AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Margaret Lover of Ramachari: ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಚಿತ್ರದಲ್ಲಿ ಅಭಿಲಾಶ್​-ಸೋನಲ್​ ಜೋಡಿ

ಶೀರ್ಷಿಕೆಯ ಕಾರಣದಿಂದ ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಚಿತ್ರ ಗಮನ ಸೆಳೆಯುತ್ತಿದೆ. ಶೀಘ್ರದಲ್ಲೇ ಈ ಸಿನಿಮಾಗೆ ಮುಹೂರ್ತ ನೆರವೇರಲಿದೆ. ಮೇ ತಿಂಗಳಲ್ಲಿ ಶೂಟಿಂಗ್​ ಆರಂಭ ಆಗಲಿದೆ.

Margaret Lover of Ramachari: ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಚಿತ್ರದಲ್ಲಿ ಅಭಿಲಾಶ್​-ಸೋನಲ್​ ಜೋಡಿ
ಸೋನಲ್ ಮೊಂಥೆರೋ, ಅಭಿಲಾಶ್
ಮದನ್​ ಕುಮಾರ್​
|

Updated on: Apr 19, 2023 | 5:13 PM

Share

ಮುಖ್ಯಾಂಶಗಳು

  • ರಂಗಭೂಮಿ ಹಿನ್ನೆಲೆ ಹೊಂದಿರುವ ಅಭಿಲಾಶ್​ ಅವರು ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಚಿತ್ರಕ್ಕೆ ಹೀರೋ
  • ಮೀರಾ ರಾಘವ್​ ರಾಮ್​ ಅಲಿಯಾಸ್​ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ನಟಿ ಸೋನಲ್​ ಮೊಂಥೆರೋ
  • ವಾಸುಕಿ ವೈಭವ್​ ಸಂಗೀತ ನಿರ್ದೇಶನ ಮಾಡಲಿರುವ ಈ ಚಿತ್ರಕ್ಕೆ ಏಪ್ರಿಲ್​ ಕೊನೇ ವಾರದಲ್ಲಿ ನಡೆಯುತ್ತೆ ಮುಹೂರ್ತ

ಪುಟ್ಟಣ್ಣ ಕಣಗಾಲ್​ ನಿರ್ದೇಶನ ಮಾಡಿದ ‘ನಾಗರಹಾವು’ ಸಿನಿಮಾ ಬಿಡುಗಡೆ ಆಗಿದ್ದು 1972ರಲ್ಲಿ. ವಿಷ್ಣುವರ್ಧನ್​, ಆರತಿ, ಅಂಬರೀಷ್​ ಮುಂತಾದವರು ನಟಿಸಿದ ಆ ಸಿನಿಮಾ ಎಂದರೆ ಕನ್ನಡ ಸಿನಿಪ್ರಿಯರಿಗೆ ಇಂದಿಗೂ ಫೇವರಿಟ್​. ಕೆಲವು ವರ್ಷಗಳ ಹಿಂದೆ ಆ ಚಿತ್ರ ಮರುಬಿಡುಗಡೆಯಾಗಿ ಯಶಸ್ಸು ಕಂಡಿತ್ತು. ಅಷ್ಟಕ್ಕೂ ಅಂದಿನ ‘ನಾಗರಹಾವು’ ಬಗ್ಗೆ ಈಗ ಮಾತನಾಡಲು ಕಾರಣ ಏನು? ಅದಕ್ಕೆ ಉತ್ತರ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ (Margaret Lover of Ramachari). ಹೌದು, ಈ ಶೀರ್ಷಿಕೆಯಲ್ಲೊಂದು ಕನ್ನಡ ಸಿನಿಮಾ ಮೂಡಿಬರುತ್ತಿದೆ. ‘ನಾಗರಹಾವು’ ಚಿತ್ರದಲ್ಲಿ ರಾಮಾಚಾರಿ ಮತ್ತು ಮಾರ್ಗರೇಟ್​ ನಡುವೆ ಲವ್​ ಆಗುತ್ತದೆ. ಆ ಪಾತ್ರಗಳ ಹೆಸರನ್ನೇ ಇಟ್ಟುಕೊಂಡು ಹೊಸ ಸಿನಿಮಾಗೆ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಅಭಿಲಾಶ್​ (Abhilash) ಹಾಗೂ ಸೋನಲ್​ ಮೊಂಥೆರೋ (Sonal Monteiro) ಅವರು ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ.

ಗಿರಿಧರ್​ ಕುಂಬಾರ ಅವರು ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. 1972ರ ‘ನಾಗರಹಾವು’ ರೀತಿಯೇ ಈಗ ‘ಮಾರ್ಗರೇಟ್​ ಲವರ್​ ಆಫ್​  ರಾಮಾಚಾರಿ’ ಚಿತ್ರದ ಶೂಟಿಂಗ್​ ಕೂಡ ಚಿತ್ರದುರ್ಗದಲ್ಲಿ ನಡೆಯಲಿದೆ. ಅದನ್ನು ಹೊರತುಪಡಿಸಿದರೆ ಇದು ಬೇರೆಯದೇ ಕಥೆ ಇರುವಂತಹ ಸಿನಿಮಾ. ಶೀರ್ಷಿಕೆಯ ಕಾರಣದಿಂದ ಈ ಸಿನಿಮಾ ಬಗ್ಗೆ ಕುತೂಹಲ ಮೂಡುವಂತಾಗಿದೆ.

ಇದನ್ನೂ ಓದಿ: ಚಂದನವನದ ಸುಂದರಿ ಸೋನಲ್​ ಮಾಂಥೆರೋ

ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಶ್​ ಅವರು ‘ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಆಗುತ್ತಿದ್ದಾರೆ. ‘ಕೆಜಿಎಫ್​’, ‘ಲವ್​ ಮಾಕ್ಟೇಲ್​’, ‘ಬಡವ ರಾಸ್ಕಲ್​’, ‘ಗುರುದೇವ್​ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲೂ ನಟಿಸುವ ಮೂಲಕ ಅಭಿಲಾಶ್​ ಗುರುತಿಸಿಕೊಂಡಿದ್ದಾರೆ. ‘ನಾಗರಹಾವು’ ಸಿನಿಮಾದಲ್ಲಿನ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾದ ಪಾತ್ರಗಳಿಗೆ ಇಡಲಾಗಿದೆ.

ಇದನ್ನೂ ಓದಿ: ಸರೋಜಿನಿ ನಾಯ್ಡು ಬಯೋಪಿಕ್​ನಲ್ಲಿ ಶಾಂತಿಪ್ರಿಯಾ, ಸೋನಲ್​: ಪ್ಯಾನ್​ ಇಂಡಿಯಾ ಚಿತ್ರಕ್ಕೆ ಕನ್ನಡಿಗನ ನಿರ್ದೇಶನ

ಅಭಿಲಾಶ್​ ಅವರು ​ರಾಮಾಚಾರಿ ಅಲಿಯಾಸ್​ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್​ ಮೊಂಥೆರೋ ಅವರು ಮೀರಾ ರಾಘವ್​ ರಾಮ್​ ಅಲಿಯಾಸ್​ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್​ ಶೆಟ್ಟಿ ಅವರು ಜಯಂತ್​ ಅಲಿಯಾಸ್​ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ವಿಶೇಷ. ಅನುಭವಿ ನಟರಾದ ಅವಿನಾಶ್​ ಮತ್ತು ರವಿಶಂಕರ್​ ಮುಂತಾದವರು ಕೂಡ ನಟಿಸುತ್ತಿದ್ದಾರೆ.

ವನಿತಾ ಎಚ್​​.ಎನ್​. ಅವರ ‘ನಿಹಾಂತ್​ ಪ್ರೊಡಕ್ಷನ್ಸ್​’ ಮೂಲಕ ‘ಮಾರ್ಗರೇಟ್​ ಲವರ್​ ಆಫ್​ ರಾಮಾಚಾರಿ’ ಸಿನಿಮಾ ನಿರ್ಮಾಣ ಆಗಲಿದೆ. ಈ ಚಿತ್ರಕ್ಕೆ ವಾಸುಕಿ ವೈಭವ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಏಪ್ರಿಲ್​ ಕೊನೇ ವಾರದಲ್ಲಿ ಈ ಸಿನಿಮಾಗೆ ಮುಹೂರ್ತ ನೆರವೇರಲಿದೆ. ಮೇ ತಿಂಗಳಲ್ಲಿ ಶೂಟಿಂಗ್​ ಆರಂಭ ಆಗಲಿದೆ ಎಂದು ‘ಸಿನಿಮಾ ಎಕ್ಸ್​ಪ್ರೆಸ್​’ ವರದಿ ಮಾಡಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್