AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್​ ಸುಧೀರ್​ ಜತೆಗಿನ ಮದುವೆ ಬಗ್ಗೆ ಮೊದಲ ಬಾರಿ ಮೌನ ಮುರಿದ ಸೋನಲ್​

ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಶೀಘ್ರದಲ್ಲೇ ಅವರ ಮದುವೆ ನೆರವೇರಲಿದೆ. ಈ ಬಗ್ಗೆ ಸೋನಲ್​ ಮಾಂತೆರೋ ಅವರು ಇದೇ ಮೊದಲ ಬಾರಿಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಜುಲೈ 22ರಂದು ಬೆಳಗ್ಗೆ 11.08 ಗಂಟೆಗೆ ಈ ಜೋಡಿಯ ಕಡೆಯಿಂದ ಗುಡ್​ ನ್ಯೂಸ್​ ಸಿಗಲಿದೆ.

ತರುಣ್​ ಸುಧೀರ್​ ಜತೆಗಿನ ಮದುವೆ ಬಗ್ಗೆ ಮೊದಲ ಬಾರಿ ಮೌನ ಮುರಿದ ಸೋನಲ್​
ಸೋನಲ್​ ಮಾಂತೆರೋ, ತರುಣ್​ ಸುಧೀರ್​
ಮದನ್​ ಕುಮಾರ್​
|

Updated on: Jul 21, 2024 | 5:34 PM

Share

ನಟಿ ಸೋನಲ್​ ಮಾಂತೆರೋ ಅವರು ನಿರ್ದೇಶಕ ತರುಣ್​ ಸುಧೀರ್​ ಜೊತೆ ಮದುವೆ ಆಗುತ್ತಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಈ ವಿಚಾರದ ಬಗ್ಗೆ ಸೋನಲ್​ ಅವರು ಮೌನವಾಗಿದ್ದರು. ಇದೇ ಮೊದಲ ಬಾರಿಗೆ ಅವರು ಮದುವೆ ಕುರಿತು ಮೌನ ಮುರಿದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರೊಂದು ಪೋಸ್ಟರ್​ ಹಂಚಿಕೊಂಡಿದ್ದು, ‘ಕಡೆಗೂ ನಟಿಗೆ ತನ್ನ ಬದುಕಿನ ನಿರ್ದೇಶಕ ಸಿಕ್ಕಾಯ್ತು’ ಎಂಬ ಕ್ಯಾಪ್ಷನ್​ ನೀಡಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಕುರಿತಾಗಿಯೇ ಅವರು ಈ ಪೋಸ್ಟ್ ಶೇರ್​ ಮಾಡಿಕೊಂಡಿರುವುದು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಯಾಕೆಂದರೆ, ತರುಣ್​ ಸುಧೀರ್​ ಸಹ ಇದೇ ಪೋಸ್ಟ್​ ಹಂಚಿಕೊಂಡಿದ್ದಾರೆ.

‘ಕಡೆಗೂ ನಿರ್ದೇಶಕನಿಗೆ ತನ್ನ ಜೀವನದ ನಟಿ ಸಿಕ್ಕಳು’ ಎಂದು ತರುಣ್​ ಸುಧೀರ್​ ಅವರು ಕ್ಯಾಪ್ಷನ್​ ನೀಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳಿಂದ ಅಭಿನಂದನೆಯ ಕಮೆಂಟ್​ಗಳು ಹರಿದುಬರುತ್ತಿವೆ. ‘ರಾಬರ್ಟ್​’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ ಸೋನಲ್​ ಮಾಂತೆರೋ ಮತ್ತು ತರುಣ್​ ಸುಧೀರ್​ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಈ ಬಗ್ಗೆ ಅವರು ಶೀಘ್ರವೇ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.

ಸೋಮವಾರ (ಜುಲೈ 22) ಬೆಳಗ್ಗೆ 11.08 ಗಂಟೆಗೆ ಸೋನಲ್​ ಮಾಂತೆರೋ ಮತ್ತು ತರುಣ್​ ಸುಧೀರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಮದುವೆಯ ಬಗ್ಗೆ ವಿಡಿಯೋ ಹಂಚಿಕೊಳ್ಳುವ ನಿರೀಕ್ಷೆ ಇದೆ. ಮದುವೆಯ ದಿನಾಂಕದ ಬಗ್ಗೆಯೂ ಅವರು ಮಾಹಿತಿ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಜೋಡಿಗೆ ವಿಶ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ

ದರ್ಶನ್​ ಅವರಿಗೆ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಆಪ್ತರು. ಆದರೆ ಮದುವೆಯ ದಿನಾಂಕ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲಿ ದರ್ಶನ್​ ಅವರು ಜೈಲಿನಲ್ಲಿ ಇರುವುದು ಆಪ್ತರಿಗೆ ಬೇಸರ ಮೂಡಿಸಿದೆ. ಇತ್ತೀಚೆಗೆ ಪರಪ್ಪನ ಅಗ್ರಹಾರಕ್ಕೆ ತೆರಳಿ ತರುಣ್​ ಸುಧೀರ್​ ಅವರು ದರ್ಶನ್​ ಜೊತೆ ಮಾತನಾಡಿ ಬಂದಿದ್ದರು. ಯಾವುದೇ ಕಾರಣಕ್ಕೂ ಮದುವೆಯ ದಿನಾಂಕ ಬದಲಾಯಿಸುವುದು ಬೇಡ ಅಂತ ದರ್ಶನ್​ ಹೇಳಿರುವುದಾಗಿ ತರುಣ್​ ಸುಧೀರ್​ ಮಾಹಿತಿ ನೀಡಿದ್ದರು. ಅದರ ಬೆನ್ನಲ್ಲೇ ಅವರು ಗುಡ್​ ನ್ಯೂಸ್​ ನೀಡಲು ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?