AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಪುನೀತ್ ಮಾಮ ನೆನಪಾಗುತ್ತಿದ್ದಾರೆ’; ಅಪ್ಪುಗಾಗಿ ಕಣ್ಣೀರು ಹಾಕಿದ ಪುಟ್ಟ ಅಭಿಮಾನಿ, ವಿಡಿಯೋ ವೈರಲ್​

ಕಾರ್ಕಳ ಕಲ್ಯದ ಐದು ವರ್ಷದ ದಕ್ಷ್ ಎಂಬ ಬಾಲಕ ಪುನೀತ್​ ಅವರ ದೊಡ್ಡ ಅಭಿಮಾನಿ. ಚಿಕ್ಕಂದಿನಿಂದಲೂ ಪುನೀತ್​ ಚಿತ್ರಗಳನ್ನು ಆತ ತಪ್ಪದೇ ನೋಡುತ್ತಿದ್ದ. ಆದರೆ, ಈಗ ಪುನೀತ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರ ಅರಗಿಸಿಕೊಳ್ಳೋಕೆ ಆತನಿಗೆ ಆಗುತ್ತಿಲ್ಲ.

‘ನನಗೆ ಪುನೀತ್ ಮಾಮ ನೆನಪಾಗುತ್ತಿದ್ದಾರೆ’; ಅಪ್ಪುಗಾಗಿ ಕಣ್ಣೀರು ಹಾಕಿದ ಪುಟ್ಟ ಅಭಿಮಾನಿ, ವಿಡಿಯೋ ವೈರಲ್​
ಬಾಲಕ ಮತ್ತು ಪುನೀತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 30, 2021 | 4:01 PM

ಪುನೀತ್ ರಾಜ್​ಕುಮಾರ್​ ಅವರನ್ನು ಕಂಡರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ? ಫ್ಯಾಮಿಲಿ ಆಡಿಯನ್ಸ್​ ಸಿನಿಮಾ ಮೂಲಕ ಪುನೀತ್​ ಹೆಚ್ಚು ಗುರುತಿಸಿಕೊಂಡಿದ್ದಾರೆ. ಚಿಕ್ಕವರಿಂದ ಹಿಡಿದು ವಯಸ್ಸಾದ ವ್ಯಕ್ತಿಗಳಿಗೂ ಪುನೀತ್​ ಇಷ್ಟವಾಗುತ್ತಾರೆ. ಸಿನಿಮಾಗಳ ಜತೆಗೆ ಅವರು ಮಾಡಿದ ಸಾಮಾಜಿಕ ಕೆಲಸಗಳು ಕೂಡ ಎಲ್ಲರ ಗಮನ ಸೆಳೆದಿದೆ. ಈ ಕಾರಣಕ್ಕೆ ಅವರನ್ನು ಕಳೆದುಕೊಂಡಿದ್ದು ಇಡೀ ಚಿತ್ರರಂಗಕ್ಕೆ ಸಿಡಿಲು ಬಡಿದಂತಾಗಿದೆ. ಈ ಮಧ್ಯೆ ಪುನೀತ್​ಗಾಗಿ ಪುಟ್ಟ ಅಭಿಮಾನಿಯೋರ್ವ ಕಣ್ಣೀರು ಹಾಕಿದ್ದಾನೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾರ್ಕಳ ಕಲ್ಯದ ಐದು ವರ್ಷದ ದಕ್ಷ್ ಎಂಬ ಬಾಲಕ ಪುನೀತ್​ ಅವರ ದೊಡ್ಡ ಅಭಿಮಾನಿ. ಚಿಕ್ಕಂದಿನಿಂದಲೂ ಪುನೀತ್​ ಚಿತ್ರಗಳನ್ನು ಆತ ತಪ್ಪದೇ ನೋಡುತ್ತಿದ್ದ. ಆದರೆ, ಈಗ ಪುನೀತ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರ ಅರಗಿಸಿಕೊಳ್ಳೋಕೆ ಆತನಿಗೆ ಆಗುತ್ತಿಲ್ಲ. ಈ ಕಾರಣಕ್ಕೆ ದಕ್ಷ್​ ಒಂದೇ ಸಮನೆ ಅಳುತ್ತಿದ್ದಾನೆ.

ಮಗು ಮತ್ತು ಆತನ ತಾಯಿ ತುಳುವಿನಲ್ಲಿ  ಸಂಭಾಷಣೆ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ‘ನನಗೆ ಪುನೀತ್ ಮಾಮ ನೆನಪಾಗುತ್ತಿದ್ದಾರೆ. ನನಗೆ ಅವರನ್ನು ಮರೆಯಲು ಆಗುತ್ತಿಲ್ಲ. ನನಗೆ ಅವರು ಬೇಕು.  ಅವರೇ ನನ್ನ ಕಣ್ಣ ಮುಂದೆ ಬರುತ್ತಿದ್ದಾರೆ’ ಎಂದು ಅಳುತ್ತಾ ಒಂದೇ ಸಮನೆ ಹಠ ಹಿಡಿದಿದ್ದಾನೆ ಬಾಲಕ. ‘ಅವರು ತೀರಿಕೊಂಡಿಲ್ಲ. ಸಿನಿಮಾದಲ್ಲಿ ಹಾಗೆ ತೋರಿಸಿದ್ದಾರೆ’ ಎಂದು ತಾಯಿ ಸಂತೈಸುವ ಕೆಲಸ ಮಾಡಿದ್ದಾರೆ.

ಪುನೀತ್​ ನಿಧನದ ಸುದ್ದಿ ಕೇಳಿ ಅಭಿಮಾನಿಯೋರ್ವ ಶುಕ್ರವಾರ (ಅಕ್ಟೋಬರ್​ 30) ಮೃತಪಟ್ಟಿದ್ದ.  ಪುನೀತ್​ ಸಾವಿನ ಸುದ್ದಿ ಕೇಳುತ್ತಿದ್ದಂತೆ ಮುನಿಯಪ್ಪ(30) ಎಂಬ ಅಭಿಮಾನಿಗೆ ಹೃದಯಾಘಾತ ಆಗಿತ್ತು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ ಪುನೀತ್​ ಸಾವಿನ ಸುದ್ದಿ ಕೇಳುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಪುನೀತ್​ ಜತೆ ಅವರ ಅಭಿಮಾನಿಯೂ ಮೃತಪಟ್ಟಿದ್ದು ದುರದೃಷ್ಟಕರ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

 

Published On - 4:00 pm, Sat, 30 October 21

ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್