AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದ ಸುನಿ; ‘ಅವತಾರ ಪುರುಷ’ ಟೀಸರ್​ನಲ್ಲಿ ಮತ್ತೊಂದು ಮುಖ ಅನಾವರಣ

ಶರಣ್ ಹೀರೋ ಆಗಿ ನಟಿಸಿದ ಎಲ್ಲಾ ಸಿನಿಮಾಗಳಲ್ಲಿ ಕಾಮಿಡಿಯೇ ಹೈಲೈಟ್​. ಸುನಿ ಸಿನಿಮಾದಲ್ಲೂ ಭರಪೂರ ಮನರಂಜನೆ ಇರುತ್ತದೆ. ಈಗ ಇಬ್ಬರೂ ಮೊದಲ ಬಾರಿಗೆ ಒಂದಾಗಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಮನರಂಜನೆ ಸಿಗಲಿದೆ ಎಂಬುದು ಸಿನಿಪ್ರಿಯರ ನಂಬಿಕೆ.

ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದ ಸುನಿ; ‘ಅವತಾರ ಪುರುಷ’ ಟೀಸರ್​ನಲ್ಲಿ ಮತ್ತೊಂದು ಮುಖ ಅನಾವರಣ
ಶರಣ್
TV9 Web
| Edited By: |

Updated on: Mar 22, 2022 | 1:02 PM

Share

ಸಿಂಪಲ್​ ಸುನಿ (Simple Suni) ಸಿನಿಮಾ ಎಂದಾಕ್ಷಣ ನೆನಪಿಗೆ ಬರೋದು ಪಂಚಿಂಗ್​ ಡೈಲಾಗ್​ಗಳು. ಸುನಿ ಸಿನಿಮಾದಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರುವುದಿಲ್ಲ. ಅವರು ಈವರೆಗೆ ಲವ್​ ಸ್ಟೋರಿ, ಫ್ಯಾಮಿಲಿ ಡ್ರಾಮಾ ಮೇಲೆ ಕಥೆ ಹೇಳಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ಗಣೇಶ್ ನಟನೆಯ ‘ಸಖತ್​’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಅವರು ‘ಅವತಾರ ಪುರುಷ’ ಚಿತ್ರವನ್ನು (Avatara Purusha Movie) ಪ್ರೇಕ್ಷಕರ ಎದುರು ಇಡುತ್ತಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ (Pushkara Mallikarjunaiah) ಅವರು ಬಂಡವಾಳ ಹೂಡಿರುವ ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಸುನಿ ಅವರು ಸಾಕಷ್ಟು ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದಿರೋದು ಪಕ್ಕಾ ಆಗಿದೆ.

ಶರಣ್ ಹೀರೋ ಆಗಿ ನಟಿಸಿದ ಎಲ್ಲಾ ಸಿನಿಮಾಗಳಲ್ಲಿ ಕಾಮಿಡಿಯೇ ಹೈಲೈಟ್​. ಸುನಿ ಸಿನಿಮಾದಲ್ಲೂ ಭರಪೂರ ಮನರಂಜನೆ ಇರುತ್ತದೆ. ಈಗ ಇಬ್ಬರೂ ಮೊದಲ ಬಾರಿಗೆ ಒಂದಾಗಿದ್ದಾರೆ. ಈ ಕಾರಣಕ್ಕೆ ಸಾಕಷ್ಟು ಮನರಂಜನೆ ಸಿಗಲಿದೆ ಎಂಬುದು ಸಿನಿಪ್ರಿಯರ ನಂಬಿಕೆ. ಈಗ ರಿಲೀಸ್ ಆಗಿರುವ ಸಿನಿಮಾದ ಟೀಸರ್ ಚಿತ್ರದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಈ ಮೊದಲು ‘ಅವತಾರ ಪುರುಷ’ ಸಿನಿಮಾ ತಂಡ ಟೀಸರ್​ ಒಂದನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಕಾಮಿಡಿ ದೃಶ್ಯಗಳು ಹೈಲೈಟ್ ಆಗಿತ್ತು. ಈ ಬಾರಿ ರಿಲೀಸ್ ಆಗಿರೋ ಟೀಸರ್​ನಲ್ಲಿ ಮಾಟ-ಮಂತ್ರದ ವಿಚಾರಗಳು ಗಮನ ಸೆಳೆದಿವೆ. ‘ಮಾಟ ಬೇರೆ, ವಾಮಾಚಾರ ಬೇರೆ. ಮಾಟ ಎಂಬುದು ವಾಮಾಚಾರದ ಒಂದು ಭಾಗ ಮಾತ್ರ’ ಎಂಬಿತ್ಯಾದಿ ಡೈಲಾಗ್​ಗಳು ಟೀಸರ್​ನಲ್ಲಿ ಹೈಲೈಟ್​ ಆಗಿದೆ. ಅಲ್ಲಲ್ಲಿ, ಕಾಮಿಡಿ ಡೈಲಾಗ್​ ಕೂಡ ಇದ್ದು, ನೋಡುಗರಿಗೆ ನಗು ತರಿಸುತ್ತದೆ. ಸುನಿ ವಾಮಾಚಾರ ಮತ್ತಿತ್ಯಾದಿ ವಿಚಾರಗಳ ಬಗ್ಗೆ ರಿಸರ್ಚ್​ ನಡೆಸಿ ಈ ಸಿನಿಮಾ ಮಾಡಿದಂತಿದೆ. ಆಶಿಕಾ ಅವರ ಗ್ಲಾಮರ್ ಲುಕ್ ಕೂಡ ಎಲ್ಲರ ಕಣ್ಣು ಕುಕ್ಕಿದೆ.

ಮೇ 6ರಂದು ‘ಅವತಾರ ಪುರುಷ’ ಸಿನಿಮಾ ತೆರೆಗೆ ಬರುತ್ತಿದೆ. ಪುಷ್ಕರ್ ಫಿಲ್ಮ್ಸ್​ ಅಡಿಯಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸುನಿ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್​ ಚಿತ್ರದ ಛಾಯಾಗ್ರಹಣ ಜವಾಬ್ದಾರಿ ಹೊತ್ತಿದ್ದಾರೆ. ಶರಣ್​ಗೆ ಜತೆಯಾಗಿ ಆಶಿಕಾ ರಂಗನಾಥ್​ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲೇ ಸಿನಿಮಾ ತೆರೆಗೆ ಬರಬೇಕಿತ್ತು. ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿತ್ತು.

ಇದನ್ನೂ ಓದಿ: ‘ಚುಟು ಚುಟು’ ಜೋಡಿಯ ‘ಅವತಾರ ಪುರುಷ’; ಸುನಿ-ಪುಷ್ಕರ್​ ಕಟ್ಟಿಕೊಟ್ಟ ಚಿತ್ರದಲ್ಲಿ ಏನೆಲ್ಲ ಇರಲಿದೆ?

Sharan: ‘ಅವತಾರ ಪುರುಷ’ ರಿಲೀಸ್​ಗೆ ಮುಹೂರ್ತ ಫಿಕ್ಸ್; ಸಾವು- ಬದುಕು ನಡುವಿನ ಕೊನೆಯ ಆಸರೆ ಈ ಸಿನಿಮಾ ಎಂದ ಪುಷ್ಕರ್

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ