AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಟೇಕ್​ನಲ್ಲಿ ನಿರ್ಮಾಣ ಆಯ್ತು ‘ಯಂಗ್​ ಮ್ಯಾನ್​’ ಸಿನಿಮಾ; ಜೂನ್​ 7ಕ್ಕೆ ಬಿಡುಗಡೆ

‘ಯಂಗ್​ ಮ್ಯಾನ್​’ ಸಿನಿಮಾಗೆ ಮುತ್ತುರಾಜ್ ಅವರು ನಿರ್ದೇಶನ ಮಾಡಿದ್ದಾರೆ. ವಿಜಯಲಕ್ಷ್ಮಿ ರಾಮೇಗೌಡ ಅವರು ಬಂಡವಾಳ ಹೂಡಿದ್ದಾರೆ.‌ ಸುನೀಲ್ ಗೌಡ, ಹರೀಶ್ ಆಚಾರ್ಯ, ರಾಶಿಕಾ ಕರಾವಳಿ, ಶ್ರುತಿ ಗೌಡ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಸಿಂಗಲ್​ ಟೇಕ್​ನಲ್ಲಿ ಮೂಡಿಬಂದ ಈ ಸಿನಿಮಾ ಜೂನ್ 7ರಂದು ರಿಲೀಸ್​ ಆಗಲಿದೆ.

ಒಂದೇ ಟೇಕ್​ನಲ್ಲಿ ನಿರ್ಮಾಣ ಆಯ್ತು ‘ಯಂಗ್​ ಮ್ಯಾನ್​’ ಸಿನಿಮಾ; ಜೂನ್​ 7ಕ್ಕೆ ಬಿಡುಗಡೆ
ಯಂಗ್​ ಮ್ಯಾನ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 03, 2024 | 3:48 PM

Share

ಚಿತ್ರರಂಗದಲ್ಲಿ ಒಂದಿಲ್ಲೊಂದು ಪ್ರಯೋಗಗಳು ಆಗುತ್ತಲೇ ಇರುತ್ತವೆ. ಏನಾದರೂ ಡಿಫರೆಂಟ್​ ಆಗಿ ಮಾಡಬೇಕು ಎಂಬ ತವಕದಲ್ಲಿ ಸಿನಿಮಾ ಮಂದಿ ಇರುತ್ತಾರೆ. ಈ ಮೊದಲು ಕನ್ನಡ ಚಿತ್ರರಂಗದಲ್ಲಿ (Sandalwood) ಶಂಕರ್ ನಾಗ್ ಅಭಿನಯದ ‘ಇದು ಸಾಧ್ಯ’ ಸಿನಿಮಾ (Kannada Cinema) ಕೇವಲ 36 ಗಂಟೆಯಲ್ಲಿ ಚಿತ್ರೀಕರಣ ಮುಗಿಸಿ ದಾಖಲೆ ಬರೆದಿತ್ತು. ಎಸ್. ನಾರಾಯಣ್ ಅವರ ನಿರ್ದೇಶನದಲ್ಲಿ ಬಂದ ‘ದಕ್ಷ’ ಸಿನಿಮಾವನ್ನು ಸಿಂಗಲ್​ ಟೇಕ್​ನಲ್ಲಿ ಚಿತ್ರಿಸಲಾಗಿತ್ತು. ಈಗ ಅದೇ ರೀತಿ ಕನ್ನಡ ಚಿತ್ರರಂಗದಲ್ಲಿ ಇನ್ನೊಂದು ಸಿಂಗಲ್​ ಟೇಕ್​ (Single Take) ಪ್ರಯತ್ನ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಹೊಸಬರ ‘ಯಂಗ್ ಮ್ಯಾನ್’ ಸಿನಿಮಾ ಕೂಡ ಸಿಂಗಲ್​ ಟೇಕ್​ನಲ್ಲಿ ಚಿತ್ರಿತವಾಗಿದೆ. ಉತ್ಸಾಹಿ ತಂಡದವರು ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ. ಜೂನ್ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅಷ್ಟಕ್ಕೂ ಈ ಸಿನಿಮಾ ತಂಡದವರು ಒಂದೇ ಟೇಕ್​ನಲ್ಲಿ ಶೂಟಿಂಗ್​ ಮಾಡಲು ಕಾರಣ ಏನು? ಸಿನಿಮಾದ ಕಹಾನಿ ಏನು ಎಂಬುದನ್ನು ಚಿತ್ರಮಂದಿರದಲ್ಲಿಯೇ ನೋಡಿ ತಿಳಿಯಬೇಕು.

‘ಯಂಗ್​ ಮ್ಯಾನ್​’ ಸಿನಿಮಾಗೆ ಮುತ್ತುರಾಜ್ ಅವರು ನಿರ್ದೇಶನ ಮಾಡಿದ್ದಾರೆ. ವಿಜಯಲಕ್ಷ್ಮಿ ರಾಮೇಗೌಡ ಅವರು ಬಂಡವಾಳ ಹೂಡಿದ್ದಾರೆ.‌ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಆಗಿ ಮುರಳಿ ಎಸ್.ವೈ. ಅವರು ಕೆಲಸ ಮಾಡಿದ್ದಾರೆ. ಲೋಕಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಗರಾಜ್ ವೀನಸ್ ಮೂರ್ತಿ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಡಿಎಸ್​ಕೆ ಸಿನಿಮಾಸ್​ ಸಂಸ್ಥೆಯ ಮುಖ್ಯಸ್ಥರಾದ ಸುನಿಲ್ ಕುಂಬಾರ್ ಅವರು ‘ಯಂಗ್​ ಮ್ಯಾನ್’ ಸಿನಿಮಾವನ್ನು​ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ದೇಶಪ್ರೇಮದ ಕುರಿತಾದ ಕಥಾಹಂದರ ಇರಲಿದೆ. ಸುನೀಲ್ ಗೌಡ, ಹರೀಶ್ ಆಚಾರ್ಯ, ರಾಶಿಕಾ ಕರಾವಳಿ, ಶ್ರುತಿ ಗೌಡ, ಆನಂದ್​ ಕುಮಾರ್, ಋಷಿ ಅನಿತಾ, ನಯನಾ ಪುಟ್ಡಸ್ವಾಮಿ, ತನುಜಾ, ಜಯರಾಮ್, ಅನುಕುಮಾರ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ