AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಸಂಪ್ರದಾಯದಂತೆ ವಿವಾಹ ಬಂಧಕ್ಕೆ ಒಳಗಾದ ತರುಣ್-ಸೋನಲ್

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಇಂದು (ಆಗಸ್ಟ್ 11) ಬೆಳಿಗ್ಗೆ ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ.

ಹಿಂದೂ ಸಂಪ್ರದಾಯದಂತೆ ವಿವಾಹ ಬಂಧಕ್ಕೆ ಒಳಗಾದ ತರುಣ್-ಸೋನಲ್
ಮಂಜುನಾಥ ಸಿ.
|

Updated on: Aug 11, 2024 | 11:59 AM

Share

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ವಿವಾಹ ಬಂಧಕ್ಕೆ ಒಳಪಟ್ಟಿದ್ದಾರೆ. ಹಿಂದೂ ಸಂಪ್ರದಾಯದಂತೆ ಇವರಿಬ್ಬರ ವಿವಾಹ ನೆರವೇರಿದೆ. ಆಗಸ್ಟ್ 11 ರಂದು ಬೆಳಿಗ್ಗೆ 10:50 ರಿಂದ 11:30 ರ ವರೆಗೆ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು, ಅಂತೆಯೇ ಇದೆ ಶುಭ ಮುಹೂರ್ತದಲ್ಲಿ ಕುಟುಂಬದವರು, ಬಂಧುಗಳು, ಗುರು-ಹಿರಿಯರ ಸಮ್ಮುಖದಲ್ಲಿ, ಮಂಗಳವಾದ್ಯದ ಮೇಳ, ಮಂತ್ರ ಘೋಷಣೆಗಳ ನಡುವೆ ತರುಣ್ ಅವರು ಸೋನಲ್ ಅವರಿಗೆ ಮಾಂಗಲ್ಯಧಾರಣೆ ಮಾಡಿದರು.

ಮುಹೂರ್ತಕ್ಕೆ ಮದುವೆ ಮಂಟಪವನ್ನು ವಿಶೇಷವಾಗಿ ಅಲಂಕರಿಸಿ ಸಿದ್ಧಪಡಿಸಲಾಗಿತ್ತು. ದಕ್ಷಿಣ ಭಾರತದ ದೇವಾಲಯಗಳಿಂದ ಸ್ಪೂರ್ತಿ ಪಡೆದಂಥಹಾ ವಿನ್ಯಾಸದಲ್ಲಿ ಮಂಟಪವನ್ನು, ಪ್ರವೇಶದ್ವಾರವನ್ನು ಅಲಂಕರಿಸಲಾಗಿತ್ತು. ಪ್ರವೇಶ ದ್ವಾರದಲ್ಲಿ ಮಹಾದ್ವಾರದ ಮಾದರಿ ವಿನ್ಯಾಸ ಮಾಡಲಾಗಿತ್ತು. ವಿಷ್ಣುವಿನ ದಶಾವತಾರಗಳ ಮಧ್ಯೆ, ಕಮಲ ಮಂಟಪದ ರೀತಿ ಮುಖ್ಯ ಮಂಟಪವನ್ನು ಸಿದ್ಧ ಪಡಿಸಲಾಗಿತ್ತು. ಮಂಟಪ, ಪ್ರವೇಶ ದ್ವಾರದ ಅಲಂಕಾರ ಗಮನ ಸೆಳೆಯುವಂತಿತ್ತು.

ತರುಣ್ ಹಾಗೂ ಸೋನಲ್ ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದರು. ಕಳೆದ ಕೆಲ ತಿಂಗಳಿನಿಂದ ಈಚೆಗೆ ಈ ಇಬ್ಬರ ನಡುವಿನ ಪ್ರೇಮ ಸಂಬಂಧ ಹೊರಬಿದ್ದಿತ್ತು. ಇಬ್ಬರೂ ಸಹ ತಮ್ಮ ಕುಟುಂಬದವರನ್ನು ಒಪ್ಪಿಸಿ ಇದೀಗ ಎಲ್ಲ ಗೆಳೆಯರು, ಆತ್ಮೀಯರನ್ನು ಕರೆದು ಅದ್ಧೂರಿಯಾಗಿ ವಿವಾಹವಾಗುತ್ತಿದ್ದಾರೆ. ಬೆಂಗಳೂರಿನ ಕೆಂಗೆರೆ ಬಳಿ ಇರೋ ಪೂರ್ಣಿಮಾ ಪ್ಯಾಲೇಸ್​ನಲ್ಲಿ ಇವರ ಅದ್ಧೂರಿ ಮದುವೆ ನೆರವೇರಿದೆ.

ಆಗಸ್ಟ್ 10 ರಂದು ರಾತ್ರಿ ತರುಣ್ ಹಾಗೂ ಸೋನಲ್​ರ ಆರತಕ್ಷತೆ ಅದ್ಧೂರಿಯಾಗಿ ನೆರವೇರಿದೆ. ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು. ಯೋಗರಾಜ್ ಭಟ್, ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ಹಂಸಲೇಖ, ಪ್ರೇಮ್, ಶರಣ್ ಹಲವಾರು ಮಂದಿ ಸಿನಿಮಾ ಹಾಗೂ ಟಿವಿ ತಾರೆಯರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು. ಯಶ್, ಸುದೀಪ್ ಇನ್ನೂ ಹಲವರಿಗೆ ತರುಣ್ ಆಹ್ವಾನ ನೀಡಿದ್ದರು.

ಇದನ್ನೂ ಓದಿ:ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಸ್ಯಾಂಡಲ್​ವುಡ್ ಜೋಡಿ

ತರುಣ್ ಸುಧೀರ್ ಮೂಲತಃ ಉತ್ತರ ಕರ್ನಾಟಕದ ಕುಟುಂಬದವರಾದರೂ ದಶಕಗಳಿಂದಲೂ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಇನ್ನು ನಟಿ ಸೋನಲ್ ಮಂಗಳೂರಿನವರು. ಇವರಿಬ್ಬರೂ ಕಳೆದ ಕೆಲ ವರ್ಷಗಳಿಂದಲೂ ಪ್ರೀತಿಯಲ್ಲಿದ್ದಾರೆ. ತರುಣ್ ನಿರ್ದೇಶನ ಮಾಡಿದ್ದ ‘ರಾಬರ್ಟ್’ ಸಿನಿಮಾದಲ್ಲಿ ಸೋನಲ್ ನಟಿಸಿದ್ದರು. ತುಳು ಸಿನಿಮಾ ಮೂಲಕ ನಟನೆ ಆರಂಭಿಸಿದ ಸೋನಲ್, ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಟ್ಟರು ನಿರ್ದೇಶನ ಮಾಡಿರುವ ‘ಪಂಚತಂತ್ರ’, ‘ಗರಡಿ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ‘ಬುದ್ಧಿವಂತ 2’ ಹಾಗೂ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು