AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ

ರಾಜ್​ಕುಮಾರ್ ಅವರನ್ನು ಅಪರಹರಣ ಮಾಡಿದ್ದು ಕಾಡುಗಳ್ಳ ವೀರಪ್ಪನ್. ಇದು ಆ ಸಂದರ್ಭದಲ್ಲಿ ದೊಡ್ಡ ಸುದ್ದಿ ಆಗಿತ್ತು. ಖ್ಯಾತ ನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರವಾಗಿ ಮುಜುಗರ ತಂದಿತ್ತು.

ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ
ಕೃಷ್ಣ-ರಾಜ್​ಕುಮಾರ್-ಖರ್ಗೆ (ಚಿತ್ರ ಕೃಪೆ: Deccan Herald)
ರಾಜೇಶ್ ದುಗ್ಗುಮನೆ
|

Updated on: Dec 10, 2024 | 6:52 AM

Share

ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ರಾಜಕೀಯ ವಲಯ ಶೋಕ ವ್ಯಕ್ತಪಡಿಸಿದೆ. ಕನ್ನಡದ ವರನಟ ಡಾ. ರಾಜ್​ಕುಮಾರ್ ಅವರು ಬಂಧನಕ್ಕೆ ಒಳಗಾದಾಗ ಎಸ್​ಎಂ ಕೃಷ್ಣ ಅವರೇ ರಾಜ್ಯದ ಸಿಎಂ ಆಗಿದ್ದರು. ಅವರು ಕಾಡಲ್ಲಿ ಇದ್ದಷ್ಟೂ ದಿನ ಸರಿಯಾಗಿ ನಿದ್ದೆ ಮಾಡದೆ ಕೃಷ್ಣ ಅವರು ಒದ್ದಾಡಿದ್ದರು. ಆ ಬಗ್ಗೆ ಅವರು ಈ ಮೊದಲು ಮಾಹಿತಿ ಹಂಚಿಕೊಂಡಿದ್ದರು.

ರಾಜ್​ಕುಮಾರ್ ಅವರನ್ನು ಅಪರಹರಣ ಮಾಡಿದ್ದು ಕಾಡುಗಳ್ಳ ವೀರಪ್ಪನ್. ಇದು ಆ ಸಂದರ್ಭದಲ್ಲಿ ದೊಡ್ಡ ಸುದ್ದಿ ಆಗಿತ್ತು. ಖ್ಯಾತ ನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರವಾಗಿ ಮುಜುಗರ ತಂದಿತ್ತು. ಅವರು ಮರಳದಿದ್ದರೆ ಮುಂದೇನು ಎನ್ನುವ ಭಯ ಎಸ್​ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. 108 ದಿನ ಅವರು ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದರು. ರಾಜ್​ಕುಮಾರ್ ಮರಳಿದ ಬಳಿಕ ಕೃಷ್ಣ ನಿಟ್ಟುಸಿರು ಬಿಟ್ಟರು.

ರಾಜ್​ಕುಮಾರ್ ಅವರ ಅಭಿಮಾನಿ ಬಳಗ ದೊಡ್ಡದಿದೆ. ಕೃಷ್ಣ ಅವರು ಕೂಡ ಅಣ್ಣಾವ್ರ ಅಭಿಮಾನಿ. ಅವರಿಗೆ ಏನಾದರೂ ಆದರೆ ಅಭಿಮಾನಿಗಳು ಸುಮ್ಮನೆ ಇರುವುದಿಲ್ಲ ಎಂಬುದು ಕೃಷ್ಣ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ಇನ್ನು ಬೆಂಗಳೂರಲ್ಲಿ ತಮಿಳಿಗರ ಸಂಖ್ಯೆ ಕೂಡ ದೊಡ್ಡದಿದೆ. ರಾಜ್​ಕುಮಾರ್​ಗೆ ಹಾನಿ ಆದರೆ ಬೆಂಗಳೂರಲ್ಲಿ ಕನ್ನಡಿಗರು ಹಾಗೂ ತಮಿಳಿಗರ ಮಧ್ಯೆ ಗಲಭೆ ಆದರೆ ಎನ್ನುವ ಭಯ ಕಾಡಿತ್ತು.

ಇದನ್ನೂ ಓದಿ: ಎಸ್​ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

ರಾಜ್​ಕುಮಾರ್ ಸುಮಾರು 108 ದಿನ ಕಾಡಿನಲ್ಲಿ ಇದ್ದರು. ಬಂಧನಕ್ಕೆ ಒಳಗಾದ ವಿಚಾರವನ್ನು ಪಾರ್ವತಮ್ಮ ಅವರು ಕೃಷ್ಣಗೆ ಹೇಳಿದ್ದರು. ಆ ಸಂದರ್ಭದಲ್ಲಿ ಪಾರ್ವತಮ್ಮ ಮೈಸೂರಿನಲ್ಲಿ ಇದ್ದರು. ನಂತರ ಪಾರ್ವತಮ್ಮ ಅವರು ಬೆಂಗಳೂರಿಗೆ ಬಂದು ಮಾಹಿತಿ ನೀಡಿದರು. ನಂತರ ನಿರಂತರ ಪ್ರಯತ್ನದಿಂದ ಅವರನ್ನು ಕರೆದುಕೊಂಡು ಬರಲಾಯಿತು. ಆ ಬಳಿಕ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿತ್ತು. ರಾಜ್​ಕುಮಾರ್ ಅವರನ್ನು ಕರೆತರಲು ಕೃಷ್ಣ ಅವರು ಸಾಕಷ್ಟು ಶ್ರಮ ಹಾಕಿದ್ದರು. ತಮಿಳುನಾಡಿಗೆ ತೆರಳಿ ಅಲ್ಲಿನ ನಾಯಕರಾದ ಜಯಲಲಿತಾ, ಕರುಣಾನಿಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಪದೇ ಪದೇ ಒತ್ತಾಯ ಮಾಡುತ್ತಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!