AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಮಯದಲ್ಲಿ 15 ಲಕ್ಷ ರೂ. ಗಳಿಕೆ, ಸಹ ಕಲಾವಿದರ ನೆರವಿಗೆ ಪಣತೊಟ್ಟ ಗಾಯಕ

ಚೆನ್ನೈ: ಕೊರೊನಾ ಮಹಾಮರಿಯ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿದ ಲಾಕ್​​ಡೌನ್​ನಿಂದ ದೇಶದ ಎಲ್ಲಾ ಚಿತ್ರರಂಗಗಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದವು. ಕೇವಲ ನಟರಲ್ಲದೆ ಇತರೆ ಕಲಾವಿದರು ಮತ್ತು ತಂತ್ರಜ್ಞರು ಸಹ ಈ ವೇಳೆಯಲ್ಲಿ ಆದಾಯವಿಲ್ಲದೆ ಬಳಲಿ ಬೆಂಡಾಗಿ ಹೋದರು. ಇದರಲ್ಲಿ ತಮಿಳುನಾಡಿನ ಕಾಲಿವುಡ್ ಚಿತ್ರರಂಗದ ಕಲಾವಿದರು ಕೂಡ ಒಬ್ಬರು. ಸಹ ಗಾಯಕರ ನೆರವಿಗೆ ನಿಂತ ಸತ್ಯನ್​ ಮಹಾಲಿಂಗಂ ಆದರೆ, ಇಂಥ ಸಮಯದಲ್ಲಿ ಧೃತಿಗೆಡದೆ, ಕಾಲಿವುಡ್​ನ ಖ್ಯಾತ ಹಿನ್ನೆಲೆ ಗಾಯಕನೊಬ್ಬ ತನ್ನ ಸಹ ಗಾಯಕರ ನೆರವಿಗೆ ಮುಂದಾಗಿದ್ದಾರೆ. ಸೋಷಿಯಲ್​ […]

ಲಾಕ್​ಡೌನ್​ ಸಮಯದಲ್ಲಿ 15 ಲಕ್ಷ ರೂ. ಗಳಿಕೆ, ಸಹ ಕಲಾವಿದರ ನೆರವಿಗೆ ಪಣತೊಟ್ಟ ಗಾಯಕ
KUSHAL V
| Edited By: |

Updated on: Jun 28, 2020 | 2:17 PM

Share

ಚೆನ್ನೈ: ಕೊರೊನಾ ಮಹಾಮರಿಯ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿದ ಲಾಕ್​​ಡೌನ್​ನಿಂದ ದೇಶದ ಎಲ್ಲಾ ಚಿತ್ರರಂಗಗಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದವು. ಕೇವಲ ನಟರಲ್ಲದೆ ಇತರೆ ಕಲಾವಿದರು ಮತ್ತು ತಂತ್ರಜ್ಞರು ಸಹ ಈ ವೇಳೆಯಲ್ಲಿ ಆದಾಯವಿಲ್ಲದೆ ಬಳಲಿ ಬೆಂಡಾಗಿ ಹೋದರು. ಇದರಲ್ಲಿ ತಮಿಳುನಾಡಿನ ಕಾಲಿವುಡ್ ಚಿತ್ರರಂಗದ ಕಲಾವಿದರು ಕೂಡ ಒಬ್ಬರು.

ಸಹ ಗಾಯಕರ ನೆರವಿಗೆ ನಿಂತ ಸತ್ಯನ್​ ಮಹಾಲಿಂಗಂ ಆದರೆ, ಇಂಥ ಸಮಯದಲ್ಲಿ ಧೃತಿಗೆಡದೆ, ಕಾಲಿವುಡ್​ನ ಖ್ಯಾತ ಹಿನ್ನೆಲೆ ಗಾಯಕನೊಬ್ಬ ತನ್ನ ಸಹ ಗಾಯಕರ ನೆರವಿಗೆ ಮುಂದಾಗಿದ್ದಾರೆ. ಸೋಷಿಯಲ್​ ಮೀಡಿಯಾವನ್ನ ಅಸ್ತ್ರವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯ ಆಧಾರದ ಮೇಲೆ ಕಳೆದ 64ದಿನಗಳಲ್ಲಿ ಬರೋಬ್ಬರಿ 15 ಲಕ್ಷ ರೂಪಾಯಿಗಳನ್ನು ಸಂಪಾದಿಸಿದ್ದಾರೆ. ಇವರು ಬೇರೆ ಯಾರು ಅಲ್ಲ ಚೆನ್ನೈ ಮೂಲದ ಸತ್ಯನ್​ ಮಹಾಲಿಂಗಂ.

ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂನಲ್ಲಿ ‘ಸತ್ಯನ್​ ಉತ್ಸವ’ ಎಂಬ ಹೆಸರಿನ ಲೈವ್ ಕಾರ್ಯಕ್ರಮದ ಮೂಲಕ ಸತತವಾಗಿ ಹಾಡುಗಳನ್ನ ಹಾಡಿದ ಸತ್ಯನ್ ಅದರಲ್ಲಿ ಬಂದ ಹಣವನ್ನ ತಮ್ಮ ಸಹ ಗಾಯಕರಿಗೆ ನೀಡಿದ್ದಾರೆ. ‘ಮ್ಯೂಸಿಕ್​ ಫಾರ್​ ಮ್ಯುಸಿಶಿಯನ್ಸ್​ ’ ಎಂಬ ಯೋಜನೆ ಅಡಿಯಲ್ಲಿ ಇಂಡಸ್ಟ್ರಿಯ ಇತರರ ಸಹಾಯಕ್ಕೆ ಮುಂದಾಗಿದ್ದಾರೆ. ಗಾಯಕರ ಸಂಕಷ್ಟಗಳನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಹಾಗಾಗಿ ಅವರಿಗೆ ಸಹಾಯ ಮಾಡಲು ಮುಂದಾಗಿದ್ದೇನೆ ಎಂದು ಹೇಳಿರುವ ಸತ್ಯನ್​ ಕಳೆದ ಮೇ 30ರಂದು 25 ಗಂಟೆಗಳ ಕಾಲ ನಿರಂತರವಾಗಿ ಹಾಡುತ್ತಾ ಆರ್ಕೆಸ್ಟ್ರಾ ಗಾಯಕರ ನೆರವಿಗೆ ಮುಂದಾಗಿದ್ದರು.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್