AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಾಸ್ಟೆಲ್ ಹುಡುಗರ’ ಮೆಚ್ಚಿದ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

Hostel Hudugaru Bekagiddare: 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾವನ್ನು ತಮಿಳಿನ ಸ್ಟಾರ್ ನಟರೊಬ್ಬರು ರೀಮೇಕ್ ಮಾಡಲಿದ್ದಾರೆ.

‘ಹಾಸ್ಟೆಲ್ ಹುಡುಗರ’ ಮೆಚ್ಚಿದ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್
Hostel Hudugaru Bekagidare
ಮಂಜುನಾಥ ಸಿ.
|

Updated on:Mar 19, 2026 | 9:04 PM

Share

ಕನ್ನಡದಲ್ಲಿ ಸಾಕಷ್ಟು ಹೊಸ ತಂಡಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಬಂದಿವೆ. ಕೆಲವರಿಗೆ ಯಶಸ್ಸು ಸಿಕ್ಕಿದೆ, ಕೆಲವರಿಗೆ ಇಲ್ಲ. 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (hostel hudugaru bekagiddare) ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾವನ್ನು ತಮಿಳಿನ ಸ್ಟಾರ್ ನಟರೊಬ್ಬರು ರೀಮೇಕ್ ಮಾಡಲಿದ್ದಾರೆ.

ತಮಿಳಿನ ಹೊಸ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಶಿವಕಾರ್ತಿಕೇಯನ್ ಅವರು ಕನ್ನಡದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ರೀಮೇಕ್​​ನಲ್ಲಿ ನಟಿಸಲಿದ್ದಾರೆ. ಮಾತ್ರವಲ್ಲದೆ ಸಿನಿಮಾವನ್ನು ತಮ್ಮದೇ ಸ್ವಂತ ಬ್ಯಾನರ್ ಆಗಿರುವ ‘ಶಿವಕಾರ್ತಿಕೇಯನ್ ಪ್ರೊಡಕ್ಷನ್ಸ್’ ಅಡಿಯಲ್ಲಿ ನಿರ್ಮಾಣ ಮಾಡಲು ಸಹ ಆಸಕ್ತಿ ತೋರಿಸಿದ್ದಾರೆ ಎಂದು ಪಿಂಕ್ವಿಲ್ಲಾ ವರದಿ ಮಾಡಿದೆ. ಶಿವಕಾರ್ತಿಕೇಯನ್ ಅವರು ಈ ಚಿತ್ರದಲ್ಲಿ ನಟಿಸುತ್ತಾರೆಯೇ ಅಥವಾ ಕೇವಲ ನಿರ್ಮಾಣಕ್ಕೆ ಸೀಮಿತವಾಗುತ್ತಾರೆಯೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೆ, ಚಿತ್ರದ ವಿಶಿಷ್ಟ ಕಥಾಹಂದರ ಅವರಿಗೆ ತುಂಬಾ ಇಷ್ಟವಾಗಿದೆ ಎಂದು ಹೇಳಲಾಗುತ್ತಿದೆ.

ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ‘ಹೋಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ 2023ರಲ್ಲಿ ಬಿಡುಗಡೆ ಆಗಿತ್ತು. ಹೊಸ ಹುಡುಗರ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಭರ್ಜರಿ ರೆಸ್ಪಾನ್ಸ್ ನೀಡಿದ್ದರು. ಕೇವಲ ಒಂದು ರಾತ್ರಿಯಲ್ಲಿ ನಡೆಯುವ ಕಥೆ, ವಿಭಿನ್ನ ಮೇಕಿಂಗ್ ಶೈಲಿ ಮತ್ತು ಭಿನ್ನ ರೀತಿಯ ಕಾಮಿಡಿಯಿಂದಾಗಿ ಪ್ರೇಕ್ಷಕರ ಮನ ಗೆದ್ದಿತ್ತು. ರಿಷಬ್ ಶೆಟ್ಟಿ, ಪವನ್ ಕುಮಾರ್ ಮತ್ತು ದಿಗಂತ್ ಅವರುಗಳು ಸಿನಿಮಾದ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಹಿಟ್ ಆಗಿತ್ತು.

ಇದನ್ನೂ ಓದಿ:‘ಬೃಂದಾವಿಹಾರಿ’ ಆದ ಗೋಲ್ಡನ್ ಸ್ಟಾರ್ ಗಣೇಶ್; ಹೊಸ ಸಿನಿಮಾ ಟೈಟಲ್ ಅನೌನ್ಸ್

ಶಿವಕಾರ್ತಿಕೇಯನ್ ಮೊದಲಿನಿಂದಲೂ ಕುಟುಂಬ ವರ್ಗಕ್ಕೆ ಇಷ್ಟವಾಗುವಂತಹ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಾ ಬಂದಿದ್ದಾರೆ. ‘ಹೋಸ್ಟೆಲ್ ಹುಡುಗರು’ ಕೌಟುಂಬಿಕ ಅಲ್ಲದೇ ಹೋದರೂ ಯುವಕರಿಗೆ ಹಿಡಿಸುವ ಹಾಗೂ ಹಾಸ್ಯಮಯ ಸಿನಿಮಾ ಆಗಿರುವ ಕಾರಣ, ಸಿನಿಮಾದ ರೀಮೇಕ್ ಬಗ್ಗೆ ಶಿವಕಾರ್ತಿಕೇಯನ್ ಆಸಕ್ತಿ ತೋರಿಸಿದ್ದಾರೆ. ಅಲ್ಲದೆ ಹಾಸ್ಟೆಲ್ ಜೀವನದ ಕತೆ ಆಗಿರುವ ಕಾರಣ ದೊಡ್ಡ ಮಟ್ಟದ ರೀಚ್ ಸಿನಿಮಾಕ್ಕೆ ಸಿಗಲಿದೆ ಎಂಬ ನಂಬಿಕೆ ಅವರಿಗಿದೆ ಎನ್ನಲಾಗುತ್ತಿದೆ.

ಕನ್ನಡದಲ್ಲಿ ಬಹುತೇಕ ಹೊಸ ಕಲಾವಿದರೇ ಈ ಚಿತ್ರದಲ್ಲಿದ್ದರು. ಅದೇ ಮಾದರಿಯನ್ನು ತಮಿಳಿನಲ್ಲೂ ಅನುಸರಿಸುವ ಸಾಧ್ಯತೆ ಇದೆ. ಶಿವಕಾರ್ತಿಕೇಯನ್ ಅವರು ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಈ ಸಿನಿಮಾವನ್ನು ಬಳಸಿಕೊಳ್ಳಬಹುದು. ಸ್ವತಃ ಶಿವಕಾರ್ತಿಕೇಯನ್ ಸಹ ಹೊರಗಿನವರಾಗಿ ಚಿತ್ರರಂಗಕ್ಕೆ ಬಂದವರು. ಅವರಂತೆಯೇ ಸಿನಿಮಾ ರಂಗದ ಹಿನ್ನೆಲೆ ಇಲ್ಲದವರನ್ನು ಬೆಳೆಸಲು ನಿರ್ಮಾಣ ಸಂಸ್ಥೆ ಪ್ರಾರಂಭಿಸಿದ್ದಾರೆ. ಹಾಗಾಗಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡಲಿದ್ದಾರೆ.

ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾ ಜನವರಿಯಲ್ಲಿ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತು. ಅದಾದ ಬಳಿಕ ಇದೀಗ ಅವರು ‘ಸಿಯಾನ್’ ಹೆಸರಿನ ಸಿನಿಮಾನಲ್ಲಿ ನಟಿಸಲಿದ್ದಾರೆ. ಸಿನಿಮಾ ಅನ್ನು ಶಿವಕುಮಾರ್ ಮುರುಗೇಶನ್ ನಿರ್ದೇಶಿಸುತ್ತಿದ್ದು, ಕಮಲ್ ಹಾಸನ್ ನಿರ್ಮಾಣ ಮಾಡಲಿದ್ದಾರೆ. ಸಂತೋಶ್ ನಾರಾಯಣ್ ಸಂಗೀತ ಸಿನಿಮಾಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Thu, 19 March 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ