AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಟೇಕ್​ನಲ್ಲಿ ನಿರ್ಮಾಣ ಆಯ್ತು ‘ಯಂಗ್​ ಮ್ಯಾನ್​’ ಸಿನಿಮಾ; ಜೂನ್​ 7ಕ್ಕೆ ಬಿಡುಗಡೆ

‘ಯಂಗ್​ ಮ್ಯಾನ್​’ ಸಿನಿಮಾಗೆ ಮುತ್ತುರಾಜ್ ಅವರು ನಿರ್ದೇಶನ ಮಾಡಿದ್ದಾರೆ. ವಿಜಯಲಕ್ಷ್ಮಿ ರಾಮೇಗೌಡ ಅವರು ಬಂಡವಾಳ ಹೂಡಿದ್ದಾರೆ.‌ ಸುನೀಲ್ ಗೌಡ, ಹರೀಶ್ ಆಚಾರ್ಯ, ರಾಶಿಕಾ ಕರಾವಳಿ, ಶ್ರುತಿ ಗೌಡ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಸಿಂಗಲ್​ ಟೇಕ್​ನಲ್ಲಿ ಮೂಡಿಬಂದ ಈ ಸಿನಿಮಾ ಜೂನ್ 7ರಂದು ರಿಲೀಸ್​ ಆಗಲಿದೆ.

ಒಂದೇ ಟೇಕ್​ನಲ್ಲಿ ನಿರ್ಮಾಣ ಆಯ್ತು ‘ಯಂಗ್​ ಮ್ಯಾನ್​’ ಸಿನಿಮಾ; ಜೂನ್​ 7ಕ್ಕೆ ಬಿಡುಗಡೆ
ಯಂಗ್​ ಮ್ಯಾನ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 03, 2024 | 3:48 PM

Share

ಚಿತ್ರರಂಗದಲ್ಲಿ ಒಂದಿಲ್ಲೊಂದು ಪ್ರಯೋಗಗಳು ಆಗುತ್ತಲೇ ಇರುತ್ತವೆ. ಏನಾದರೂ ಡಿಫರೆಂಟ್​ ಆಗಿ ಮಾಡಬೇಕು ಎಂಬ ತವಕದಲ್ಲಿ ಸಿನಿಮಾ ಮಂದಿ ಇರುತ್ತಾರೆ. ಈ ಮೊದಲು ಕನ್ನಡ ಚಿತ್ರರಂಗದಲ್ಲಿ (Sandalwood) ಶಂಕರ್ ನಾಗ್ ಅಭಿನಯದ ‘ಇದು ಸಾಧ್ಯ’ ಸಿನಿಮಾ (Kannada Cinema) ಕೇವಲ 36 ಗಂಟೆಯಲ್ಲಿ ಚಿತ್ರೀಕರಣ ಮುಗಿಸಿ ದಾಖಲೆ ಬರೆದಿತ್ತು. ಎಸ್. ನಾರಾಯಣ್ ಅವರ ನಿರ್ದೇಶನದಲ್ಲಿ ಬಂದ ‘ದಕ್ಷ’ ಸಿನಿಮಾವನ್ನು ಸಿಂಗಲ್​ ಟೇಕ್​ನಲ್ಲಿ ಚಿತ್ರಿಸಲಾಗಿತ್ತು. ಈಗ ಅದೇ ರೀತಿ ಕನ್ನಡ ಚಿತ್ರರಂಗದಲ್ಲಿ ಇನ್ನೊಂದು ಸಿಂಗಲ್​ ಟೇಕ್​ (Single Take) ಪ್ರಯತ್ನ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಹೊಸಬರ ‘ಯಂಗ್ ಮ್ಯಾನ್’ ಸಿನಿಮಾ ಕೂಡ ಸಿಂಗಲ್​ ಟೇಕ್​ನಲ್ಲಿ ಚಿತ್ರಿತವಾಗಿದೆ. ಉತ್ಸಾಹಿ ತಂಡದವರು ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಜೂನ್ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅಷ್ಟಕ್ಕೂ ಈ ಸಿನಿಮಾ ತಂಡದವರು ಒಂದೇ ಟೇಕ್​ನಲ್ಲಿ ಶೂಟಿಂಗ್​ ಮಾಡಲು ಕಾರಣ ಏನು? ಸಿನಿಮಾದ ಕಹಾನಿ ಏನು ಎಂಬುದನ್ನು ಚಿತ್ರಮಂದಿರದಲ್ಲಿಯೇ ನೋಡಿ ತಿಳಿಯಬೇಕು.

‘ಯಂಗ್​ ಮ್ಯಾನ್​’ ಸಿನಿಮಾಗೆ ಮುತ್ತುರಾಜ್ ಅವರು ನಿರ್ದೇಶನ ಮಾಡಿದ್ದಾರೆ. ವಿಜಯಲಕ್ಷ್ಮಿ ರಾಮೇಗೌಡ ಅವರು ಬಂಡವಾಳ ಹೂಡಿದ್ದಾರೆ.‌ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಆಗಿ ಮುರಳಿ ಎಸ್.ವೈ. ಅವರು ಕೆಲಸ ಮಾಡಿದ್ದಾರೆ. ಲೋಕಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಗರಾಜ್ ವೀನಸ್ ಮೂರ್ತಿ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಡಿಎಸ್​ಕೆ ಸಿನಿಮಾಸ್​ ಸಂಸ್ಥೆಯ ಮುಖ್ಯಸ್ಥರಾದ ಸುನಿಲ್ ಕುಂಬಾರ್ ಅವರು ‘ಯಂಗ್​ ಮ್ಯಾನ್’ ಸಿನಿಮಾವನ್ನು​ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ದೇಶಪ್ರೇಮದ ಕುರಿತಾದ ಕಥಾಹಂದರ ಇರಲಿದೆ. ಸುನೀಲ್ ಗೌಡ, ಹರೀಶ್ ಆಚಾರ್ಯ, ರಾಶಿಕಾ ಕರಾವಳಿ, ಶ್ರುತಿ ಗೌಡ, ಆನಂದ್​ ಕುಮಾರ್, ಋಷಿ ಅನಿತಾ, ನಯನಾ ಪುಟ್ಡಸ್ವಾಮಿ, ತನುಜಾ, ಜಯರಾಮ್, ಅನುಕುಮಾರ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!