AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಪುನೀತ್ ಮಾಮ ನೆನಪಾಗುತ್ತಿದ್ದಾರೆ’; ಅಪ್ಪುಗಾಗಿ ಕಣ್ಣೀರು ಹಾಕಿದ ಪುಟ್ಟ ಅಭಿಮಾನಿ, ವಿಡಿಯೋ ವೈರಲ್​

ಕಾರ್ಕಳ ಕಲ್ಯದ ಐದು ವರ್ಷದ ದಕ್ಷ್ ಎಂಬ ಬಾಲಕ ಪುನೀತ್​ ಅವರ ದೊಡ್ಡ ಅಭಿಮಾನಿ. ಚಿಕ್ಕಂದಿನಿಂದಲೂ ಪುನೀತ್​ ಚಿತ್ರಗಳನ್ನು ಆತ ತಪ್ಪದೇ ನೋಡುತ್ತಿದ್ದ. ಆದರೆ, ಈಗ ಪುನೀತ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರ ಅರಗಿಸಿಕೊಳ್ಳೋಕೆ ಆತನಿಗೆ ಆಗುತ್ತಿಲ್ಲ.

‘ನನಗೆ ಪುನೀತ್ ಮಾಮ ನೆನಪಾಗುತ್ತಿದ್ದಾರೆ’; ಅಪ್ಪುಗಾಗಿ ಕಣ್ಣೀರು ಹಾಕಿದ ಪುಟ್ಟ ಅಭಿಮಾನಿ, ವಿಡಿಯೋ ವೈರಲ್​
ಬಾಲಕ ಮತ್ತು ಪುನೀತ್​
TV9 Web
| Edited By: |

Updated on:Oct 30, 2021 | 4:01 PM

Share

ಪುನೀತ್ ರಾಜ್​ಕುಮಾರ್​ ಅವರನ್ನು ಕಂಡರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ? ಫ್ಯಾಮಿಲಿ ಆಡಿಯನ್ಸ್​ ಸಿನಿಮಾ ಮೂಲಕ ಪುನೀತ್​ ಹೆಚ್ಚು ಗುರುತಿಸಿಕೊಂಡಿದ್ದಾರೆ. ಚಿಕ್ಕವರಿಂದ ಹಿಡಿದು ವಯಸ್ಸಾದ ವ್ಯಕ್ತಿಗಳಿಗೂ ಪುನೀತ್​ ಇಷ್ಟವಾಗುತ್ತಾರೆ. ಸಿನಿಮಾಗಳ ಜತೆಗೆ ಅವರು ಮಾಡಿದ ಸಾಮಾಜಿಕ ಕೆಲಸಗಳು ಕೂಡ ಎಲ್ಲರ ಗಮನ ಸೆಳೆದಿದೆ. ಈ ಕಾರಣಕ್ಕೆ ಅವರನ್ನು ಕಳೆದುಕೊಂಡಿದ್ದು ಇಡೀ ಚಿತ್ರರಂಗಕ್ಕೆ ಸಿಡಿಲು ಬಡಿದಂತಾಗಿದೆ. ಈ ಮಧ್ಯೆ ಪುನೀತ್​ಗಾಗಿ ಪುಟ್ಟ ಅಭಿಮಾನಿಯೋರ್ವ ಕಣ್ಣೀರು ಹಾಕಿದ್ದಾನೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾರ್ಕಳ ಕಲ್ಯದ ಐದು ವರ್ಷದ ದಕ್ಷ್ ಎಂಬ ಬಾಲಕ ಪುನೀತ್​ ಅವರ ದೊಡ್ಡ ಅಭಿಮಾನಿ. ಚಿಕ್ಕಂದಿನಿಂದಲೂ ಪುನೀತ್​ ಚಿತ್ರಗಳನ್ನು ಆತ ತಪ್ಪದೇ ನೋಡುತ್ತಿದ್ದ. ಆದರೆ, ಈಗ ಪುನೀತ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರ ಅರಗಿಸಿಕೊಳ್ಳೋಕೆ ಆತನಿಗೆ ಆಗುತ್ತಿಲ್ಲ. ಈ ಕಾರಣಕ್ಕೆ ದಕ್ಷ್​ ಒಂದೇ ಸಮನೆ ಅಳುತ್ತಿದ್ದಾನೆ.

ಮಗು ಮತ್ತು ಆತನ ತಾಯಿ ತುಳುವಿನಲ್ಲಿ  ಸಂಭಾಷಣೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ‘ನನಗೆ ಪುನೀತ್ ಮಾಮ ನೆನಪಾಗುತ್ತಿದ್ದಾರೆ. ನನಗೆ ಅವರನ್ನು ಮರೆಯಲು ಆಗುತ್ತಿಲ್ಲ. ನನಗೆ ಅವರು ಬೇಕು.  ಅವರೇ ನನ್ನ ಕಣ್ಣ ಮುಂದೆ ಬರುತ್ತಿದ್ದಾರೆ’ ಎಂದು ಅಳುತ್ತಾ ಒಂದೇ ಸಮನೆ ಹಠ ಹಿಡಿದಿದ್ದಾನೆ ಬಾಲಕ. ‘ಅವರು ತೀರಿಕೊಂಡಿಲ್ಲ. ಸಿನಿಮಾದಲ್ಲಿ ಹಾಗೆ ತೋರಿಸಿದ್ದಾರೆ’ ಎಂದು ತಾಯಿ ಸಂತೈಸುವ ಕೆಲಸ ಮಾಡಿದ್ದಾರೆ.

ಪುನೀತ್​ ನಿಧನದ ಸುದ್ದಿ ಕೇಳಿ ಅಭಿಮಾನಿಯೋರ್ವ ಶುಕ್ರವಾರ (ಅಕ್ಟೋಬರ್​ 30) ಮೃತಪಟ್ಟಿದ್ದ.  ಪುನೀತ್​ ಸಾವಿನ ಸುದ್ದಿ ಕೇಳುತ್ತಿದ್ದಂತೆ ಮುನಿಯಪ್ಪ(30) ಎಂಬ ಅಭಿಮಾನಿಗೆ ಹೃದಯಾಘಾತ ಆಗಿತ್ತು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ ಪುನೀತ್​ ಸಾವಿನ ಸುದ್ದಿ ಕೇಳುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಪುನೀತ್​ ಜತೆ ಅವರ ಅಭಿಮಾನಿಯೂ ಮೃತಪಟ್ಟಿದ್ದು ದುರದೃಷ್ಟಕರ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

 

Published On - 4:00 pm, Sat, 30 October 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!