AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಸಾರ್ಥಕತೆ: ಕಣ್ಣುಗಳನ್ನು ದಾನ ಮಾಡಿದ ನಿರ್ದೇಶಕ ಎಸ್​ಕೆ ಭಗವಾನ್; ನಾಲ್ಕು ಜನಕ್ಕೆ ದೃಷ್ಟಿ

ರಾಜ್​ಕುಮಾರ್ ಅವರು ನೇತ್ರದಾನ ಮಾಡಲು ನೋಂದಣಿ ಮಾಡಿಸಿದ ಸಂದರ್ಭದಲ್ಲೇ ಎಸ್​.ಕೆ ಭಗವಾನ್ ಕೂಡ ತಮ್ಮ ಹೆಸರನ್ನು ನೋಂದಾಯಿಸಿದ್ದರು.

ಸಾವಿನಲ್ಲೂ ಸಾರ್ಥಕತೆ: ಕಣ್ಣುಗಳನ್ನು ದಾನ ಮಾಡಿದ ನಿರ್ದೇಶಕ ಎಸ್​ಕೆ ಭಗವಾನ್; ನಾಲ್ಕು ಜನಕ್ಕೆ ದೃಷ್ಟಿ
ಎಸ್​ಕೆ ಭಗವಾನ್
ರಾಜೇಶ್ ದುಗ್ಗುಮನೆ
|

Updated on:Feb 20, 2023 | 11:45 AM

Share

ಡಾ.ರಾಜ್​ಕುಮಾರ್ (Rajkumar) ಅವರು ನೇತ್ರದಾನ ಮಾಡಿದ್ದರು. ಈ ಮೂಲಕ ಅವರ ಅಭಿಮಾನಿಗಳಿಗೆ ಮಾದರಿ ಆಗಿದ್ದರು. ರಾಜ್​ಕುಮಾರ್ ಅವರಿಂದ ಸ್ಫೂರ್ತಿ ಪಡೆದ ಅನೇಕರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ರಾಜ್​ಕುಮಾರ್ ಜೊತೆ ಕೆಲಸ ಮಾಡಿದ್ದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (SK Bagavan) ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ಮೂರ್ನಾಲ್ಕು ಜನರಿಗೆ ದೃಷ್ಟಿ ಬರಲಿದೆ.

ರಾಜ್​ಕುಮಾರ್ ಅವರು ನೇತ್ರದಾನ ಮಾಡಲು ನೋಂದಣಿ ಮಾಡಿಸಿದ ಸಂದರ್ಭದಲ್ಲೇ ಎಸ್​.ಕೆ ಭಗವಾನ್ ಕೂಡ ತಮ್ಮ ಹೆಸರನ್ನು ನೋಂದಾಯಿಸಿದ್ದರು. ಇಂದು (ಫೆ.20) ಅವರ ಮರಣಾ ನಂತರ ಕಣ್ಣಿನ ಕಾರ್ನಿಯಾವನ್ನು ತೆಗೆಯಲಾಗಿದೆ. ಇದರಿಂದ 3 ರಿಂದ 4 ಜನಕ್ಕೆ ದೃಷ್ಟಿ ಬರಲಿದೆ.

‘ಆಸ್ಪತ್ರೆಗೆ ಭೇಟಿ ಮಾಡಿದ್ದಾಗ ನೇತ್ರದಾನ ಮಾಡೋದಾಗಿ ಭಗವಾನ್ ಹೇಳಿದ್ದರು. ಅಣ್ಣಾವ್ರು ಕಣ್ಣುಗಳನ್ನು ದಾನ ಮಾಡಲು ರಿಜಿಸ್ಟರ್ ಮಾಡಿದಾಗಲೇ ಇವರು ಕೂಡ ಹೆಸರು ನೋಂದಣಿ ಮಾಡಿದ್ದರು. 90 ವರ್ಷ ವಯಸ್ಸಾದರೂ ಅವರ ಕಾರ್ನಿಯ ಆರೋಗ್ಯವಾಗಿದೆ. ಅವರ ಕಣ್ಣು ಯಾರಿಗೆ ಸೂಕ್ತವಾಗುತ್ತದೆ ಎಂಬುದನ್ನು ನೋಡಿ ಹಾಕುತ್ತೇವೆ ಎಂದು’ ನಾರಾಯಣ ನೇತ್ರಾಲಯದ ಐ ಬ್ಯಾಂಕ್ ಮ್ಯಾನೇಜರ್ ವೀರೇಶ್ ಹೇಳಿಕೆ ನೀಡಿದ್ದಾರೆ. ಭಗವಾನ್ ಅವರಿಗೆ 90 ವರ್ಷ ಆಗಿತ್ತು. ಆದರೂ ಅವರ ಕಣ್ಣುಗಳಿಗೆ ಯಾವುದೇ ಸಮಸ್ಯೆ ಆಗಿರಲಿಲ್ಲ. ಅವರಿಂದ ನಾಲ್ಕೈದು ಜನರಿಗೆ ದೃಷ್ಟಿ ಸಿಗಲಿದೆ.

ಇದನ್ನೂ ಓದಿ
Image
SK Bhagavan: ಎಸ್​ಕೆ ಭಗವಾನ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಸಂತಾಪ
Image
SK Bhagavan Obituary: ಬಾಂಡ್ ಸಿನಿಮಾಗಳನ್ನು ಕನ್ನಡಕ್ಕೆ ಪರಿಚಯಿಸಿದ್ದ ದೊರೈ-ಭಗವಾನ್
Image
SK Bhagavan: ಚಿತ್ರರಂಗದಲ್ಲಿ ಮುಗಿಯಿತು ಭಗವಾನ್ ಅಧ್ಯಾಯ; ಖ್ಯಾತ ನಿರ್ದೇಶಕ ನಿಧನ

ಇದನ್ನೂ ಓದಿ:  ಕನ್ನಡದಲ್ಲಿ ಮೊಟ್ಟಮೊದಲ ಬಾಂಡ್ ಶೈಲಿ ಸಿನಿಮಾ ತಯಾರಿಸಿದ ದೊರೆ-ಭಗವಾನ್ ಜೋಡಿಯ ಭಗವಾನ್ ಇನ್ನಿಲ್ಲ

ಕಾದಂಬರಿ ಆಧಾರಿತ ಸಿನಿಮಾಗಳನ್ನು ದೊರೈ-ಭಗವಾನ್ ಮಾಡುತ್ತಿದ್ದರು. ತರಾಸು ಅವರ ಸಾಕಷ್ಟು ಕಾದಂಬರಿಗಳನ್ನು ದೊರೈ-ಭಗವಾನ್ ಬೆಳ್ಳಿಪರದೆಗೆ ತಂದಿದ್ದಾರೆ. ಎರಡು ಕನಸು, ಗಿರಿ ಕನ್ಯೆ, ವಸಂತ ಗೀತ, ಗಾಳಿ ಮಾತು, ಬೆಂಕಿಯ ಬಲೆ ಮೊದಲಾದ ಸಿನಿಮಾಗಳು ದೊರೈ ಭಗವಾನ್ ನಿರ್ದೇಶನದಲ್ಲಿ ಮೂಡಿ ಬಂದವು. 1995ರಲ್ಲಿ ಬಂದ ‘ಬಾಳೊಂದು ಚದುರಂಗ’ ಸಿನಿಮಾ ದೊರೈ-ಭಗವಾನ್ ಕಾಂಬಿನೇಷನ್​ನ ಕೊನೆಯ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Mon, 20 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್