AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಕೆಣಕಿದ ಸೋನು ನಿಗಮ್​ ಸ್ಯಾಂಡಲ್​ವುಡ್​ನಿಂದ ಬ್ಯಾನ್​, ಒಂದೇ ದಿನ ಡಬಲ್ ಶಾಕ್

ಸೋನು ನಿಗಮ್ ಅವರ ವಿವಾದಾತ್ಮಕ ಹೇಳಿಕೆಯಿಂದ ಕನ್ನಡ ಚಿತ್ರರಂಗ ಆಕ್ರೋಶಗೊಂಡಿದೆ. ಅವರ ವಿರುದ್ಧ ಪೊಲೀಸ್ ನೋಟಿಸ್ ಜಾರಿಯಾಗಿದೆ ಮತ್ತು ಚಿತ್ರರಂಗ ಅವರನ್ನು ಬಹಿಷ್ಕರಿಸಿದೆ. ಇದು ಅವರ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಕ್ಷಮೆಯಾಚನೆ ಮಾಡದಿರುವುದು ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಕನ್ನಡಿಗರ ಕೆಣಕಿದ ಸೋನು ನಿಗಮ್​ ಸ್ಯಾಂಡಲ್​ವುಡ್​ನಿಂದ ಬ್ಯಾನ್​, ಒಂದೇ ದಿನ ಡಬಲ್ ಶಾಕ್
ಸೋನು ನಿಗಮ್
ರಾಜೇಶ್ ದುಗ್ಗುಮನೆ
| Edited By: |

Updated on:May 05, 2025 | 3:18 PM

Share

ಕನ್ನಡಿಗರ ಬಗ್ಗೆ ಸೋನು ನಿಗಮ್ (Sonu Nigam) ಕೊಟ್ಟ ಹೇಳಿಕೆ ಅವರಿಗೆ ತುಂಬಾನೇ ದುಬಾರಿ ಆಗಿದೆ. ಒಂದು ಕಡೆ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಸೋನು ನಿಗಮ್​ಗೆ ಡಬಲ್ ಶಾಕ್ ಸಿಕ್ಕಿದೆ. ಒಂದು ಕಡೆ ಅವರಿಗೆ ನೋಟಿಸ್ ಜಾರಿ ಆಗಿದೆ. ಮತ್ತೊಂದು ಕಡೆ ಅವ​​ರಿಂದ ಕನ್ನಡ ಹಾಡುಗಳನ್ನು ಹಾಡಿಸದಿರುವ ನಿರ್ಧಾರ ಮಾಡಲಾಗಿದೆ. ಈ ಎಲ್ಲಾ ಬೆಳವಣಿಗೆ ಸೋನು ನಿಗಮ್​ ವೃತ್ತಿ ಜೀವನದ ಮೇಲೆ ನೇರ ಪರಿಣಾಮವನ್ನು ಉಂಟು ಮಾಡುವ ಸಾಧ್ಯತೆ ಇದೆ.

ಸೋನು ನಿಗಮ್​ಗೆ ಕನ್ನಡದ ಮೇಲೆ ವಿಶೇಷ ಪ್ರೀತಿ-ಗೌರವ ಇದ್ದಿದ್ದು ನಿಜ. ಆದರೆ, ಅವರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಕನ್ನಡ ಕನ್ನಡ.. ಹೀಗೆ ಹೇಳಿದ್ದರಿಂದಲೇ ಪಹಲ್ಗಾಮ್ ದಾಳಿ ಆಯಿತು’ ಎನ್ನುವ ಮೂಲಕ ಸೋನು ನಿಗಮ್ ಸುಖಾ ಸುಮ್ಮನೆ ತಮ್ಮ ಮೇಲೆ ವಿವಾದವನ್ನು ಎಳೆದುಕೊಂಡರು. ಆ ಬಳಿಕ ಅವರು ಹೇಳಿಕೆಗೆ ಸ್ಪಷ್ಟನೆ ಕೊಟ್ಟರೇ ಹೊರತು ಕ್ಷಮೆ ಕೇಳಿಲ್ಲ. ಈಗ ಇದನ್ನು ಗಂಭೀರವಾಗಿ ಪರಿಗಣಿಸಿರೋ ಕರ್ನಾಟಕ ಫಿಲ್ಮ್ ಚೇಂಬರ್ ಅವರಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ.

ಈ ಬಗ್ಗೆ ಮಾತನಾಡಿರೋ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ‘ಘಟನೆ ಬಳಿಕ ಈವರೆಗೂ ಸೋನು ನಿಗಮ್​ ಕನ್ನಡಿಗರ ಬಳಿ ಕ್ಷಮೆ‌ ಕೇಳಿಲ್ಲ.  ಇನ್ನು ಮುಂದೆ ಸೋನು ನಿಗಮ್ ಅವರಿಂದ ಚಿತ್ರರಂಗದವರು ಮ್ಯೂಸಿಕಲ್ ನೈಟ್ಸ್ ಮಾಡುವುದಿಲ್ಲ. ಅವರ ಬಳಿ ಹಾಡನ್ನು ಹಾಡಿಸೋದಿಲ್ಲ. ಈ ಕ್ಷಣದಿಂದಲೇ ಸೋನುಗೆ ಅಸಹಕಾರ ತೋರಬೇಕೆಂದು ನಿರ್ಧಾರ ಮಾಡಲಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ
Image
ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ
Image
ಅಪಘಾತದ ಬಳಿಕ ಬದಲಾಯಿತು ನಾನಿ ಬದುಕು; ಅಂದು ಆಗಿದ್ದೇನು?
Image
ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟ ಶ್ರೀಲೀಲಾ; ಕೇಳಿಬಂತು ಹೊಸ ಗಾಸಿಪ್
Image
ಸಾರಾ ತೆಂಡೂಲ್ಕರ್​ಗೆ ಹೊಸ ಬಾಯ್​ಫ್ರೆಂಡ್; ಸ್ಟಾರ್ ನಟನ ಜೊತೆ ಡೇಟಿಂಗ್?

ಸೋನು ನಿಗಮ್ ಅವರು ಸಂಗೀತವನ್ನೇ ನಂಬಿಕೊಂಡು ಇದ್ದವರು. ಮ್ಯೂಸಿಕಲ್ ನೈಟ್ಸ್​ ಹಾಗೂ ಹಾಡು ಹೇಳುವುದರಿಂದ ಅವರಿಗೆ ಗಳಿಕೆ ಆಗುತ್ತಿದೆ. ಆದರೆ, ಈಗ ಅವರು ಕನ್ನಡ ಸಿನಿಮಾಗಳಿಗೆ ಹಾಡನ್ನು ಹೇಳಲು ಸಾಧ್ಯವಾಗದೇ ಇರೋದು ಅವರಿಗೆ ಒಂದು ರೀತಿಯಲ್ಲಿ ನಷ್ಟವೇ. ಈ ನಿರ್ಧಾರದ ಬಗ್ಗೆ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕಿದೆ.

ಇದನ್ನೂ ಓದಿ: ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್

ಗಾಯಕನಿಗೆ ನೋಟಿಸ್

ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಆವಲಹಳ್ಳಿ ಠಾಣೆ ಪೊಲೀಸರಿಂದ ಸೋನು ನಿಗಮ್​ಗೆ ನೋಟಿಸ್​ ನೀಡಲಾಗಿದೆ. ಈ ಮೇಲ್ ಹಾಗೂ ಪೋಸ್ಟ್ ಮೂಲಕ ಸೋನುಗೆ ನೋಟಿಸ್ ಹೋಗಿದೆ. ನೋಟಿಸ್ ತಲುಪಿದ 1 ವಾರದೊಳಗಡೆ ವಿವರಣೆ ನೀಡಲು ಸೂಚನೆ ನೀಡಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Mon, 5 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ