AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದ ಸುನಿ; ‘ಅವತಾರ ಪುರುಷ’ ಟೀಸರ್​ನಲ್ಲಿ ಮತ್ತೊಂದು ಮುಖ ಅನಾವರಣ

ಶರಣ್ ಹೀರೋ ಆಗಿ ನಟಿಸಿದ ಎಲ್ಲಾ ಸಿನಿಮಾಗಳಲ್ಲಿ ಕಾಮಿಡಿಯೇ ಹೈಲೈಟ್​. ಸುನಿ ಸಿನಿಮಾದಲ್ಲೂ ಭರಪೂರ ಮನರಂಜನೆ ಇರುತ್ತದೆ. ಈಗ ಇಬ್ಬರೂ ಮೊದಲ ಬಾರಿಗೆ ಒಂದಾಗಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಮನರಂಜನೆ ಸಿಗಲಿದೆ ಎಂಬುದು ಸಿನಿಪ್ರಿಯರ ನಂಬಿಕೆ.

ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದ ಸುನಿ; ‘ಅವತಾರ ಪುರುಷ’ ಟೀಸರ್​ನಲ್ಲಿ ಮತ್ತೊಂದು ಮುಖ ಅನಾವರಣ
ಶರಣ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 22, 2022 | 1:02 PM

Share

ಸಿಂಪಲ್​ ಸುನಿ (Simple Suni) ಸಿನಿಮಾ ಎಂದಾಕ್ಷಣ ನೆನಪಿಗೆ ಬರೋದು ಪಂಚಿಂಗ್​ ಡೈಲಾಗ್​ಗಳು. ಸುನಿ ಸಿನಿಮಾದಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರುವುದಿಲ್ಲ. ಅವರು ಈವರೆಗೆ ಲವ್​ ಸ್ಟೋರಿ, ಫ್ಯಾಮಿಲಿ ಡ್ರಾಮಾ ಮೇಲೆ ಕಥೆ ಹೇಳಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ಗಣೇಶ್ ನಟನೆಯ ‘ಸಖತ್​’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಅವರು ‘ಅವತಾರ ಪುರುಷ’ ಚಿತ್ರವನ್ನು (Avatara Purusha Movie) ಪ್ರೇಕ್ಷಕರ ಎದುರು ಇಡುತ್ತಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ (Pushkara Mallikarjunaiah) ಅವರು ಬಂಡವಾಳ ಹೂಡಿರುವ ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಸುನಿ ಅವರು ಸಾಕಷ್ಟು ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದಿರೋದು ಪಕ್ಕಾ ಆಗಿದೆ.

ಶರಣ್ ಹೀರೋ ಆಗಿ ನಟಿಸಿದ ಎಲ್ಲಾ ಸಿನಿಮಾಗಳಲ್ಲಿ ಕಾಮಿಡಿಯೇ ಹೈಲೈಟ್​. ಸುನಿ ಸಿನಿಮಾದಲ್ಲೂ ಭರಪೂರ ಮನರಂಜನೆ ಇರುತ್ತದೆ. ಈಗ ಇಬ್ಬರೂ ಮೊದಲ ಬಾರಿಗೆ ಒಂದಾಗಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಮನರಂಜನೆ ಸಿಗಲಿದೆ ಎಂಬುದು ಸಿನಿಪ್ರಿಯರ ನಂಬಿಕೆ. ಈಗ ರಿಲೀಸ್ ಆಗಿರುವ ಸಿನಿಮಾದ ಟೀಸರ್ ಚಿತ್ರದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಈ ಮೊದಲು ‘ಅವತಾರ ಪುರುಷ’ ಸಿನಿಮಾ ತಂಡ ಟೀಸರ್​ ಒಂದನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಕಾಮಿಡಿ ದೃಶ್ಯಗಳು ಹೈಲೈಟ್ ಆಗಿತ್ತು. ಈ ಬಾರಿ ರಿಲೀಸ್ ಆಗಿರೋ ಟೀಸರ್​ನಲ್ಲಿ ಮಾಟ-ಮಂತ್ರದ ವಿಚಾರಗಳು ಗಮನ ಸೆಳೆದಿವೆ. ‘ಮಾಟ ಬೇರೆ, ವಾಮಾಚಾರ ಬೇರೆ. ಮಾಟ ಎಂಬುದು ವಾಮಾಚಾರದ ಒಂದು ಭಾಗ ಮಾತ್ರ’ ಎಂಬಿತ್ಯಾದಿ ಡೈಲಾಗ್​ಗಳು ಟೀಸರ್​ನಲ್ಲಿ ಹೈಲೈಟ್​ ಆಗಿದೆ. ಅಲ್ಲಲ್ಲಿ, ಕಾಮಿಡಿ ಡೈಲಾಗ್​ ಕೂಡ ಇದ್ದು, ನೋಡುಗರಿಗೆ ನಗು ತರಿಸುತ್ತದೆ. ಸುನಿ ವಾಮಾಚಾರ ಮತ್ತಿತ್ಯಾದಿ ವಿಚಾರಗಳ ಬಗ್ಗೆ ರಿಸರ್ಚ್​ ನಡೆಸಿ ಈ ಸಿನಿಮಾ ಮಾಡಿದಂತಿದೆ. ಆಶಿಕಾ ಅವರ ಗ್ಲಾಮರ್ ಲುಕ್ ಕೂಡ ಎಲ್ಲರ ಕಣ್ಣು ಕುಕ್ಕಿದೆ.

ಮೇ 6ರಂದು ‘ಅವತಾರ ಪುರುಷ’ ಸಿನಿಮಾ ತೆರೆಗೆ ಬರುತ್ತಿದೆ. ಪುಷ್ಕರ್ ಫಿಲ್ಮ್ಸ್​ ಅಡಿಯಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸುನಿ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್​ ಚಿತ್ರದ ಛಾಯಾಗ್ರಹಣ ಜವಾಬ್ದಾರಿ ಹೊತ್ತಿದ್ದಾರೆ. ಶರಣ್​ಗೆ ಜತೆಯಾಗಿ ಆಶಿಕಾ ರಂಗನಾಥ್​ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲೇ ಸಿನಿಮಾ ತೆರೆಗೆ ಬರಬೇಕಿತ್ತು. ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿತ್ತು.

ಇದನ್ನೂ ಓದಿ: ‘ಚುಟು ಚುಟು’ ಜೋಡಿಯ ‘ಅವತಾರ ಪುರುಷ’; ಸುನಿ-ಪುಷ್ಕರ್​ ಕಟ್ಟಿಕೊಟ್ಟ ಚಿತ್ರದಲ್ಲಿ ಏನೆಲ್ಲ ಇರಲಿದೆ?

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!