AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಯ್ಯನ ಜೊತೆ ನಟಿಸ್ತಿಲ್ವಂತೆ ಸೋನಾಕ್ಷಿ, ಹೊಸ ಸಿನಿಮಾ ಬಗ್ಗೆ ಶೀಘ್ರವೇ ಕೊಡ್ತಾರಂತೆ ಸುದ್ದಿ

ಬಾಲಿವುಡ್ ಬೆಡಗಿ ಸೋನಾಕ್ಷಿ ಟಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡ್ತಾರೆ. ಬಾಲಯ್ಯನ ಜೊತೆ ರೋಮ್ಯಾನ್ಸ್ ಮಾಡಿ ಅಭಿಮಾನಿಗಳನ್ನ ಸಿಹಿ ಸುದ್ದಿ ನೀಡ್ತಾರೆ ಅನ್ನೋ ಸುದ್ದಿ ಹರಿದಾಡ್ತಿತ್ತು. ಆದ್ರೀಗ ಬಾಲಿವುಡ್ ಬೆಡಗಿ ಬಾಲಯ್ಯನ ಜೊತೆ ಸೊಂಟ ಬಳುಕಿಸೋ ಸುದ್ದಿಗೆ ಬ್ರೇಕ್ ಬಿದ್ದಿದೆ. ಮಾಸ್ ಸಿನಿಮಾಗಳ ಮೂಲಕ ಕಮಾಲ್ ಮಾಡಿ ಬೆಳ್ಳಿಪರದೆ ಮೇಲೆ ಅಬ್ಬರಿಸೋ ಟಾಲಿವುಡ್ ನಟ ಬಾಲಯ್ಯ ಸದ್ಯ ರೂಲರ್ ಆಗಿ ರಂಜಿಸೋಕೆ ರೆಡಿಯಾಗಿದ್ದಾರೆ. ಅಂದಹಾಗೆ ರೂಲರ್ ಆಗಿರೋ ಬಾಲಯ್ಯ ಮುಂದಿನ ಸಿನಿಮಾ ಇತ್ತಿಚೆಗಷ್ಟೇ ಅದ್ಧೂರಿಯಾಗಿ ಸೆಟ್ಟೇರಿದೆ. ಬಾಲಯ್ಯನ 106ನೇ […]

ಬಾಲಯ್ಯನ ಜೊತೆ ನಟಿಸ್ತಿಲ್ವಂತೆ ಸೋನಾಕ್ಷಿ, ಹೊಸ ಸಿನಿಮಾ ಬಗ್ಗೆ ಶೀಘ್ರವೇ ಕೊಡ್ತಾರಂತೆ ಸುದ್ದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 17, 2019 | 11:50 AM

Share

ಬಾಲಿವುಡ್ ಬೆಡಗಿ ಸೋನಾಕ್ಷಿ ಟಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡ್ತಾರೆ. ಬಾಲಯ್ಯನ ಜೊತೆ ರೋಮ್ಯಾನ್ಸ್ ಮಾಡಿ ಅಭಿಮಾನಿಗಳನ್ನ ಸಿಹಿ ಸುದ್ದಿ ನೀಡ್ತಾರೆ ಅನ್ನೋ ಸುದ್ದಿ ಹರಿದಾಡ್ತಿತ್ತು. ಆದ್ರೀಗ ಬಾಲಿವುಡ್ ಬೆಡಗಿ ಬಾಲಯ್ಯನ ಜೊತೆ ಸೊಂಟ ಬಳುಕಿಸೋ ಸುದ್ದಿಗೆ ಬ್ರೇಕ್ ಬಿದ್ದಿದೆ.

ಮಾಸ್ ಸಿನಿಮಾಗಳ ಮೂಲಕ ಕಮಾಲ್ ಮಾಡಿ ಬೆಳ್ಳಿಪರದೆ ಮೇಲೆ ಅಬ್ಬರಿಸೋ ಟಾಲಿವುಡ್ ನಟ ಬಾಲಯ್ಯ ಸದ್ಯ ರೂಲರ್ ಆಗಿ ರಂಜಿಸೋಕೆ ರೆಡಿಯಾಗಿದ್ದಾರೆ. ಅಂದಹಾಗೆ ರೂಲರ್ ಆಗಿರೋ ಬಾಲಯ್ಯ ಮುಂದಿನ ಸಿನಿಮಾ ಇತ್ತಿಚೆಗಷ್ಟೇ ಅದ್ಧೂರಿಯಾಗಿ ಸೆಟ್ಟೇರಿದೆ. ಬಾಲಯ್ಯನ 106ನೇ ಸಿನಿಮಾಗೆ ಭರ್ಜರಿ ಸಿದ್ಧತೆ ನಡೀತಿದೆ.

ಅಂದಹಾಗೆ ಸದ್ಯ ಬಾಲಯ್ಯನ ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ಸೋನಾಕ್ಷಿ ಸೊಂಟ ಬಳುಕಿಸ್ತಾರೆ ಅನ್ನೋ ಸುದ್ದಿ ಕಳೆದ ಕೆಲವು ದಿನಗಳಿಂದ ಸದ್ದು ಮಾಡ್ತಿದೆ. ಇನ್ನು, ನಿರ್ದೇಶಕ ಬೋಯಪಾಟಿ ಸೀನು ಹಾಗೂ ಚಿತ್ರತಂಡ ಸೋನಾಕ್ಷಿಯನ್ನ ಕರೆ ತರೋ ಪ್ಲಾನ್ ಮಾಡಿದೆಯಂತೆ. ಈಗಾಗ್ಲೇ ಒಂದು ಹಂತದ ಮಾತುಕತೆ ಕೂಡ ಮಾಡಲಾಗಿದೆ ಅನ್ನೋ ಸುದ್ದಿ ಕೇಳಿ ಬಂದಿತ್ತು.

ಆದ್ರೆ, ಸದ್ಯ ಹೀಗೆ ಹರಡಿದ್ದ ಸುದ್ದಿ ಸೋನಾಕ್ಷಿಗೂ ತಲುಪಿ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಸದ್ಯಕ್ಕಂತೂ ಸೋನಾಕ್ಷಿ ಬಾಲಯ್ಯನ ಜೊತೆ ರೋಮ್ಯಾನ್ಸ್ ಮಾಡೋ ಸುದ್ದಿಗೆ ಬ್ರೇಕ್ ಹಾಕಿದ್ದಾರೆ. ಸದ್ಯ ಹರಿದಾಡ್ತಿರೋ ಸುದ್ದಿ ಸುಳ್ಳು, ನಾನು ಟಾಲಿವುಡ್ ಸಿನಿಮಾದಲ್ಲಿ ಅಭಿನಯಿಸ್ತಿಲ್ಲ. ಸದ್ಯದಲ್ಲೇ ನನ್ನ ಮುಂದಿನ ಚಿತ್ರದ ಬಗ್ಗೆ ಹೇಳ್ತಿನಿ ಅಂತ ಟ್ವಿಟ್ಟರ್​​ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.

ಹಾಗಾದ್ರೆ ಈ ಸದ್ಯಕ್ಕಂತೂ ಸೋನಾಕ್ಷಿ ಸ್ಪಷ್ಟನೆ ಕೊಟ್ಟು ಸುಮ್ಮನಾಗಿದ್ದಾರೆ. ಆದ್ರೆ, ಬಾಲಯ್ಯನ ಜತೆ ರೋಮ್ಯಾನ್ಸ್ ಮಾಡೋ ಬೆಡಗಿ ಯಾರು ಅನ್ನೋ ಕುತೂಹಲ ಮತ್ತಷ್ಟು ಹೆಚ್ಚಾಗ್ತಿದೆ. ಇದೆಲ್ಲದರ ನಡುವೆ ಸಂಜಯ್ ದತ್ ಕೂಡ ಬಾಲಯ್ಯನ ಎದುರು ವಿಲನ್ ಆಗಿ ಅಬ್ಬರಿಸ್ತಾರೆ ಅನ್ನೋ ಸುದ್ದಿ ಕೂಡ ಸದ್ದು ಮಾಡ್ತಿದೆ. ಹಾಗಾದ್ರೆ ಅದೇನ್ ಕಥೆ ನಿಜವಾಗಿಯೂ ಸಂಜಯ್ ದತ್ ಬಾಲಯ್ಯನ ವಿರುದ್ಧ ಸೆಣಸಾಟಕ್ಕೆ ಇಳೀತಾರಾ ಅಥವಾ ಈ ಸುದ್ದಿ ಕೂಡ ಸುಳ್ಳಾಗುತ್ತಾ ಅನ್ನೋದನ್ನ ಕಾದು ನೊಡ್ಬೇಕಿದೆ. https://twitter.com/sonakshisinha/status/1206458691517464576?s=20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು