AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದಲ್ಲಿ ಕೆಟ್ಟ ಅನುಭವ ಆಗಿತ್ತು: ಸೊನಾಲಿ ಬೇಂದ್ರೆ

Sonali Bendre: ಸೊನಾಲಿ ಬೇಂದ್ರೆ 2000 ದಶಕದ ಸ್ಟಾರ್ ನಟಿ. ಹಿಂದಿ ಮಾತ್ರವಲ್ಲದೆ ತೆಲುಗು, ತಮಿಳಿನಲ್ಲಿಯೂ ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಕನ್ನಡದ ಕೇವಲ ಒಂದು ಸಿನಿಮಾದಲ್ಲಿ ಮಾತ್ರ ಸೊನಾಲಿ ನಟಿಸಿದ್ದಾರೆ. ಆದರೆ ಆ ಸಿನಿಮಾದಲ್ಲಿ ನಟಿಸುವಾಗ ಕೆಟ್ಟ ಅನುಭವ ಅವರಿಗೆ ಆಯ್ತಂತೆ.

ಕನ್ನಡ ಚಿತ್ರರಂಗದಲ್ಲಿ ಕೆಟ್ಟ ಅನುಭವ ಆಗಿತ್ತು: ಸೊನಾಲಿ ಬೇಂದ್ರೆ
Pree
ಮಂಜುನಾಥ ಸಿ.
|

Updated on: Apr 01, 2025 | 11:16 AM

Share

ಬಾಲಿವುಡ್ ನಟಿಯರು ಈಗ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಲು ತುದಿಗಾಲಲ್ಲಿ ನಿಂತಿದ್ದಾರೆ. ದಕ್ಷಿಣದ ಚಿತ್ರರಂಗದಲ್ಲಿ ಅವಕಾಶ ಸಿಕ್ಕರೆ ಸಾಕು ಎನ್ನುತ್ತಿದ್ದಾರೆ. ಇಲ್ಲಿ ನಟಿಸಿ ಹೋದವರು, ಬಾಲಿವುಡ್​ಗಿಂತಲೂ ದಕ್ಷಿಣ ಭಾರತ ಚಿತ್ರರಂಗ ಎಷ್ಟು ಎತ್ತದಲ್ಲಿದೆ, ಪ್ರತಿಭಾವಂತರು ಇಲ್ಲಿದ್ದಾರೆ ಎಂದೆಲ್ಲ ಸಂದರ್ಶನಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ. ಬಾಲಿವುಡ್​ನವರು ದಕ್ಷಿಣ ಭಾರತ ಚಿತ್ರರಂಗದವರಿಂದ ಕಲಿಯಬೇಕು ಎನ್ನುತ್ತಿದ್ದಾರೆ. ಆದರೆ ಬಾಲಿವುಡ್​ನ ಖ್ಯಾತ ನಟಿ ಸೊನಾಲಿ ಬೇಂದ್ರೆ ಮಾತ್ರ ದಕ್ಷಿಣ ಭಾರತ ಚಿತ್ರರಂಗದ ಬಗ್ಗೆ ತಕರಾರು ಎತ್ತಿದ್ದಾರೆ. ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ನಟಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಅಮೆಜಾನ್ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಸೊನಾಲಿ ಬೇಂದ್ರೆ, ಕನ್ನಡ ಚಿತ್ರರಂಗದಲ್ಲಿ ತಮಗೆ ಕಹಿ ಅನುಭವ ಆಯ್ತೆಂದು ಹೇಳಿಕೊಂಡಿದ್ದಾರೆ. ‘ನಾನು ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದೇನೆ. ಅದರ ನಡುವೆ ಒಂದು ಕನ್ನಡ ಸಿನಿಮಾದಲ್ಲಿ ನಾನು ನಟಿಸಿದ್ದೆ. ಆದರೆ ನನಗೆ ಆ ಸಿನಿಮಾದಲ್ಲಿ ಬಹಳ ಕೆಟ್ಟ ಅನುಭವ ಆಯ್ತು. ಇನ್ನೆಂದೂ ಕನ್ನಡ ಸಿನಿಮಾನಲ್ಲಿ ನಟಿಸುವಿದಲ್ಲ ಎಂಬ ನಿರ್ಧಾರ ಮಾಡಿದೆ. ಆ ನಂತರ ಎಂದೂ ನಾನು ಕನ್ನಡ ಸಿನಿಮಾನಲ್ಲಿ ನಟಿಸಲಿಲ್ಲ’ ಎಂದಿದ್ದಾರೆ.

ಸೊನಾಲಿ ಬೇಂದ್ರೆ ಕನ್ನಡದ ‘ಪ್ರೀತ್ಸೆ’ ಸಿನಿಮಾನಲ್ಲಿ ನಟಿಸಿದ್ದರು. ಈ ಸಿನಿಮಾನಲ್ಲಿ ಶಿವರಾಜ್ ಕುಮಾರ್ ನಾಯಕ, ಉಪೇಂದ್ರ ಸಹ ಇದ್ದರು. ಶಾರುಖ್ ಖಾನ್ ನಟನೆಯ ‘ಡರ್’ ಸಿನಿಮಾದ ರೀಮೇಕ್ ಆಗಿದೆ ಈ ಸಿನಿಮಾ. ಸಿನಿಮಾದಲ್ಲಿ ಉಪೇಂದ್ರ ಪಾಗಲ್ ಪ್ರೇಮಿಯಾಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಟಿಸುವಾಗ ಸೊನಾಲಿ ಬೇಂದ್ರೆಗೆ ಕೆಟ್ಟ ಅನುಭವ ಆಗಿತ್ತಂತೆ. ಹಾಗಾಗಿ ಅವರು ಮತ್ತೆಂದೂ ಸಹ ಕನ್ನಡ ಸಿನಿಮಾಗಳಲ್ಲಿ ನಟಿಸಲಿಲ್ಲವಂತೆ. ಆದರೆ ತಮಗೆ ಆದ ಕಹಿ ಅನುಭವ ಏನು ಎಂಬುದನ್ನು ಸೊನಾಲಿ ಬೇಂದ್ರೆ ಹೇಳಿಕೊಂಡಿಲ್ಲ.

ಇದನ್ನೂ ಓದಿ
Image
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ
Image
ಮಹೇಶ್ ಬಾಬು ಜೊತೆ ನಟಿಸಿದರೂ ಸಿಗದ ಅದೃಷ್ಟ; ಈಗ ಗೂಗಲ್​ನಲ್ಲಿ ಕೆಲಸ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಇದನ್ನೂ ಓದಿ:ಸೊನಾಲಿ ಬೇಂದ್ರೆಗೆ ಇರಿಸಿದ್ದ ಚುಕ್ಕಿಯನ್ನು ಅಳಿಸಿದವರು ಯಾರು?

ಕನ್ನಡದ ‘ಪ್ರೀತ್ಸೆ’ ಸಿನಿಮಾನಲ್ಲಿ ನಟಿಸುವ ಮುನ್ನ ತಮಿಳಿನ ಎರಡು ಸಿನಿಮಾಗಳಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದರು. ‘ಪ್ರೀತ್ಸೆ’ ಸಿನಿಮಾದ ಬಳಿಕ ಸೊನಾಲಿ ಬೇಂದ್ರೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ‘ಮುರಾರಿ’ ಸಿನಿಮಾ ಮೂಲಕ. ಆ ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ಅದಾದ ಬಳಿಕ ಹಲವಾರು ತೆಲುಗು ಸಿನಿಮಾಗಳಲ್ಲಿ ನಟಿಸಿದರು. 2004 ರಲ್ಲಿ ಬಿಡುಗಡೆ ಆದ ‘ಶಂಕರ್ ದಾದ ಎಂಬಿಬಿಎಸ್’ ಸೊನಾಲಿ ಬೇಂದ್ರೆಯ ಕೊನೆ ಸಿನಿಮಾ. ಅದಾದ ಬಳಿಕ ಸುಮಾರು 10 ವರ್ಷಗಳ ಕಾಲ ಯಾವ ಸಿನಿಮಾದಲ್ಲಿಯೂ ನಟಿಸಲಿಲ್ಲ ಸೊನಾಲಿ. ಆ ಬಳಿಕ ಮತ್ತೆ ಹತ್ತು ವರ್ಷ ಗ್ಯಾಪ್ ತೆಗೆದುಕೊಂಡು ಈಗ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?