AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Fans: ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ

ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ಸ್ ಮಾಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಶ್ರೀನಿವಾಸ್ ಗೌಡ ಹೇಳಿದ್ದಾರೆ. ದರ್ಶನ್ ಬಗ್ಗೆ ಮಾತನಾಡಿಲ್ಲವೆಂದು ಕೆಟ್ಟ ಕಮೆಂಟ್ಸ್​ಗಳನ್ನು ಮಾಡುತ್ತಿದ್ದಾರೆ ಎಂದು ಸೋನು ಗೌಡ ಹೇಳಿದ್ದಾರೆ.

Darshan Fans: ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ
ದರ್ಶನ್ ಅಭಿಮಾನಿಗಳಿಂದ ಸೋನು ಗೌಡಗೆ ಅಶ್ಲೀಲ ಸಂದೇಶ
ಮಂಜುನಾಥ ಸಿ.
|

Updated on: Jun 28, 2024 | 10:55 AM

Share

ರೇಣುಕಾ ಸ್ವಾಮಿ (Renuka Swamy), ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್​ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ, ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಗೌಡ ಮಾತನಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ವಿಡಿಯೋ ಒಂದರಲ್ಲಿ, ರೇಣುಕಾ ಸ್ವಾಮಿಯದ್ದು ಎನ್ನಲಾಗುತ್ತಿರುವ ಖಾತೆಯಿಂದ ನನಗೂ ಕೆಟ್ಟ ಸಂದೇಶ ಬಂದಿದೆ ಎಂದು ಸೋನು ಗೌಡ ಹೇಳಿದ್ದರು. ಇದೀಗ ಹೊಸ ವಿಡಿಯೋ ಒಂದನ್ನು ಹರಿಬಿಟ್ಟಿರುವ ನಟಿ, ತಮಗೆ ದರ್ಶನ್ ಅಭಿಮಾನಿಗಳಿಂದ ಕೆಟ್ಟ ಸಂದೇಶಗಳು, ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಸಂದೇಶಗಳು ಬಂದಿವೆ ಎಂದಿದ್ದಾರೆ.

‘ತುಂಬಾ ಬ್ಯಾಡ್ ಕಮೆಂಟ್ಸ್, ಯೂಟ್ಯೂಬ್, ಇನ್​ಸ್ಟಾಂ, ಫೇಸ್​ಬುಕ್​ನಲ್ಲಿ ಹಾಕುತ್ತಿದ್ದಾರೆ. ನಿಮ್ಮ ಡಿ ಬಾಸ್ ದರ್ಶನ್ ಪರವಾಗಿ ಮಾತನಾಡಿಲ್ಲ ಎಂದು ಒತ್ತಾಯಿಸುತ್ತಲೇ ಇದ್ದಾರೆ. ನಾವು ಇನ್ನೂ ಚಿಕ್ಕೋರು, ಅವರ ಬಗ್ಗೆ ಮಾತನಾಡುವಷ್ಟು ನಾವಿನ್ನೂ ಬೆಳೆದಿಲ್ಲ. ನಾವು ಯಾರಿಗಾದರೂ ಒಮ್ಮೆ ಅಭಿಮಾನಿಯಾದರೆ ಸಾಯುವವರೆಗೆ ಅಭಿಮಾನಿಯಾಗಿಯೇ ಇರುತ್ತೇವೆ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಿಯೇ ಆಗುತ್ತೆ’ ಎಂದಿದ್ದಾರೆ ಸೋನು ಶ್ರೀನಿವಾಸ್ ಗೌಡ.

ಇದನ್ನೂ ಓದಿ: ಅಭಿಮಾನಿಗಳ ಬಳಿ ದರ್ಶನ್ ವಿಶೇಷ ಮನವಿ; ಇದನ್ನು ಪಾಲಿಸ್ತಾರಾ ಫ್ಯಾನ್ಸ್?

ಮುಂದುವರೆದು, ‘ಒಳ್ಳೆಯರಾಗಿರಬಹುದು, ಕೆಟ್ಟವರಾಗಿರಬಹುದು, ತೀರ್ಪು ಅಂತ ಬರುತ್ತದೆ. ಅಲ್ಲಿಯವರೆಗೆ ಕಾಯೋಣ. ಅಲ್ಲಿಯವರೆಗೆ ದಯವಿಟ್ಟು ಕಾಯಿರಿ, ನಮಗೆ ಯಾವುದೇ ಥರ ಕೆಟ್ಟ ಸಂದೇಶಗಳನ್ನು, ಕಮೆಂಟ್ಸ್​ಗಳನ್ನು ಮಾಡಬೇಡಿ. ಅದೇ ರೀತಿ ಆ ಎರಡು ಕುಟುಂಬಗಳಿಗೂ ಸಹ ನ್ಯಾಯ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ’ ಎಂದಿದ್ದಾರೆ.

‘ಆದಷ್ಟು ಬೇಗ ದರ್ಶನ್ ಅವರು ನಿರಪರಾಧಿ ಎಂದಾಗಿ ಜೈಲಿನಿಂದ ಹೊರಗೆ ಬರಲಿ. ಅವರು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಕಷ್ಟ ಎಂದವರಿಗೆ ಸಹಾಯ ಮಾಡಿದ್ದಾರೆ. ಅವರು ಇಂಥಹಾ ಕೆಲಸ ಮಾಡಲು ಸಾಧ್ಯವೇ ಇಲ್ಲ ಎಂಬುದು ನನ್ನ ವೈಯಕ್ತಿಕ ನಂಬಿಕೆ. ನನ್ನ ನಂಬಿಕೆ ನಿಜವಾಗಲಿ ಎಂದು ಬಯಸುತ್ತೀನಿ. ಎಲ್ಲರಿಗೂ ಒಳ್ಳೆಯದಾಗಲಿ, ಮತ್ತೊಮ್ಮೆ ಹೇಳುತ್ತಿದ್ದೀನಿ, ಕೆಟ್ಟ ಕಮೆಂಟ್ಸ್​ಗಳು ಬೇಡ’ ಎಂದಿದ್ದಾರೆ ಸೋನು ಗೌಡ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!