AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್​ ಸುಧೀರ್​ ಜತೆಗಿನ ಮದುವೆ ಬಗ್ಗೆ ಮೊದಲ ಬಾರಿ ಮೌನ ಮುರಿದ ಸೋನಲ್​

ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಶೀಘ್ರದಲ್ಲೇ ಅವರ ಮದುವೆ ನೆರವೇರಲಿದೆ. ಈ ಬಗ್ಗೆ ಸೋನಲ್​ ಮಾಂತೆರೋ ಅವರು ಇದೇ ಮೊದಲ ಬಾರಿಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಜುಲೈ 22ರಂದು ಬೆಳಗ್ಗೆ 11.08 ಗಂಟೆಗೆ ಈ ಜೋಡಿಯ ಕಡೆಯಿಂದ ಗುಡ್​ ನ್ಯೂಸ್​ ಸಿಗಲಿದೆ.

ತರುಣ್​ ಸುಧೀರ್​ ಜತೆಗಿನ ಮದುವೆ ಬಗ್ಗೆ ಮೊದಲ ಬಾರಿ ಮೌನ ಮುರಿದ ಸೋನಲ್​
ಸೋನಲ್​ ಮಾಂತೆರೋ, ತರುಣ್​ ಸುಧೀರ್​
ಮದನ್​ ಕುಮಾರ್​
|

Updated on: Jul 21, 2024 | 5:34 PM

Share

ನಟಿ ಸೋನಲ್​ ಮಾಂತೆರೋ ಅವರು ನಿರ್ದೇಶಕ ತರುಣ್​ ಸುಧೀರ್​ ಜೊತೆ ಮದುವೆ ಆಗುತ್ತಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಈ ವಿಚಾರದ ಬಗ್ಗೆ ಸೋನಲ್​ ಅವರು ಮೌನವಾಗಿದ್ದರು. ಇದೇ ಮೊದಲ ಬಾರಿಗೆ ಅವರು ಮದುವೆ ಕುರಿತು ಮೌನ ಮುರಿದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರೊಂದು ಪೋಸ್ಟರ್​ ಹಂಚಿಕೊಂಡಿದ್ದು, ‘ಕಡೆಗೂ ನಟಿಗೆ ತನ್ನ ಬದುಕಿನ ನಿರ್ದೇಶಕ ಸಿಕ್ಕಾಯ್ತು’ ಎಂಬ ಕ್ಯಾಪ್ಷನ್​ ನೀಡಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಕುರಿತಾಗಿಯೇ ಅವರು ಈ ಪೋಸ್ಟ್ ಶೇರ್​ ಮಾಡಿಕೊಂಡಿರುವುದು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಯಾಕೆಂದರೆ, ತರುಣ್​ ಸುಧೀರ್​ ಸಹ ಇದೇ ಪೋಸ್ಟ್​ ಹಂಚಿಕೊಂಡಿದ್ದಾರೆ.

‘ಕಡೆಗೂ ನಿರ್ದೇಶಕನಿಗೆ ತನ್ನ ಜೀವನದ ನಟಿ ಸಿಕ್ಕಳು’ ಎಂದು ತರುಣ್​ ಸುಧೀರ್​ ಅವರು ಕ್ಯಾಪ್ಷನ್​ ನೀಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳಿಂದ ಅಭಿನಂದನೆಯ ಕಮೆಂಟ್​ಗಳು ಹರಿದುಬರುತ್ತಿವೆ. ‘ರಾಬರ್ಟ್​’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ ಸೋನಲ್​ ಮಾಂತೆರೋ ಮತ್ತು ತರುಣ್​ ಸುಧೀರ್​ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಈ ಬಗ್ಗೆ ಅವರು ಶೀಘ್ರವೇ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.

ಸೋಮವಾರ (ಜುಲೈ 22) ಬೆಳಗ್ಗೆ 11.08 ಗಂಟೆಗೆ ಸೋನಲ್​ ಮಾಂತೆರೋ ಮತ್ತು ತರುಣ್​ ಸುಧೀರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಮದುವೆಯ ಬಗ್ಗೆ ವಿಡಿಯೋ ಹಂಚಿಕೊಳ್ಳುವ ನಿರೀಕ್ಷೆ ಇದೆ. ಮದುವೆಯ ದಿನಾಂಕದ ಬಗ್ಗೆಯೂ ಅವರು ಮಾಹಿತಿ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಜೋಡಿಗೆ ವಿಶ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಮದುವೆ ಡೇಟ್ ಚೇಂಜ್ ಮಾಡಬೇಡ, ಅಷ್ಟರೊಳಗೆ ಬರ್ತೀನಿ’: ತರುಣ್​ಗೆ ದರ್ಶನ್​ ಭರವಸೆ

ದರ್ಶನ್​ ಅವರಿಗೆ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಆಪ್ತರು. ಆದರೆ ಮದುವೆಯ ದಿನಾಂಕ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲಿ ದರ್ಶನ್​ ಅವರು ಜೈಲಿನಲ್ಲಿ ಇರುವುದು ಆಪ್ತರಿಗೆ ಬೇಸರ ಮೂಡಿಸಿದೆ. ಇತ್ತೀಚೆಗೆ ಪರಪ್ಪನ ಅಗ್ರಹಾರಕ್ಕೆ ತೆರಳಿ ತರುಣ್​ ಸುಧೀರ್​ ಅವರು ದರ್ಶನ್​ ಜೊತೆ ಮಾತನಾಡಿ ಬಂದಿದ್ದರು. ಯಾವುದೇ ಕಾರಣಕ್ಕೂ ಮದುವೆಯ ದಿನಾಂಕ ಬದಲಾಯಿಸುವುದು ಬೇಡ ಅಂತ ದರ್ಶನ್​ ಹೇಳಿರುವುದಾಗಿ ತರುಣ್​ ಸುಧೀರ್​ ಮಾಹಿತಿ ನೀಡಿದ್ದರು. ಅದರ ಬೆನ್ನಲ್ಲೇ ಅವರು ಗುಡ್​ ನ್ಯೂಸ್​ ನೀಡಲು ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!