AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20ನೇ ವಯಸ್ಸಿಗೆ ಮದುವೆ, ಮೂರೇ ತಿಂಗಳಿಗೆ ವೈಮನಸ್ಸು; ಸೋನು ಗೌಡ ಕಷ್ಟದ ಜರ್ನಿ

ಸೋನು ಗೌಡ ಅವರು 20ನೇ ವಯಸ್ಸಿನಲ್ಲಿ ಮದುವೆಯಾಗಿ ಕನ್ನಡ ಚಿತ್ರರಂಗಕ್ಕೆ ವಿದಾಯ ಹೇಳಿದರು. ಆದರೆ, ಮದುವೆಯಾದ ಮೂರು ತಿಂಗಳಲ್ಲೇ ದಂಪತಿಗಳ ನಡುವೆ ವೈಮನಸ್ಸು ಉಂಟಾಯಿತು. ಏಳು ವರ್ಷಗಳ ಕಾಲ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೂ, ಅಂತಿಮವಾಗಿ ವಿಚ್ಛೇದನ ಪಡೆದರು. ಆ ಬಗ್ಗೆ ಇಲ್ಲಿದೆ ವಿವರ.

20ನೇ ವಯಸ್ಸಿಗೆ ಮದುವೆ, ಮೂರೇ ತಿಂಗಳಿಗೆ ವೈಮನಸ್ಸು; ಸೋನು ಗೌಡ ಕಷ್ಟದ ಜರ್ನಿ
ಸೋನು ಗೌಡ
Follow us
ರಾಜೇಶ್ ದುಗ್ಗುಮನೆ
|

Updated on: Apr 17, 2025 | 2:53 PM

ಸೋನು ಗೌಡ (Sonu Gowda) ಅವರು ಕನ್ನಡದ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಈಗಲೂ ಬೇಡಿಕೆ ಇದೆ. 20 ವರ್ಷಕ್ಕೆ ಮದುವೆ ಆಗಿ ಅವರು ಚಿತ್ರರಂಗ ತೊರೆದಿದ್ದರು. ಆದರೆ, ಮದುವೆ ಆಗಿ 3 ತಿಂಗಳಿಗೆ ಎಲ್ಲವೂ ಬದಲಾಗಿ ಹೋಯಿತು. ಈ ಅವಧಿಯಲ್ಲಿ ಇಬ್ಬರ ಮಧ್ಯೆ ವೈಮನಸ್ಸು ಮೂಡಿತು. ಆದರೂ ಬರೋಬ್ಬರಿ 7 ವರ್ಷಗಳ ಕಾಲ ಸೋನು ಗೌಡ ಅವರು ಸಂಸಾರ ಸರಿ ಮಾಡುವ ಪ್ರಯತ್ನ ಮಾಡಿದರು. ಆದರೆ, ಸರಿ ಆಗಲೇ ಇಲ್ಲ. ಕೊನೆಗೆ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದರು.

ಸೋನು ಗೌಡ ಅವರು 2008ರಲ್ಲಿ ಬಂದ ‘ಇಂತಿ ನಿನ್ನ ಪ್ರೀತಿಯ’ ಚಿತ್ರದಲ್ಲಿ ನಟಿಸಿದರು. ಶ್ರೀನಗರ ಕಿಟ್ಟಿ ನಟನೆಯ ಈ ಚಿತ್ರಕ್ಕೆ ದುನಿಯಾ ಸೂರಿ ಅವರು ನಿರ್ದೇಶನ ಮಾಡಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಮೊದಲ ಚಿತ್ರದಲ್ಲೇ ಸೋನು ಗೌಡ ಎಲ್ಲರ ಗಮನ ಸೆಳೆದರು. ಅವರು ಕನ್ನಡ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗುತ್ತಾರೆ ಎಂದು ಎಲ್ಲರೂ ಭಾವಿಸಿದರು. ಆದರೆ, ಕೆಲವೇ ಸಮಯದಲ್ಲಿ ಅವರು ಒಂದು ದಿಟ್ಟ ನಿರ್ಧಾರ ತೆಗೆದುಕೊಂಡರು. ಈ ಬಗ್ಗೆ ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

20ನೇ ವಯಸ್ಸಿಗೆ ಸೋನು ಗೌಡ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. ತಾವು ಪ್ರೀತಿಸಿದ ಹುಡುಗನ ಜೊತೆ ಮದುವೆ ಆದರು. ‘ಪ್ರೀತಿಸಿದ ಹುಡುಗ ನನ್ನನ್ನು ನೋಡಿಕೊಳ್ಳುತ್ತಾನೆ ಎಂದು ಮದುವೆ ಬಳಿಕ ನಾನು ಬಣ್ಣದ ಲೋಕದಿಂದಲೂ ದೂರ ಆಗಲು ಮುಂದಾದೆ’ ಎಂದು ಸೋನು ಗೌಡ ಹೇಳಿಕೊಂಡಿದ್ದಾರೆ. ಆದರೆ, ಅಂದುಕೊಂಡಂತೆ ಯಾವುದೂ ನಡೆಯಲಿಲ್ಲ. ಮದುವೆ ಆದ ಮೂರೇ ತಿಂಗಳಿಗೆ ಎಲ್ಲವೂ ಬದಲಾಯಿತು. ಇಬ್ಬರ ಮಧ್ಯೆ ವೈಮನಸ್ಸು ಹೆಚ್ಚಿತು.

ಇದನ್ನೂ ಓದಿ
Image
ಹೊಸ ಹೆಜ್ಜೆ ಇಡಲು ಸಿದ್ಧರಾದ ಶೈಲಜಾ ನಾಗ್‌-ಬಿ. ಸುರೇಶ್‌ ಮಗಳು ಚಂದನಾ ನಾಗ್‌
Image
ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಸಂಬಂಧ ಈಗ ಹೇಗಿದೆ? ಇಲ್ಲಿದೆ ಉತ್ತರ  
Image
ಪೀರಿಯಡ್ಸ್ ಬಗ್ಗೆ ಓಪನ್​ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ; ಸಮಂತಾ
Image
ಚಿತ್ರರಂಗದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪವನ್ ಕಲ್ಯಾಣ್

ಪತಿ ಯಾವುದೇ ಕೆಲಸ ಮಾಡೋದಿಲ್ಲ ಎಂಬುದು ಸೋನು ಗೌಡ ಅವರ ದೂರಾಗಿತ್ತು. ಕೆಲಸ ಮಾಡುವ ಬಗ್ಗೆ ಆಸಕ್ತಿಯನ್ನೂ ಅವರು ತೋರಿಸುತ್ತಾ ಇರಲಿಲ್ಲ. ಕೊನೆಗೆ ಸೋನು ಗೌಡ ಅವರು ಚೆನ್ನೈಗೆ ತೆರಳಿ ಜಾಹೀರಾತು ಶೂಟ್​ಗಳನ್ನು ಮಾಡೋಕೆ ಆರಂಭಿಸಿದರು. ಆ ಸಂದರ್ಭದಲ್ಲಿ ಸೋನು ಅವರ ಡೆಬಿಟ್ ಕಾರ್ಡ್ ಇದ್ದಿದ್ದು ಅವರ ಪತಿ ಕೈಯಲ್ಲಿ! ಏನೇ ಆದರೂ ಸೋನು ಗೌಡ ಎಲ್ಲವನ್ನೂ ಸಹಿಸಿಕೊಳ್ಳುತ್ತಾ ಬಂದರು.

ಇದನ್ನೂ ಓದಿ: ಸೂಪರ್ ಸೋನು.. ಸೀರೆ ಫೋಟೋ ನೋಡಿ ಸೋನು ಗೌಡ ಫ್ಯಾನ್ಸ್ ಕಮೆಂಟ್​

ಆದರೆ, ಮದುವೆ ಆಗಿ ಏಳು ವರ್ಷಗಳ ಬಳಿಕ ಖಾಸಗಿ ಫೋಟೋ ಲೋಕ್ ಆಗಿ ವಿವಾದ ಆಯಿತು. ಈ ಘಟನೆ ಸೋನುನ ಕಂಗಾಲು ಮಾಡಿತು. ಈ ವಿವಾದ ಮಾಡಿದ್ದು ಸೋನು ಅವರ ಪತಿ ಎಂಬ ಆರೋಪ ಬಂತು. ಈ ಘಟನೆ ಇವರ ಸಂಬಂಧವನ್ನು ಮತ್ತಷ್ಟು ಹದಗೆಡಿಸಿತು. ಆ ಬಳಿಕ ಇವರಿಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ