AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಪಾತ್​ ಗುಂಡಿಗೆ ಬಿದ್ದು ಖ್ಯಾತ ಗಾಯಕ ಅಜಯ್​ ವಾರಿಯರ್​ಗೆ ಗಾಯ; ಬಿಬಿಎಂಪಿ ವಿರುದ್ಧ ಅಸಮಾಧಾನ

Singer Ajay Warrier: ಗಾಯಕ ಅಜಯ್​ ವಾರಿಯರ್ ಅವರು ಬೆಂಗಳೂರಿನ ಫುಟ್​ಪಾತ್​ ಗುಂಡಿಗೆ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷದಿಂದ ಈ ಅವಘಡ ಆಗಿದೆ.

ಫುಟ್​ಪಾತ್​ ಗುಂಡಿಗೆ ಬಿದ್ದು ಖ್ಯಾತ ಗಾಯಕ ಅಜಯ್​ ವಾರಿಯರ್​ಗೆ ಗಾಯ; ಬಿಬಿಎಂಪಿ ವಿರುದ್ಧ ಅಸಮಾಧಾನ
ಅಜಯ್ ವಾರಿಯರ್
TV9 Web
| Edited By: |

Updated on:May 11, 2022 | 10:18 AM

Share

ಜೋರಾಗಿ ಮಳೆ ಬಂದರೆ ಬೆಂಗಳೂರಿನ ಸ್ವರೂಪವೇ ಬದಲಾಗಿಬಿಡುತ್ತದೆ. ಅನೇಕ ರಸ್ತೆಗಳು ಜನರ ಜೀವ ಬಲಿ ಪಡೆಯುವ ಅಪಾಯಕಾರಿ ಸ್ಥಳಗಳಾಗುತ್ತವೆ. ಕಂಡಕಂಡಲ್ಲಿ ಎದುರಾಗುವ ಗುಂಡಿಗಳಿಂದ ತೊಂದರೆಗೆ ಒಳಗಾದವರ ಸಂಖ್ಯೆ ದೊಡ್ಡದಿದೆ. ಕನ್ನಡದ ಖ್ಯಾತ ಗಾಯಕ ಅಜಯ್ ವಾರಿಯರ್​ ಅವರು ಕೂಡ ಇದೇ ರೀತಿ ಈಗ ತೊಂದರೆಗೆ ಸಿಲುಕಿದ್ದಾರೆ. ಬೆಂಗಳೂರಿನಲ್ಲಿ ಡ್ರೈನ್​ ಹೋಲ್​ಗೆ ಬಿದ್ದಿರುವ ಅವರು ಪೆಟ್ಟು ಮಾಡಿಕೊಂಡಿದ್ದಾರೆ. ಬಿಬಿಎಂಪಿ (BBMP) ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೇಕ ಕಡೆಗಳಲ್ಲಿ ಫುಟ್​ಪಾತ್​ಗಳು ಓಪನ್​ ಆಗಿವೆ. ಮಳೆ ಬಂದಾಗ ನೀರು ತುಂಬಿಕೊಂಡರೆ ಈ ಫುಟ್​ಪಾತ್​ ಗುಂಡಿಗಳು ಕಾಣಿಸುವುದೇ ಇಲ್ಲ. ಫುಟ್​ಪಾತ್​ ಮೇಲೆ ನಡೆದುಹೋಗುವವರಿಗೆ ಇದರಿಂದ ಅಪಾಯ ಗ್ಯಾರಂಟಿ. ಗಾಯಕ ಅಜಯ್​ ವಾರಿಯರ್ (Singer Ajay Warrier) ಅವರು ಈ ಬಗ್ಗೆ ಫೇಸ್​ಬುಕ್​ ಮೂಲಕ ಘಟನೆಯ ವಿವರ ನೀಡಿದ್ದಾರೆ. ಭಾನುವಾರ (ಮೇ 8) ಸುರಿದ ಭಾರಿ ಮಳೆಯಿಂದ (Bengaluru Rain) ಆದ ಅನಾಹುತವನ್ನು ಅವರು ಜನರಿಗೆ ತಿಳಿಸಿದ್ದಾರೆ. ಬೆಂಗಳೂರಿನ ಫುಟ್​ಪಾತ್​ಗಳ ದುಸ್ಥಿತಿಯನ್ನು ಅವರು ಫೋಟೋಗಳ ಸಮೇತ ವಿವರಿಸಿದ್ದಾರೆ. ಡ್ರೇನ್​ ಹೋಲ್​ಗೆ ಬಿದ್ದ ಅವರ ಕಾಲಿಗೆ ಗಾಯ ಆಗಿದೆ. ಅಪಾಯಕಾರಿ ಘಟನೆಯಿಂದ ಅವರು ಪಾರಾಗಿದ್ದಾರೆ ಎಂಬುದಷ್ಟೇ ಸಮಾಧಾನ.

‘ಬೆಂಗಳೂರಿನಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿತ್ತು. ಕೇರಳಕ್ಕೆ ತೆರಳಬೇಕಿದ್ದ ನಾನು ರೈಲ್ವೇ ನಿಲ್ದಾಣದ ಕಡೆಗೆ ಹೊರಟಿದ್ದೆ. ಮಗಳಿಗೆ ಹುಟ್ಟುಹಬ್ಬದ ದಿನ ಸರ್ಪ್ರೈಸ್​ ನೀಡಲು ಪ್ಲ್ಯಾನ್​ ಮಾಡಿದ್ದೆ. ಓಲಾ/ಉಬರ್​ ಇಲ್ಲದ ಕಾರಣ ಮುಖ್ಯ ರಸ್ತೆಯ ಕಡೆಗೆ ನಡೆದುಹೋಗಲು ನಿರ್ಧರಿಸಿದೆ. ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ನಾನು ಫುಟ್​ಪಾತ್​ ಮೇಲೆ ಹೋದೆ. ಕೆಲವೇ ಹೆಜ್ಜೆ ನಡೆದು ಸಾಗಿದ ಬಳಿಕ ನಿಯಂತ್ರಣ ತಪ್ಪಿ, ಗುಂಡಿ ಒಳಗೆ ಬಿದ್ದೆ. ಏನೆಂದು ತಿಳಿಯುವುದರೊಳಗೆ ಚರಂಡಿ ಹೋಲ್​ ಒಳಗೆ ಹೋದೆ. ನನ್ನ ಎದೆಮಟ್ಟದ ವರೆಗೂ ನೀರು ಇತ್ತು. ನಾನು ಹೇಗೋ ಬಚಾವ್​ ಆದೆ. ಆದರೆ ಕಾಲಿಗೆ ಪೆಟ್ಟಾಗಿದೆ’ ಎಂದು ಅಜಯ್​ ವಾರಿಯರ್ ಬರೆದುಕೊಂಡಿದ್ದಾರೆ.

‘ಫುಟ್​ಪಾತ್​ ಗುಂಡಿ ಮುಚ್ಚದೇ ಇರುವ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾನು ಕಾಲಿಗೆ ಹೊಲಿಗೆ ಹಾಕಿಸಿಕೊಳ್ಳಬೇಕಾಯಿತು. ಅನೇಕ ಮ್ಯೂಸಿಕ್​ ಕಾರ್ಯಕ್ರಮಗಳನ್ನು ಬಿಡಬೇಕಾಯಿತು. ಇದಕ್ಕೆಲ್ಲ ಯಾರನ್ನು ದೂಷಿಸುವುದು? ನನ್ನನ್ನೇ! ಯಾಕೆಂದರೆ ನಾನು ಫುಟ್​ಪಾತ್​ನಲ್ಲಿ ನಡೆಯುವ ಬದಲು ರಸ್ತೆಯಲ್ಲಿ ನಿಂತಿದ್ದ ನೀರಿನಲ್ಲಿ ಈಜಿಕೊಂಡ ಹೋಗಬೇಕಿತ್ತು. ಅಧಿಕಾರಿಗಳಿಗೆ ಧನ್ಯವಾದಗಳು. ಜನರ ಹಿತದೃಷ್ಟಿಯಿಂದ ಈ ಸಂದೇಶವನ್ನು ನಾನು ನೀಡುತ್ತಿದ್ದೇನೆ. ಫುಟ್​ಪಾತ್​ ಗುಂಡಿಗಳನ್ನು ಮುಚ್ಚದಿರುವ ಕಾರಣ ಈ ರೀತಿ ಯಾರಿಗೆ ಬೇಕಾದರೂ ಅಪಾಯ ಆಗಬಹುದು. ಚಿಕ್ಕ ಮಕ್ಕಳು ಈ ರೀತಿ ಬಿದ್ದರೆ ಏನು ಗತಿ? ನಾನು ಕಾನೂನು ಪಾಲಿಸುವ ಮತ್ತು ತೆರಿಗೆ ಕಟ್ಟುವ ಬೆಂಗಳೂರಿನ ಪ್ರಜೆ. ಈ ನಗರದ ಜನರಿಗೆ ಸುರಕ್ಷಿತವಾದ ರಸ್ತೆ ಮತ್ತು ಫುಟ್​ಪಾತ್​ಗಳನ್ನು ನೀಡಿ ಎಂದು ಒತ್ತಾಯಿಸಿ ಬಿಬಿಎಂಬಿ ಅಧಿಕಾರಿಗಳಿಗೆ ಇದು ನನ್ನ ಬಹಿರಂಗ ಪತ್ರ. ಕಾಳಜಿ ವಹಿಸಿಕೊಳ್ಳಿ ಬೆಂಗಳೂರಿಗರೇ.. ನಮ್ಮ ಪ್ರಾಣ ಕೂಡ ಮುಖ್ಯ’ ಎಂದು ಅಜಯ್​ ವಾರಿಯರ್​​ ಅವರು ಫೇಸ್​ಬುಕ್​ನಲ್ಲಿ ಪೋಸ್ಟ್​​ ಮಾಡಿದ್ದಾರೆ.

ಇದನ್ನೂ ಓದಿ
Image
ಕಿರುತೆರೆ ನಟಿ ಸುನೇತ್ರಾ ಅಪಘಾತಕ್ಕೆ ಒಳಗಾದ ಘಟನೆಯ ಸಿಸಿಟಿವಿ ದೃಶ್ಯ ಇಲ್ಲಿದೆ
Image
ರಸ್ತೆ ಅಪಘಾತದ ಬಳಿಕ ಸುನೇತ್ರಾ ಪಂಡಿತ್​ ಆರೋಗ್ಯ ಸ್ಥಿತಿ ಹೇಗಿದೆ? ಮಾಹಿತಿ ಹಂಚಿಕೊಂಡ ಪುತ್ರಿ ಶ್ರೇಯಾ
Image
ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮತ್ತೊಂದು ಜೀವ ಬಲಿ; ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ
Image
ಬೆಂಗಳೂರು: ರಸ್ತೆ ಗುಂಡಿಯಲ್ಲಿ ಬಿಬಿಎಂಪಿ ಪ್ರತಿಕೃತಿ ಮುಚ್ಚಿ ಅಂತ್ಯಕ್ರಿಯೆ ಮಾಡಿದ ಪ್ರತಿಭಟನಾಕಾರರು; ಪಾಲಿಕೆ ವಿರುದ್ಧ ಆಕ್ರೋಶ

ಮೇ 7ರಂದು ರಾತ್ರಿ ಕಿರುತೆರೆ ನಟಿ ಸುನೇತ್ರಾ ಪಂಡಿತ್​ ಅವರು ಕೂಡ ಬೆಂಗಳೂರಿನ ರಸ್ತೆ ಗುಂಡಿಯಿಂದಾಗಿ ಅಪಘಾತಕ್ಕೆ ಒಳಗಾದರು. ಎನ್​.ಆರ್​. ಕಾಲೋನಿಯಲ್ಲಿ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಈ ರೀತಿಯ ಘಟನೆಗಳು ಪದೇಪದೇ ಮರುಕಳಿಸುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:18 am, Wed, 11 May 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!