ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಹುಳಿ ಹಿಂಡಿದ್ಯಾರು? ಅನುಮಾನ ಹೊರಹಾಕಿದ ನಟ

ಚಂದನ್ ಹಾಗೂ ನಿವೇದಿತಾ ಗೌಡ ಅವರು ಬಿಗ್ ಬಾಸ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕೊವಿಡ್ ಸಂದರ್ಭದಲ್ಲಿ ಸಿಂಪಲ್ ಆಗಿ ಮದುವೆ ಆಗಿದ್ದರು. ಈ ದಾಂಪತ್ಯ ಕೆಲವೇ ವರ್ಷಕ್ಕೆ ಅಂತ್ಯವಾಗಿದೆ. ಕೋರ್ಟ್​ನಲ್ಲಿ ಈ ದಂಪತಿ ವಿಚ್ಛೇದನ ಪಡೆದಿದ್ದಾರೆ. ಈ ಬಗ್ಗೆ ನಟ ಪ್ರಥಮ್ ಮಾತನಾಡಿದ್ದಾರೆ.

ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಹುಳಿ ಹಿಂಡಿದ್ಯಾರು? ಅನುಮಾನ ಹೊರಹಾಕಿದ ನಟ
ಚಂದನ್-ನಿವೇದಿತಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 08, 2024 | 6:53 AM

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಾಂಪತ್ಯ ಜೀವನ ಅಂತ್ಯವಾಗಿದೆ. ಇದಕ್ಕೆ ಕಾರಣವನ್ನು ಅವರು ನೀಡಿಲ್ಲ. ಬದಲಿಗೆ ತಾವು ವಿಚ್ಛೇದನ ಪಡೆಯುತ್ತಿರುವುದಾಗಿ ಹೇಳಿದ್ದಾರಷ್ಟೆ. ಈ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಚಂದನ್ ಹಾಗೂ ನಿವೇದಿತಾ ದಾಂಪತ್ಯಕ್ಕೆ ಯಾರಾದರೂ ಹುಳಿ ಹಿಂಡಿದರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಹೀಗೊಂದು ಅನುಮಾನ ಹೊರಹಾಕಿರುವುದು ಬಿಗ್ ಬಾಸ್ ವಿನ್ನರ್ ಹಾಗೂ ನಟ ಪ್ರಥಮ್. ಇವರ ವಿಚ್ಛೇದನದ ಕುರಿತು ಅವರು ರಿಯಾಕ್ಷನ್ ನೀಡಿದ್ದಾರೆ. ಇವರ ಮಧ್ಯೆ ಏನಾಗಿರಬಹುದು ಎಂಬ ಬಗ್ಗೆ ಮಾತನಾಡಿದ್ದಾರೆ.

ಚಂದನ್ ಹಾಗೂ ನಿವೇದಿತಾ ಗೌಡ ಅವರು ಬಿಗ್ ಬಾಸ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕೊವಿಡ್ ಸಂದರ್ಭದಲ್ಲಿ ಸಿಂಪಲ್ ಆಗಿ ಮದುವೆ ಆಗಿದ್ದರು. ಈ ದಾಂಪತ್ಯ ಕೆಲವೇ ವರ್ಷಕ್ಕೆ ಅಂತ್ಯವಾಗಿದೆ. ಕೋರ್ಟ್​ನಲ್ಲಿ ಈ ದಂಪತಿ ವಿಚ್ಛೇದನ ಪಡೆದಿದ್ದಾರೆ. ಈ ಬಗ್ಗೆ ನಟ ಪ್ರಥಮ್ ಮಾತನಾಡಿದ್ದಾರೆ.

‘ಚಂದನ್ ಹಾಗು ನಿವೇದಿತಾ ನಡುವೆ ಯಾರೋ ಹುಳಿ ಹಿಂಡಿದ್ದಾರೆ. ಅವರು ನಿಜವಾಗಲೂ ಉದ್ಧಾರ ಆಗಲ್ಲ, ಅವರಿಗೆ ಒಳ್ಳೆದಾಗಲ್ಲ. ಈ ಜೋಡಿ ಮತ್ತೆ ಒಂದಾಗಬೇಕು. ನಾನು ಧ್ರುವ ಸರ್ಜಾ ಅವರಿಂದ ಫೋನ್ ಮಾಡಿಸಿ ಒಮ್ಮೆ ಒಂದು ಮಾಡೋ ಪ್ರಯತ್ನ ಮಾಡುತ್ತೇನೆ. ಚಂದನ್​ ಶೆಟ್ಟಿಗೆ ಪುನೀತ್ ಅವರ ಮಿಲನ ಸಿನಿಮಾ ನೋಡುವಂತೆ ಹೇಳುತ್ತೇನೆ. ಅದನ್ನ ನೋಡಿ ಅವರು ಹೋಗಿ ಅಪ್ಪು ಅವರು ಪಾರ್ವತಿನಾ ಅಪ್ಪಿಕೊಂಡ ಹಾಗೇ ನಿವೇದಿತಾನ ಹಗ್ ಮಾಡಿ ಒಂದಾಗಬೇಕು. ಚಂದನ್ ಹಾಗೂ ನಿವೇದಿತಾ ಡಿವೋರ್ಸ್​ನಿಂದ ಕೆಲವರು ಸಂಭ್ರಮ ಪಟ್ಟಿರುತ್ತಾರೆ. ಅದಕ್ಕೆ ಆಸ್ಪದ ಕೊಡಬಾರದು’ ಎಂದಿದ್ದಾರೆ ಅವರು.

ಇದನ್ನೂ ಓದಿ: ವಿಚ್ಛೇದನ ದೃಢಪಡಿಸಿದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ಕಾರಣ ಕೊಟ್ಟಿದ್ದೇನು ಗೊತ್ತಾ?

ನಿವೇದಿತಾ ಹಾಗೂ ಚಂದನ್ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ವಿಚ್ಛೇದನದ ಬಗ್ಗೆ ಪೋಸ್ಟ್ ಹಾಕಿದ್ದಾರೆ. ನಾವು ಈ ನಿರ್ಧಾರ ತೆಗೆದುಕೊಂಡಿದ್ದೇಕೆ ಎಂಬುದನ್ನು ಅವರು ಅದರಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!