AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ

ರಾಜ್​ಕುಮಾರ್ ಅವರನ್ನು ಅಪರಹರಣ ಮಾಡಿದ್ದು ಕಾಡುಗಳ್ಳ ವೀರಪ್ಪನ್. ಇದು ಆ ಸಂದರ್ಭದಲ್ಲಿ ದೊಡ್ಡ ಸುದ್ದಿ ಆಗಿತ್ತು. ಖ್ಯಾತ ನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರವಾಗಿ ಮುಜುಗರ ತಂದಿತ್ತು.

ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ
ಕೃಷ್ಣ-ರಾಜ್​ಕುಮಾರ್-ಖರ್ಗೆ (ಚಿತ್ರ ಕೃಪೆ: Deccan Herald)
ರಾಜೇಶ್ ದುಗ್ಗುಮನೆ
|

Updated on: Dec 10, 2024 | 6:52 AM

Share

ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ರಾಜಕೀಯ ವಲಯ ಶೋಕ ವ್ಯಕ್ತಪಡಿಸಿದೆ. ಕನ್ನಡದ ವರನಟ ಡಾ. ರಾಜ್​ಕುಮಾರ್ ಅವರು ಬಂಧನಕ್ಕೆ ಒಳಗಾದಾಗ ಎಸ್​ಎಂ ಕೃಷ್ಣ ಅವರೇ ರಾಜ್ಯದ ಸಿಎಂ ಆಗಿದ್ದರು. ಅವರು ಕಾಡಲ್ಲಿ ಇದ್ದಷ್ಟೂ ದಿನ ಸರಿಯಾಗಿ ನಿದ್ದೆ ಮಾಡದೆ ಕೃಷ್ಣ ಅವರು ಒದ್ದಾಡಿದ್ದರು. ಆ ಬಗ್ಗೆ ಅವರು ಈ ಮೊದಲು ಮಾಹಿತಿ ಹಂಚಿಕೊಂಡಿದ್ದರು.

ರಾಜ್​ಕುಮಾರ್ ಅವರನ್ನು ಅಪರಹರಣ ಮಾಡಿದ್ದು ಕಾಡುಗಳ್ಳ ವೀರಪ್ಪನ್. ಇದು ಆ ಸಂದರ್ಭದಲ್ಲಿ ದೊಡ್ಡ ಸುದ್ದಿ ಆಗಿತ್ತು. ಖ್ಯಾತ ನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರವಾಗಿ ಮುಜುಗರ ತಂದಿತ್ತು. ಅವರು ಮರಳದಿದ್ದರೆ ಮುಂದೇನು ಎನ್ನುವ ಭಯ ಎಸ್​ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. 108 ದಿನ ಅವರು ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದರು. ರಾಜ್​ಕುಮಾರ್ ಮರಳಿದ ಬಳಿಕ ಕೃಷ್ಣ ನಿಟ್ಟುಸಿರು ಬಿಟ್ಟರು.

ರಾಜ್​ಕುಮಾರ್ ಅವರ ಅಭಿಮಾನಿ ಬಳಗ ದೊಡ್ಡದಿದೆ. ಕೃಷ್ಣ ಅವರು ಕೂಡ ಅಣ್ಣಾವ್ರ ಅಭಿಮಾನಿ. ಅವರಿಗೆ ಏನಾದರೂ ಆದರೆ ಅಭಿಮಾನಿಗಳು ಸುಮ್ಮನೆ ಇರುವುದಿಲ್ಲ ಎಂಬುದು ಕೃಷ್ಣ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ಇನ್ನು ಬೆಂಗಳೂರಲ್ಲಿ ತಮಿಳಿಗರ ಸಂಖ್ಯೆ ಕೂಡ ದೊಡ್ಡದಿದೆ. ರಾಜ್​ಕುಮಾರ್​ಗೆ ಹಾನಿ ಆದರೆ ಬೆಂಗಳೂರಲ್ಲಿ ಕನ್ನಡಿಗರು ಹಾಗೂ ತಮಿಳಿಗರ ಮಧ್ಯೆ ಗಲಭೆ ಆದರೆ ಎನ್ನುವ ಭಯ ಕಾಡಿತ್ತು.

ಇದನ್ನೂ ಓದಿ: ಎಸ್​ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

ರಾಜ್​ಕುಮಾರ್ ಸುಮಾರು 108 ದಿನ ಕಾಡಿನಲ್ಲಿ ಇದ್ದರು. ಬಂಧನಕ್ಕೆ ಒಳಗಾದ ವಿಚಾರವನ್ನು ಪಾರ್ವತಮ್ಮ ಅವರು ಕೃಷ್ಣಗೆ ಹೇಳಿದ್ದರು. ಆ ಸಂದರ್ಭದಲ್ಲಿ ಪಾರ್ವತಮ್ಮ ಮೈಸೂರಿನಲ್ಲಿ ಇದ್ದರು. ನಂತರ ಪಾರ್ವತಮ್ಮ ಅವರು ಬೆಂಗಳೂರಿಗೆ ಬಂದು ಮಾಹಿತಿ ನೀಡಿದರು. ನಂತರ ನಿರಂತರ ಪ್ರಯತ್ನದಿಂದ ಅವರನ್ನು ಕರೆದುಕೊಂಡು ಬರಲಾಯಿತು. ಆ ಬಳಿಕ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿತ್ತು. ರಾಜ್​ಕುಮಾರ್ ಅವರನ್ನು ಕರೆತರಲು ಕೃಷ್ಣ ಅವರು ಸಾಕಷ್ಟು ಶ್ರಮ ಹಾಕಿದ್ದರು. ತಮಿಳುನಾಡಿಗೆ ತೆರಳಿ ಅಲ್ಲಿನ ನಾಯಕರಾದ ಜಯಲಲಿತಾ, ಕರುಣಾನಿಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಪದೇ ಪದೇ ಒತ್ತಾಯ ಮಾಡುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!