AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ

ರಾಜ್​ಕುಮಾರ್ ಅವರನ್ನು ಅಪರಹರಣ ಮಾಡಿದ್ದು ಕಾಡುಗಳ್ಳ ವೀರಪ್ಪನ್. ಇದು ಆ ಸಂದರ್ಭದಲ್ಲಿ ದೊಡ್ಡ ಸುದ್ದಿ ಆಗಿತ್ತು. ಖ್ಯಾತ ನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರವಾಗಿ ಮುಜುಗರ ತಂದಿತ್ತು.

ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ
ಕೃಷ್ಣ-ರಾಜ್​ಕುಮಾರ್-ಖರ್ಗೆ (ಚಿತ್ರ ಕೃಪೆ: Deccan Herald)
ರಾಜೇಶ್ ದುಗ್ಗುಮನೆ
|

Updated on: Dec 10, 2024 | 6:52 AM

Share

ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ರಾಜಕೀಯ ವಲಯ ಶೋಕ ವ್ಯಕ್ತಪಡಿಸಿದೆ. ಕನ್ನಡದ ವರನಟ ಡಾ. ರಾಜ್​ಕುಮಾರ್ ಅವರು ಬಂಧನಕ್ಕೆ ಒಳಗಾದಾಗ ಎಸ್​ಎಂ ಕೃಷ್ಣ ಅವರೇ ರಾಜ್ಯದ ಸಿಎಂ ಆಗಿದ್ದರು. ಅವರು ಕಾಡಲ್ಲಿ ಇದ್ದಷ್ಟೂ ದಿನ ಸರಿಯಾಗಿ ನಿದ್ದೆ ಮಾಡದೆ ಕೃಷ್ಣ ಅವರು ಒದ್ದಾಡಿದ್ದರು. ಆ ಬಗ್ಗೆ ಅವರು ಈ ಮೊದಲು ಮಾಹಿತಿ ಹಂಚಿಕೊಂಡಿದ್ದರು.

ರಾಜ್​ಕುಮಾರ್ ಅವರನ್ನು ಅಪರಹರಣ ಮಾಡಿದ್ದು ಕಾಡುಗಳ್ಳ ವೀರಪ್ಪನ್. ಇದು ಆ ಸಂದರ್ಭದಲ್ಲಿ ದೊಡ್ಡ ಸುದ್ದಿ ಆಗಿತ್ತು. ಖ್ಯಾತ ನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರವಾಗಿ ಮುಜುಗರ ತಂದಿತ್ತು. ಅವರು ಮರಳದಿದ್ದರೆ ಮುಂದೇನು ಎನ್ನುವ ಭಯ ಎಸ್​ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. 108 ದಿನ ಅವರು ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದರು. ರಾಜ್​ಕುಮಾರ್ ಮರಳಿದ ಬಳಿಕ ಕೃಷ್ಣ ನಿಟ್ಟುಸಿರು ಬಿಟ್ಟರು.

ರಾಜ್​ಕುಮಾರ್ ಅವರ ಅಭಿಮಾನಿ ಬಳಗ ದೊಡ್ಡದಿದೆ. ಕೃಷ್ಣ ಅವರು ಕೂಡ ಅಣ್ಣಾವ್ರ ಅಭಿಮಾನಿ. ಅವರಿಗೆ ಏನಾದರೂ ಆದರೆ ಅಭಿಮಾನಿಗಳು ಸುಮ್ಮನೆ ಇರುವುದಿಲ್ಲ ಎಂಬುದು ಕೃಷ್ಣ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ಇನ್ನು ಬೆಂಗಳೂರಲ್ಲಿ ತಮಿಳಿಗರ ಸಂಖ್ಯೆ ಕೂಡ ದೊಡ್ಡದಿದೆ. ರಾಜ್​ಕುಮಾರ್​ಗೆ ಹಾನಿ ಆದರೆ ಬೆಂಗಳೂರಲ್ಲಿ ಕನ್ನಡಿಗರು ಹಾಗೂ ತಮಿಳಿಗರ ಮಧ್ಯೆ ಗಲಭೆ ಆದರೆ ಎನ್ನುವ ಭಯ ಕಾಡಿತ್ತು.

ಇದನ್ನೂ ಓದಿ: ಎಸ್​ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

ರಾಜ್​ಕುಮಾರ್ ಸುಮಾರು 108 ದಿನ ಕಾಡಿನಲ್ಲಿ ಇದ್ದರು. ಬಂಧನಕ್ಕೆ ಒಳಗಾದ ವಿಚಾರವನ್ನು ಪಾರ್ವತಮ್ಮ ಅವರು ಕೃಷ್ಣಗೆ ಹೇಳಿದ್ದರು. ಆ ಸಂದರ್ಭದಲ್ಲಿ ಪಾರ್ವತಮ್ಮ ಮೈಸೂರಿನಲ್ಲಿ ಇದ್ದರು. ನಂತರ ಪಾರ್ವತಮ್ಮ ಅವರು ಬೆಂಗಳೂರಿಗೆ ಬಂದು ಮಾಹಿತಿ ನೀಡಿದರು. ನಂತರ ನಿರಂತರ ಪ್ರಯತ್ನದಿಂದ ಅವರನ್ನು ಕರೆದುಕೊಂಡು ಬರಲಾಯಿತು. ಆ ಬಳಿಕ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿತ್ತು. ರಾಜ್​ಕುಮಾರ್ ಅವರನ್ನು ಕರೆತರಲು ಕೃಷ್ಣ ಅವರು ಸಾಕಷ್ಟು ಶ್ರಮ ಹಾಕಿದ್ದರು. ತಮಿಳುನಾಡಿಗೆ ತೆರಳಿ ಅಲ್ಲಿನ ನಾಯಕರಾದ ಜಯಲಲಿತಾ, ಕರುಣಾನಿಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಪದೇ ಪದೇ ಒತ್ತಾಯ ಮಾಡುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ