AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಆದೇಶಕ್ಕೆ ಅಗೌರವ, ಬೆಂಗಳೂರು ಪೊಲೀಸರ ಸತಾಯಿಸುತ್ತಿರುವ ಸೋನು

Sonu Nigam: ಕನ್ನಡಿಗರ ಭಾಷಾ ಪ್ರೇಮವನ್ನು ಭಯೋತ್ಪಾದನೆಗೆ ಹೋಲಿಸಿದ್ದ ಸೋನು ನಿಗಂ ಈಗ ರಾಜ್ಯ ಹೈಕೋರ್ಟ್ ಆದೇಶಕ್ಕೆ ಅಗೌರವ ತೋರಿದ್ದಾರೆ. ಅಲ್ಲದೆ ಬೆಂಗಳೂರು ಪೊಲೀಸರನ್ನು ಸತಾಯಿಸುತ್ತಿದ್ದಾರೆ. ಪ್ರಕರಣದಲ್ಲಿ ಹೇಳಿಕೆ ದಾಖಲಿಸಲು ಸೋನು ನಿಗಂ ಉದ್ದೇಶಪೂರ್ವಕವಾಗಿ ವಿಳಂಬಿಸುತ್ತಿದ್ದು, ಪ್ರಕರಣವನ್ನು ಹೈಕೋರ್ಟ್ ಗಮನಕ್ಕೆ ತರಲು ಪೊಲೀಸರು ಮುಂದಾಗಿದ್ದಾರೆ.

ಹೈಕೋರ್ಟ್​ ಆದೇಶಕ್ಕೆ ಅಗೌರವ, ಬೆಂಗಳೂರು ಪೊಲೀಸರ ಸತಾಯಿಸುತ್ತಿರುವ ಸೋನು
Sonu Nigam
ಮಂಜುನಾಥ ಸಿ.
|

Updated on: Jun 17, 2025 | 12:12 PM

Share

ಕಮಲ್ ಹಾಸನ್ (Kamal Haasan) ಕನ್ನಡದ ಬಗ್ಗೆ ಆಡಿದ ಮಾತಿಗೆ ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಅದಕ್ಕೆ ಮುಂಚೆಯೇ ಬಾಲಿವುಡ್ ಗಾಯಕ ಸೋನು ನಿಗಂ ಸಹ ಕನ್ನಡಿಗರ ಬಗ್ಗೆ ಅಗೌರವದ ಮಾತನ್ನಾಡಿದ್ದರು. ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದನೆಗೆ ಹೋಲಿಸಿದ್ದರು. ಸೋನು ನಿಗಂ ಹೇಳಿಕೆ ಬಗ್ಗೆಯೂ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು.

ದೂರಿನ ವಿರುದ್ಧ ಸೋನು ನಿಗಂ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸೋನು ನಿಗಂ ಮನವಿಗೆ ಸ್ಪಂದಿಸಿದ್ದ ನ್ಯಾಯಾಲವು ಸೋನು ನಿಗಂ ವಿರುದ್ಧ ಬಲವಂತದ ಪ್ರಕ್ರಿಯೆ ಬೇಡ ಎಂದಿತ್ತು. ಆದರೆ ಸೋನು ನಿಗಂ ಅವರು ಪೊಲೀಸರ ಮುಂದೆ ನೇರವಾಗಿ ಅಥವಾ ಆನ್​ಲೈನ್ ಮೂಲಕ ಹೇಳಿಕೆ ದಾಖಲಿಸುವಂತೆ ಸೂಚಿಸಿತ್ತು. ಆದರೆ ಸೋನು ನಿಗಂ, ಈ ವರೆಗೆ ಹೇಳಿಕೆ ದಾಖಲಿಸಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ:ಸೋನು ನಿಗಂ ವಿಚಾರೆಣೆಗೆ ಮುಂಬೈಗೆ ಹೊರಟ ಬೆಂಗಳೂರು ಪೊಲೀಸರು

ಆವಲಹಳ್ಳಿ ಪೊಲೀಸರು, ಸೋನು ನಿಗಂ ಅವರನ್ನು ಸಂಪರ್ಕಿಸಿದ್ದು, ಪ್ರತಿಬಾರಿಯೂ ಅವರು ವಿಚಾರಣೆಯನ್ನು ಮುಂದೂಡುತ್ತಲೇ ಬರುತ್ತಿದ್ದಾರೆ ಎನ್ನಲಾಗಿದೆ. ಪ್ರತಿ ಬಾರಿಯೂ ನೆವ ಹೇಳಿ ತಪ್ಪಿಸಿಕೊಳ್ಳುತ್ತಿದ್ದು, ಅಧಿಕೃತವಾಗಿ ಹೇಳಿಕೆ ದಾಖಲಿಸುತ್ತಿಲ್ಲವಂತೆ. ಇದೇ ಕಾರಣಕ್ಕೆ ಆವಲಹಳ್ಳಿ ಪೊಲೀಸರು, ಈ ವಿಷಯವನ್ನು ಹೈಕೋರ್ಟ್​ ಗಮನಕ್ಕೆ ತರಲು ಸಿದ್ಧವಾಗಿದ್ದು, ಪ್ರಕರಣದಲ್ಲಿ ಹೈಕೋರ್ಟ್ ಏನು ಆದೇಶ ನೀಡಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಕಳೆದ ತಿಂಗಳು ಬೆಂಗಳೂರಿನ ಕಾಲೇಜೊಂದರಲ್ಲಿ ಲೈವ್ ಕಾರ್ಯಕ್ರಮ ನೀಡಿದ್ದ ಸೋನು ನಿಗಂ, ವಿದ್ಯಾರ್ಥಿಯೋರ್ವ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದಾಗ ಸಿಟ್ಟಾಗಿದ್ದ ಸೋನು ನಿಗಂ, ‘ಈ ರೀತಿಯ ಮನಸ್ಥಿತಿಯವರಿಂದಲೇ ಪಹಲ್ಗಾಮ್ ದಾಳಿ ನಡೆದಿದ್ದು’ ಎಂದಿದ್ದರು. ಸೋನು ನಿಗಂ ಹೇಳಿಕೆ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕನ್ನಡಪರ ಸಂಘಟನೆಗಳು ಫಿಲಂ ಚೇಂಬರ್​ಗೆ ದೂರು ನೀಡಿದ್ದರು. ಒಂದು ಸಿನಿಮಾದಿಂದ ಸೋನು ನಿಗಂ ಹಾಡಿದ್ದ ಹಾಡನ್ನು ಸಹ ತೆಗೆದು ಹಾಕಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ