AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ Super Hero ಸೋನು ಏನು ಮಾಡಿದ್ದಾರೆ ನೋಡಿ?!

ಮುಂಬೈ: ಕೊರೊನಾ ಲಾಕ್​ಡೌನ್​ ವೇಳೆಯಲ್ಲಿ ಹಲವಾರು ವಲಸೆ ಕಾರ್ಮಿಕರ ನೆರವಿಗೆ ಧಾವಿಸಿದ್ದ ಬಹುಭಾಷಾ ನಟ ಸೋನು ಸೂದ್​ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇದಲ್ಲದೆ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ಮಂದಿಗೂ ಸಹಾಯದ ಹಸ್ತ ಚಾಚಿದ್ದರು. ಇದೀಗ, ಈ ನಟ ಮತ್ತೊಮ್ಮೆ ವಲಸೆ ಕಾರ್ಮಿಕರ ಆಪದ್ಬಾಂಧವರಾಗಿದ್ದಾರೆ. ಶನಿವಾರ ಗಣೇಶನ ಹಬ್ಬ. ಹೀಗಾಗಿ, ಮಹಾರಾಷ್ಟ್ರದ ಬೇರೆ ಭಾಗಗಳಿಂದ ಬಂದು ಮುಂಬೈನಲ್ಲಿ ನೆಲೆಸಿದ್ದ ಸುಮಾರು 300- 500 ವಲಸೆ ಕಾರ್ಮಿಕರನ್ನ ಹಬ್ಬದ ಪ್ರಯುಕ್ತವಾಗಿ ತಮ್ಮ […]

ಗಣೇಶನ ಹಬ್ಬಕ್ಕೆ Super Hero ಸೋನು ಏನು ಮಾಡಿದ್ದಾರೆ ನೋಡಿ?!
KUSHAL V
| Edited By: |

Updated on: Aug 20, 2020 | 6:37 PM

Share

ಮುಂಬೈ: ಕೊರೊನಾ ಲಾಕ್​ಡೌನ್​ ವೇಳೆಯಲ್ಲಿ ಹಲವಾರು ವಲಸೆ ಕಾರ್ಮಿಕರ ನೆರವಿಗೆ ಧಾವಿಸಿದ್ದ ಬಹುಭಾಷಾ ನಟ ಸೋನು ಸೂದ್​ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇದಲ್ಲದೆ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ಮಂದಿಗೂ ಸಹಾಯದ ಹಸ್ತ ಚಾಚಿದ್ದರು. ಇದೀಗ, ಈ ನಟ ಮತ್ತೊಮ್ಮೆ ವಲಸೆ ಕಾರ್ಮಿಕರ ಆಪದ್ಬಾಂಧವರಾಗಿದ್ದಾರೆ. ಶನಿವಾರ ಗಣೇಶನ ಹಬ್ಬ. ಹೀಗಾಗಿ, ಮಹಾರಾಷ್ಟ್ರದ ಬೇರೆ ಭಾಗಗಳಿಂದ ಬಂದು ಮುಂಬೈನಲ್ಲಿ ನೆಲೆಸಿದ್ದ ಸುಮಾರು 300- 500 ವಲಸೆ ಕಾರ್ಮಿಕರನ್ನ ಹಬ್ಬದ ಪ್ರಯುಕ್ತವಾಗಿ ತಮ್ಮ ಊರುಗಳಿಗೆ ತೆರಳಲು ಸೋನು ಸೂದ್ ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡ ಸೋನು ಕಳೆದ ಕೆಲವು ದಿನಗಳ ಹಿಂದೆ ಪ್ರಭಾದೇವಿಯ ಬಳಿ ಇರುವ ಸಿದ್ಧಿವಿನಾಯಕ ದೇವಸ್ಥಾನದ ಹಿಂದೆ ವಾಸವಿರುವ ವಲಸೆ ಕಾರ್ಮಿಕರು ನನ್ನನ್ನು ಭೇಟಿ ಮಾಡಿ ಬಸ್​ ವ್ಯವಸ್ಥೆ ಮಾಡಿಕೊಡಲು ಮನವಿ ಮಾಡಿದ್ದರು. ಹಾಗಾಗಿ, ನಾನು ಅವರಿಗೆಲ್ಲಾ ಬಸ್​ ವ್ಯವಸ್ಥೆ ಮಾಡಿಕೊಟ್ಟೆ ಎಂದು ಹೇಳಿದ್ದಾರೆ.

ಬರೀ ಇದೇ ಅಲ್ಲ, ಲಾಕ್​ಡೌನ್​ ವೇಳೆಯಲ್ಲಿ ಸೋನು ಸುಮಾರು 1 ಲಕ್ಷ ಜನರಿಗೆ ಉದ್ಯೋಗಾವಕಾಶ ಸಹ ಮಾಡಿಕೊಟ್ಟಿದ್ದಾರಂತೆ. ಸೋನು ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ