AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ Super Hero ಸೋನು ಏನು ಮಾಡಿದ್ದಾರೆ ನೋಡಿ?!

ಮುಂಬೈ: ಕೊರೊನಾ ಲಾಕ್​ಡೌನ್​ ವೇಳೆಯಲ್ಲಿ ಹಲವಾರು ವಲಸೆ ಕಾರ್ಮಿಕರ ನೆರವಿಗೆ ಧಾವಿಸಿದ್ದ ಬಹುಭಾಷಾ ನಟ ಸೋನು ಸೂದ್​ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇದಲ್ಲದೆ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ಮಂದಿಗೂ ಸಹಾಯದ ಹಸ್ತ ಚಾಚಿದ್ದರು. ಇದೀಗ, ಈ ನಟ ಮತ್ತೊಮ್ಮೆ ವಲಸೆ ಕಾರ್ಮಿಕರ ಆಪದ್ಬಾಂಧವರಾಗಿದ್ದಾರೆ. ಶನಿವಾರ ಗಣೇಶನ ಹಬ್ಬ. ಹೀಗಾಗಿ, ಮಹಾರಾಷ್ಟ್ರದ ಬೇರೆ ಭಾಗಗಳಿಂದ ಬಂದು ಮುಂಬೈನಲ್ಲಿ ನೆಲೆಸಿದ್ದ ಸುಮಾರು 300- 500 ವಲಸೆ ಕಾರ್ಮಿಕರನ್ನ ಹಬ್ಬದ ಪ್ರಯುಕ್ತವಾಗಿ ತಮ್ಮ […]

ಗಣೇಶನ ಹಬ್ಬಕ್ಕೆ Super Hero ಸೋನು ಏನು ಮಾಡಿದ್ದಾರೆ ನೋಡಿ?!
KUSHAL V
| Updated By: ಸಾಧು ಶ್ರೀನಾಥ್​|

Updated on: Aug 20, 2020 | 6:37 PM

Share

ಮುಂಬೈ: ಕೊರೊನಾ ಲಾಕ್​ಡೌನ್​ ವೇಳೆಯಲ್ಲಿ ಹಲವಾರು ವಲಸೆ ಕಾರ್ಮಿಕರ ನೆರವಿಗೆ ಧಾವಿಸಿದ್ದ ಬಹುಭಾಷಾ ನಟ ಸೋನು ಸೂದ್​ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇದಲ್ಲದೆ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ಮಂದಿಗೂ ಸಹಾಯದ ಹಸ್ತ ಚಾಚಿದ್ದರು. ಇದೀಗ, ಈ ನಟ ಮತ್ತೊಮ್ಮೆ ವಲಸೆ ಕಾರ್ಮಿಕರ ಆಪದ್ಬಾಂಧವರಾಗಿದ್ದಾರೆ. ಶನಿವಾರ ಗಣೇಶನ ಹಬ್ಬ. ಹೀಗಾಗಿ, ಮಹಾರಾಷ್ಟ್ರದ ಬೇರೆ ಭಾಗಗಳಿಂದ ಬಂದು ಮುಂಬೈನಲ್ಲಿ ನೆಲೆಸಿದ್ದ ಸುಮಾರು 300- 500 ವಲಸೆ ಕಾರ್ಮಿಕರನ್ನ ಹಬ್ಬದ ಪ್ರಯುಕ್ತವಾಗಿ ತಮ್ಮ ಊರುಗಳಿಗೆ ತೆರಳಲು ಸೋನು ಸೂದ್ ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡ ಸೋನು ಕಳೆದ ಕೆಲವು ದಿನಗಳ ಹಿಂದೆ ಪ್ರಭಾದೇವಿಯ ಬಳಿ ಇರುವ ಸಿದ್ಧಿವಿನಾಯಕ ದೇವಸ್ಥಾನದ ಹಿಂದೆ ವಾಸವಿರುವ ವಲಸೆ ಕಾರ್ಮಿಕರು ನನ್ನನ್ನು ಭೇಟಿ ಮಾಡಿ ಬಸ್​ ವ್ಯವಸ್ಥೆ ಮಾಡಿಕೊಡಲು ಮನವಿ ಮಾಡಿದ್ದರು. ಹಾಗಾಗಿ, ನಾನು ಅವರಿಗೆಲ್ಲಾ ಬಸ್​ ವ್ಯವಸ್ಥೆ ಮಾಡಿಕೊಟ್ಟೆ ಎಂದು ಹೇಳಿದ್ದಾರೆ.

ಬರೀ ಇದೇ ಅಲ್ಲ, ಲಾಕ್​ಡೌನ್​ ವೇಳೆಯಲ್ಲಿ ಸೋನು ಸುಮಾರು 1 ಲಕ್ಷ ಜನರಿಗೆ ಉದ್ಯೋಗಾವಕಾಶ ಸಹ ಮಾಡಿಕೊಟ್ಟಿದ್ದಾರಂತೆ. ಸೋನು ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ