AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶನ ಹಬ್ಬಕ್ಕೆ Super Hero ಸೋನು ಏನು ಮಾಡಿದ್ದಾರೆ ನೋಡಿ?!

ಮುಂಬೈ: ಕೊರೊನಾ ಲಾಕ್​ಡೌನ್​ ವೇಳೆಯಲ್ಲಿ ಹಲವಾರು ವಲಸೆ ಕಾರ್ಮಿಕರ ನೆರವಿಗೆ ಧಾವಿಸಿದ್ದ ಬಹುಭಾಷಾ ನಟ ಸೋನು ಸೂದ್​ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇದಲ್ಲದೆ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ಮಂದಿಗೂ ಸಹಾಯದ ಹಸ್ತ ಚಾಚಿದ್ದರು. ಇದೀಗ, ಈ ನಟ ಮತ್ತೊಮ್ಮೆ ವಲಸೆ ಕಾರ್ಮಿಕರ ಆಪದ್ಬಾಂಧವರಾಗಿದ್ದಾರೆ. ಶನಿವಾರ ಗಣೇಶನ ಹಬ್ಬ. ಹೀಗಾಗಿ, ಮಹಾರಾಷ್ಟ್ರದ ಬೇರೆ ಭಾಗಗಳಿಂದ ಬಂದು ಮುಂಬೈನಲ್ಲಿ ನೆಲೆಸಿದ್ದ ಸುಮಾರು 300- 500 ವಲಸೆ ಕಾರ್ಮಿಕರನ್ನ ಹಬ್ಬದ ಪ್ರಯುಕ್ತವಾಗಿ ತಮ್ಮ […]

ಗಣೇಶನ ಹಬ್ಬಕ್ಕೆ Super Hero ಸೋನು ಏನು ಮಾಡಿದ್ದಾರೆ ನೋಡಿ?!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 20, 2020 | 6:37 PM

Share

ಮುಂಬೈ: ಕೊರೊನಾ ಲಾಕ್​ಡೌನ್​ ವೇಳೆಯಲ್ಲಿ ಹಲವಾರು ವಲಸೆ ಕಾರ್ಮಿಕರ ನೆರವಿಗೆ ಧಾವಿಸಿದ್ದ ಬಹುಭಾಷಾ ನಟ ಸೋನು ಸೂದ್​ ಕಾರ್ಮಿಕರು ತಮ್ಮ ಊರುಗಳನ್ನು ತಲುಪಲು ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಇದಲ್ಲದೆ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ನೂರಾರು ಮಂದಿಗೂ ಸಹಾಯದ ಹಸ್ತ ಚಾಚಿದ್ದರು. ಇದೀಗ, ಈ ನಟ ಮತ್ತೊಮ್ಮೆ ವಲಸೆ ಕಾರ್ಮಿಕರ ಆಪದ್ಬಾಂಧವರಾಗಿದ್ದಾರೆ. ಶನಿವಾರ ಗಣೇಶನ ಹಬ್ಬ. ಹೀಗಾಗಿ, ಮಹಾರಾಷ್ಟ್ರದ ಬೇರೆ ಭಾಗಗಳಿಂದ ಬಂದು ಮುಂಬೈನಲ್ಲಿ ನೆಲೆಸಿದ್ದ ಸುಮಾರು 300- 500 ವಲಸೆ ಕಾರ್ಮಿಕರನ್ನ ಹಬ್ಬದ ಪ್ರಯುಕ್ತವಾಗಿ ತಮ್ಮ ಊರುಗಳಿಗೆ ತೆರಳಲು ಸೋನು ಸೂದ್ ಉಚಿತ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡ ಸೋನು ಕಳೆದ ಕೆಲವು ದಿನಗಳ ಹಿಂದೆ ಪ್ರಭಾದೇವಿಯ ಬಳಿ ಇರುವ ಸಿದ್ಧಿವಿನಾಯಕ ದೇವಸ್ಥಾನದ ಹಿಂದೆ ವಾಸವಿರುವ ವಲಸೆ ಕಾರ್ಮಿಕರು ನನ್ನನ್ನು ಭೇಟಿ ಮಾಡಿ ಬಸ್​ ವ್ಯವಸ್ಥೆ ಮಾಡಿಕೊಡಲು ಮನವಿ ಮಾಡಿದ್ದರು. ಹಾಗಾಗಿ, ನಾನು ಅವರಿಗೆಲ್ಲಾ ಬಸ್​ ವ್ಯವಸ್ಥೆ ಮಾಡಿಕೊಟ್ಟೆ ಎಂದು ಹೇಳಿದ್ದಾರೆ.

ಬರೀ ಇದೇ ಅಲ್ಲ, ಲಾಕ್​ಡೌನ್​ ವೇಳೆಯಲ್ಲಿ ಸೋನು ಸುಮಾರು 1 ಲಕ್ಷ ಜನರಿಗೆ ಉದ್ಯೋಗಾವಕಾಶ ಸಹ ಮಾಡಿಕೊಟ್ಟಿದ್ದಾರಂತೆ. ಸೋನು ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ