AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Fans: ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ

ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ಸ್ ಮಾಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಶ್ರೀನಿವಾಸ್ ಗೌಡ ಹೇಳಿದ್ದಾರೆ. ದರ್ಶನ್ ಬಗ್ಗೆ ಮಾತನಾಡಿಲ್ಲವೆಂದು ಕೆಟ್ಟ ಕಮೆಂಟ್ಸ್​ಗಳನ್ನು ಮಾಡುತ್ತಿದ್ದಾರೆ ಎಂದು ಸೋನು ಗೌಡ ಹೇಳಿದ್ದಾರೆ.

Darshan Fans: ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ
ದರ್ಶನ್ ಅಭಿಮಾನಿಗಳಿಂದ ಸೋನು ಗೌಡಗೆ ಅಶ್ಲೀಲ ಸಂದೇಶ
ಮಂಜುನಾಥ ಸಿ.
|

Updated on: Jun 28, 2024 | 10:55 AM

Share

ರೇಣುಕಾ ಸ್ವಾಮಿ (Renuka Swamy), ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್​ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ, ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಗೌಡ ಮಾತನಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ವಿಡಿಯೋ ಒಂದರಲ್ಲಿ, ರೇಣುಕಾ ಸ್ವಾಮಿಯದ್ದು ಎನ್ನಲಾಗುತ್ತಿರುವ ಖಾತೆಯಿಂದ ನನಗೂ ಕೆಟ್ಟ ಸಂದೇಶ ಬಂದಿದೆ ಎಂದು ಸೋನು ಗೌಡ ಹೇಳಿದ್ದರು. ಇದೀಗ ಹೊಸ ವಿಡಿಯೋ ಒಂದನ್ನು ಹರಿಬಿಟ್ಟಿರುವ ನಟಿ, ತಮಗೆ ದರ್ಶನ್ ಅಭಿಮಾನಿಗಳಿಂದ ಕೆಟ್ಟ ಸಂದೇಶಗಳು, ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಸಂದೇಶಗಳು ಬಂದಿವೆ ಎಂದಿದ್ದಾರೆ.

‘ತುಂಬಾ ಬ್ಯಾಡ್ ಕಮೆಂಟ್ಸ್, ಯೂಟ್ಯೂಬ್, ಇನ್​ಸ್ಟಾಂ, ಫೇಸ್​ಬುಕ್​ನಲ್ಲಿ ಹಾಕುತ್ತಿದ್ದಾರೆ. ನಿಮ್ಮ ಡಿ ಬಾಸ್ ದರ್ಶನ್ ಪರವಾಗಿ ಮಾತನಾಡಿಲ್ಲ ಎಂದು ಒತ್ತಾಯಿಸುತ್ತಲೇ ಇದ್ದಾರೆ. ನಾವು ಇನ್ನೂ ಚಿಕ್ಕೋರು, ಅವರ ಬಗ್ಗೆ ಮಾತನಾಡುವಷ್ಟು ನಾವಿನ್ನೂ ಬೆಳೆದಿಲ್ಲ. ನಾವು ಯಾರಿಗಾದರೂ ಒಮ್ಮೆ ಅಭಿಮಾನಿಯಾದರೆ ಸಾಯುವವರೆಗೆ ಅಭಿಮಾನಿಯಾಗಿಯೇ ಇರುತ್ತೇವೆ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಿಯೇ ಆಗುತ್ತೆ’ ಎಂದಿದ್ದಾರೆ ಸೋನು ಶ್ರೀನಿವಾಸ್ ಗೌಡ.

ಇದನ್ನೂ ಓದಿ: ಅಭಿಮಾನಿಗಳ ಬಳಿ ದರ್ಶನ್ ವಿಶೇಷ ಮನವಿ; ಇದನ್ನು ಪಾಲಿಸ್ತಾರಾ ಫ್ಯಾನ್ಸ್?

ಮುಂದುವರೆದು, ‘ಒಳ್ಳೆಯರಾಗಿರಬಹುದು, ಕೆಟ್ಟವರಾಗಿರಬಹುದು, ತೀರ್ಪು ಅಂತ ಬರುತ್ತದೆ. ಅಲ್ಲಿಯವರೆಗೆ ಕಾಯೋಣ. ಅಲ್ಲಿಯವರೆಗೆ ದಯವಿಟ್ಟು ಕಾಯಿರಿ, ನಮಗೆ ಯಾವುದೇ ಥರ ಕೆಟ್ಟ ಸಂದೇಶಗಳನ್ನು, ಕಮೆಂಟ್ಸ್​ಗಳನ್ನು ಮಾಡಬೇಡಿ. ಅದೇ ರೀತಿ ಆ ಎರಡು ಕುಟುಂಬಗಳಿಗೂ ಸಹ ನ್ಯಾಯ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ’ ಎಂದಿದ್ದಾರೆ.

‘ಆದಷ್ಟು ಬೇಗ ದರ್ಶನ್ ಅವರು ನಿರಪರಾಧಿ ಎಂದಾಗಿ ಜೈಲಿನಿಂದ ಹೊರಗೆ ಬರಲಿ. ಅವರು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಕಷ್ಟ ಎಂದವರಿಗೆ ಸಹಾಯ ಮಾಡಿದ್ದಾರೆ. ಅವರು ಇಂಥಹಾ ಕೆಲಸ ಮಾಡಲು ಸಾಧ್ಯವೇ ಇಲ್ಲ ಎಂಬುದು ನನ್ನ ವೈಯಕ್ತಿಕ ನಂಬಿಕೆ. ನನ್ನ ನಂಬಿಕೆ ನಿಜವಾಗಲಿ ಎಂದು ಬಯಸುತ್ತೀನಿ. ಎಲ್ಲರಿಗೂ ಒಳ್ಳೆಯದಾಗಲಿ, ಮತ್ತೊಮ್ಮೆ ಹೇಳುತ್ತಿದ್ದೀನಿ, ಕೆಟ್ಟ ಕಮೆಂಟ್ಸ್​ಗಳು ಬೇಡ’ ಎಂದಿದ್ದಾರೆ ಸೋನು ಗೌಡ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್