AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳುತ್ತೇನೆ’; ಯಶ್ ಸಿನಿಮಾದಲ್ಲಿ ಕರೀನಾ ನಟಿಸೋದು ಫಿಕ್ಸ್?

ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಬಾಲಿವುಡ್ ನಟಿ ಕರೀನಾ ಆಯ್ಕೆ ಮಾಡಿಕೊಳ್ಳಲು ತಂಡ ಮುಂದಾಗಿದೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಕರೀನಾ ಕಪೂರ್ ತಂಡದ ಕಡೆಯಿಂದ ಒಂದು ಪ್ರಕಟಣೆ ಹೊರಡಿಸಲಾಗಿದೆ.

‘ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳುತ್ತೇನೆ’; ಯಶ್ ಸಿನಿಮಾದಲ್ಲಿ ಕರೀನಾ ನಟಿಸೋದು ಫಿಕ್ಸ್?
ಕರೀನಾ-ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 11, 2024 | 10:32 AM

Share

ಕರೀನಾ ಕಪೂರ್ (Kareena Kapoor) ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇಷ್ಟು ವರ್ಷ ಬಾಲಿವುಡ್​ನಲ್ಲಿ ಮಿಂಚಿದ್ದ ಕರೀನಾ ಕಪೂರ್ ಅವರು ಇದೇ ಮೊದಲ ಬಾರಿಗೆ ಕನ್ನಡಕ್ಕೆ ಎಂಟ್ರಿ ನೀಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಈ ಬೆನ್ನಲ್ಲೇ ಕರೀನಾ ಕಪೂರ್ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಇದರಿಂದ ಕುತೂಹಲ ಮತ್ತಷ್ಟು ಹೆಚ್ಚಿದೆ. ‘ಶೀಘ್ರವೇ ಎಗ್ಸೈಟಿಂಗ್ ವಿಚಾರ ಹೇಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾನ ಕಳೆದ ವರ್ಷ ಘೋಷಣೆ ಮಾಡಿದರು. ಮಲಯಾಳಂನ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಕೆವಿಎನ್​ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಬಾಲಿವುಡ್ ನಟಿಯ ಆಯ್ಕೆ ಮಾಡಿಕೊಳ್ಳಲು ತಂಡ ಮುಂದಾಗಿದೆ ಎನ್ನಲಾಗುತ್ತಿದೆ.

ಕರೀನಾ ಕಪೂರ್ ತಂಡದ ಕಡೆಯಿಂದ ಒಂದು ಪ್ರಕಟಣೆ ಹೊರಡಿಸಲಾಗಿದೆ. ‘ಕರೀನಾ ಕಪೂರ್ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರೆಬರೆ ಗೊತ್ತಿರುವ ವಿಚಾರ ಪ್ರಕಟಿಸಬೇಡಿ. ಶೀಘ್ರವೇ ಎಗ್ಸೈಟಿಂಗ್ ವಿಚಾರ ಬರಲಿದೆ. ಅಧಿಕೃತ ಘೋಷಣೆಗಾಗಿ ಕಾಯಿರಿ’ ಎಂದು ಕರೀನಾ ಕಪೂರ್ ಟೀಂ ಹೇಳಿದೆ. ಈ ವಿಚಾರ ಕೇಳಿದ ಬಳಿಕ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: ಕನ್ನಡಕ್ಕೆ ಬರುತ್ತಿದ್ದಾರೆ ಬಾಲಿವುಡ್ ಬ್ಯೂಟಿ ಕರೀನಾ: ಸಿನಿಮಾ ಯಾವುದು ಊಹಿಸಿ

‘ಕೆಜಿಎಫ್ 2’ ಬಳಿಕ ಯಶ್ ಖ್ಯಾತಿ ಹೆಚ್ಚಿದೆ. ‘ನಾನು ಕೆಜಿಎಫ್ ಸಿನಿಮಾನ ಇಷ್ಟಪಟ್ಟಿದ್ದೇನೆ’ ಎಂದು ಈ ಮೊದಲು ಕರೀನಾ ಹೇಳಿದ್ದರು. ಈ ಕಾರಣಕ್ಕೆ ಕರೀನಾ ಅವರು ಯಶ್ ಸಿನಿಮಾ ಒಪ್ಪಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಮದುವೆ ಬಳಿಕ ಕರೀನಾ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು