ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದ ಸುನಿ; ‘ಅವತಾರ ಪುರುಷ’ ಟೀಸರ್​ನಲ್ಲಿ ಮತ್ತೊಂದು ಮುಖ ಅನಾವರಣ

ಶರಣ್ ಹೀರೋ ಆಗಿ ನಟಿಸಿದ ಎಲ್ಲಾ ಸಿನಿಮಾಗಳಲ್ಲಿ ಕಾಮಿಡಿಯೇ ಹೈಲೈಟ್​. ಸುನಿ ಸಿನಿಮಾದಲ್ಲೂ ಭರಪೂರ ಮನರಂಜನೆ ಇರುತ್ತದೆ. ಈಗ ಇಬ್ಬರೂ ಮೊದಲ ಬಾರಿಗೆ ಒಂದಾಗಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಮನರಂಜನೆ ಸಿಗಲಿದೆ ಎಂಬುದು ಸಿನಿಪ್ರಿಯರ ನಂಬಿಕೆ.

ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದ ಸುನಿ; ‘ಅವತಾರ ಪುರುಷ’ ಟೀಸರ್​ನಲ್ಲಿ ಮತ್ತೊಂದು ಮುಖ ಅನಾವರಣ
ಶರಣ್
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 22, 2022 | 1:02 PM

ಸಿಂಪಲ್​ ಸುನಿ (Simple Suni) ಸಿನಿಮಾ ಎಂದಾಕ್ಷಣ ನೆನಪಿಗೆ ಬರೋದು ಪಂಚಿಂಗ್​ ಡೈಲಾಗ್​ಗಳು. ಸುನಿ ಸಿನಿಮಾದಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರುವುದಿಲ್ಲ. ಅವರು ಈವರೆಗೆ ಲವ್​ ಸ್ಟೋರಿ, ಫ್ಯಾಮಿಲಿ ಡ್ರಾಮಾ ಮೇಲೆ ಕಥೆ ಹೇಳಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ಗಣೇಶ್ ನಟನೆಯ ‘ಸಖತ್​’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಅವರು ‘ಅವತಾರ ಪುರುಷ’ ಚಿತ್ರವನ್ನು (Avatara Purusha Movie) ಪ್ರೇಕ್ಷಕರ ಎದುರು ಇಡುತ್ತಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ (Pushkara Mallikarjunaiah) ಅವರು ಬಂಡವಾಳ ಹೂಡಿರುವ ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಸುನಿ ಅವರು ಸಾಕಷ್ಟು ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದಿರೋದು ಪಕ್ಕಾ ಆಗಿದೆ.

ಶರಣ್ ಹೀರೋ ಆಗಿ ನಟಿಸಿದ ಎಲ್ಲಾ ಸಿನಿಮಾಗಳಲ್ಲಿ ಕಾಮಿಡಿಯೇ ಹೈಲೈಟ್​. ಸುನಿ ಸಿನಿಮಾದಲ್ಲೂ ಭರಪೂರ ಮನರಂಜನೆ ಇರುತ್ತದೆ. ಈಗ ಇಬ್ಬರೂ ಮೊದಲ ಬಾರಿಗೆ ಒಂದಾಗಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಮನರಂಜನೆ ಸಿಗಲಿದೆ ಎಂಬುದು ಸಿನಿಪ್ರಿಯರ ನಂಬಿಕೆ. ಈಗ ರಿಲೀಸ್ ಆಗಿರುವ ಸಿನಿಮಾದ ಟೀಸರ್ ಚಿತ್ರದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಈ ಮೊದಲು ‘ಅವತಾರ ಪುರುಷ’ ಸಿನಿಮಾ ತಂಡ ಟೀಸರ್​ ಒಂದನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಕಾಮಿಡಿ ದೃಶ್ಯಗಳು ಹೈಲೈಟ್ ಆಗಿತ್ತು. ಈ ಬಾರಿ ರಿಲೀಸ್ ಆಗಿರೋ ಟೀಸರ್​ನಲ್ಲಿ ಮಾಟ-ಮಂತ್ರದ ವಿಚಾರಗಳು ಗಮನ ಸೆಳೆದಿವೆ. ‘ಮಾಟ ಬೇರೆ, ವಾಮಾಚಾರ ಬೇರೆ. ಮಾಟ ಎಂಬುದು ವಾಮಾಚಾರದ ಒಂದು ಭಾಗ ಮಾತ್ರ’ ಎಂಬಿತ್ಯಾದಿ ಡೈಲಾಗ್​ಗಳು ಟೀಸರ್​ನಲ್ಲಿ ಹೈಲೈಟ್​ ಆಗಿದೆ. ಅಲ್ಲಲ್ಲಿ, ಕಾಮಿಡಿ ಡೈಲಾಗ್​ ಕೂಡ ಇದ್ದು, ನೋಡುಗರಿಗೆ ನಗು ತರಿಸುತ್ತದೆ. ಸುನಿ ವಾಮಾಚಾರ ಮತ್ತಿತ್ಯಾದಿ ವಿಚಾರಗಳ ಬಗ್ಗೆ ರಿಸರ್ಚ್​ ನಡೆಸಿ ಈ ಸಿನಿಮಾ ಮಾಡಿದಂತಿದೆ. ಆಶಿಕಾ ಅವರ ಗ್ಲಾಮರ್ ಲುಕ್ ಕೂಡ ಎಲ್ಲರ ಕಣ್ಣು ಕುಕ್ಕಿದೆ.

ಮೇ 6ರಂದು ‘ಅವತಾರ ಪುರುಷ’ ಸಿನಿಮಾ ತೆರೆಗೆ ಬರುತ್ತಿದೆ. ಪುಷ್ಕರ್ ಫಿಲ್ಮ್ಸ್​ ಅಡಿಯಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸುನಿ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್​ ಚಿತ್ರದ ಛಾಯಾಗ್ರಹಣ ಜವಾಬ್ದಾರಿ ಹೊತ್ತಿದ್ದಾರೆ. ಶರಣ್​ಗೆ ಜತೆಯಾಗಿ ಆಶಿಕಾ ರಂಗನಾಥ್​ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲೇ ಸಿನಿಮಾ ತೆರೆಗೆ ಬರಬೇಕಿತ್ತು. ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿತ್ತು.

ಇದನ್ನೂ ಓದಿ: ‘ಚುಟು ಚುಟು’ ಜೋಡಿಯ ‘ಅವತಾರ ಪುರುಷ’; ಸುನಿ-ಪುಷ್ಕರ್​ ಕಟ್ಟಿಕೊಟ್ಟ ಚಿತ್ರದಲ್ಲಿ ಏನೆಲ್ಲ ಇರಲಿದೆ?

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ