಿದೆ.

Vinay Rajkumar: ಅಪ್ಪು ಇಷ್ಟಪಟ್ಟಿದ್ದ ಕತೆಗೆ ವಿನಯ್ ರಾಜ್​ಕುಮಾರ್ ನಾಯಕ
ವಿನಯ್ ರಾಜ್​ಕುಮಾರ್
ಮಂಜುನಾಥ ಸಿ.
|

Updated on: Mar 08, 2023 | 8:27 PM

Share

ಯುವ ರಾಜ್​ಕುಮಾರ್ (Yuva Rajkumar) ಮೊದಲ ಸಿನಿಮಾದ ಮುಹೂರ್ತ ಆದ ಬೆನ್ನಲ್ಲೆ ಅವರ ಸಹೋದರ ವಿನಯ್ ರಾಜ್​ಕುಮಾರ್ (Vinay Rajkumar) ಅವರ ಹೊಸ ಸಿನಿಮಾವೊಂದು ಸೆಟ್ಟೇರಿದೆ. ಪುನೀತ್​ಗಾಗಿ ಸಂತೋಷ್ ಆನಂದ್ ರಾಮ್ ಮಾಡಿದ್ದ ಕತೆಯಲ್ಲಿ ಯುವ ರಾಜ್​ಕುಮಾರ್ ನಟಿಸುತ್ತಿದ್ದರೆ, ಅಪ್ಪುಗಾಗಿ ನಿರ್ದೇಶಕ ಸಿಂಪಲ್ ಸುನಿ (Simple Suni) ಮಾಡಿದ್ದ ಕತೆಯಲ್ಲಿ ಈಗ ವಿನಯ್ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ, ಪುನೀತ್ ರಾಜ್​ಕುಮಾರ್​ಗಾಗಿ ಕತೆಯೊಂದನ್ನು ಮಾಡಿದ್ದರು ಅದು ಪುನೀತ್ ರಾಜ್​ಕುಮಾರ್​ಗೆ ಇಷ್ಟವಾಗಿತ್ತು, ಕತೆಯನ್ನು ಚಿತ್ರಕತೆಯನ್ನಾಗಿ ಬದಲಾಯಿಸುವ ವೇಳೆಗೆ ಅಪ್ಪು ನಿಧನ ಹೊಂದಿದರು. ಈಗ ಅದೇ ಕತೆಯನ್ನು ಒಂದು ಸರಳ ಪ್ರೇಮಕತೆ ಹೆಸರಿನಲ್ಲಿ ತೆರೆಗೆ ತರಲು ಸಿಂಪಲ್ ಸುನಿ ಮುಂದಾಗಿದ್ದು ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ನಾಯಕರಾಗಿ ನಟಿಸುತ್ತಿದ್ದಾರೆ.

ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಇಂದು (ಮಾರ್ಚ್ 08) ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸಿಂಪಲ್ ಸುನಿ ನಿರ್ದೇಶನದ ಸಿಂಪಲ್ ಆಗ್ ಒಂದ್ ಲವ್ ಸ್ಟೋರಿ ಸಿನಿಮಾ ಬಿಡುಗಡೆ ಆಗಿ ಹತ್ತು ವರ್ಷವಾದ ಹಿನ್ನೆಲೆಯಲ್ಲಿ ಒಂದು ಸರಳ ಪ್ರೇಮ ಕತೆ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.

ಈ ಸಿನಿಮಾದ ಕತೆಯನ್ನು ಪುನೀತ್ ರಾಜ್​ಕುಮಾರ್ ಇಷ್ಟಪಟ್ಟಿದ್ದರು. ಮೊದಲು ನಾಲ್ಕು ಸಾಲಲ್ಲಿ ಕತೆ ಹೇಳಿದ್ದೆ ಆಗ ಪುನೀತ್ ರಾಜ್​ಕುಮಾರ್ ಒಪ್ಪಿದ್ದರು ಕತೆಯನ್ನು ಡೆವೆಲಪ್ ಮಾಡಬೇಕಿತ್ತು ಆದರೆ ಅಷ್ಟರಲ್ಲಿ ದುರ್ಘಟನೆ ಸಂಭವಿಸಿತು ಈಗ ಅದೇ ಕತೆಯಲ್ಲಿ ವಿನಯ್ ರಾಜ್​ಕುಮಾರ್ ನಟಿಸುತ್ತಿದ್ದಾರೆ ಎಂದಿದ್ದಾರೆ ನಿರ್ದೇಶಕ ಸಿಂಪಲ್ ಸುನಿ.

ನಟ ವಿನಯ್ ರಾಜ್​ಕುಮಾರ್ ಮಾತನಾಡಿ, ಮೊದಲಿನಿಂದಲೂ ನನಗೆ ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳೆಂದರೆ ಬಹಳ ಇಷ್ಟ. ಇದೂ ಸಹ ಅದೇ ಜಾನರ್​ನ ಸಿನಿಮಾ. ಈ ಸಿನಿಮಾದಲ್ಲಿ ಅತಿಶಯ್ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದೀನಿ. ಸಂಗೀತ ನಿರ್ದೇಶಕ ಆಗುವ ಕನಸು ಹೊತ್ತಿರುವ ಯುವಕನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎಂದರು. ಸಿನಿಮಾದಲ್ಲಿ ಮಲ್ಲಿಕಾ ಹಾಗೂ ಸ್ವಾತಿಷ್ಟಾ ಹೆಸರಿನ ಇಬ್ಬರು ನಾಯಕಿಯರಿದ್ದಾರೆ.

ಸಿಂಪಲ್ ಸುನಿ ಈಗಾಗಲೇ ನಾಲ್ಕು ಸಿನಿಮಾಗಳನ್ನು ನಿರ್ದೇಶನ ಮಾಡುತ್ತಿದ್ದಾರೆ. ರಾಬಿನ್ ಹುಡ್, ಸ್ಟೋರಿ ಆಫ್ ರಾಯಘಡ, ಗತವೈಭವ ಜೊತೆಗೆ ಅವತಾರ ಪುರುಷ 2 ಸಿನಿಮಾವನ್ನು ಘೋಷಿಸಿದ್ದಾರೆ. ಇದರ ನಡುವೆ ಒಂದು ಸರಳ ಪ್ರೇಮಕತೆ ಸಿನಿಮಾ ಸಹ ಪ್ರಾರಂಭಿಸಿದ್ದಾರೆ. ಒಂದರ ಹಿಂದೊಂದು ಸಿನಿಮಾವನ್ನು ಸಿಂಪಲ್ ಸುನಿ ತೆರೆಗೆ ತರಲು ಹೊರಟಿದ್ದಾರೆ.

ಇನ್ನು ನಟ ವಿನಯ್ ರಾಜ್​ಕುಮಾರ್ ಸಹ ಬ್ಯುಸಿ ನಟರೇ ಆಗಿದ್ದಾರೆ. ಅವರ ನಟನೆಯ ಅಂದೊಂದಿತ್ತು ಕಾಲ ಹಾಗೂ ಪೆಪೆ ಸಿನಿಮಾಗಳು ತೆರೆಗೆ ಬರಬೇಕಿದೆ. ಗ್ರಾಮಾಯಣ ಹೆಸರಿನ ಸಿನಿಮಾದ ಶೂಟಿಂಗ್ ಅರ್ಧ ಮುಗಿಸಿದ್ದರು ಆ ವೇಳೆಗೆ ನಿರ್ಮಾಪಕ ನಿಧನರಾದರು. ಆ ಸಿನಿಮಾ ಸಹ ಇನ್ನೂ ಬಿಡುಗಡೆ ಆಗಬೇಕಿದೆ. ಇದೀಗ ಒಂದು ಸರಳ ಪ್ರೇಮ ಕತೆ ಸಿನಿಮಾ ಸೆಟ್ಟೇರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್