AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಗೌಡ ಕೇಸ್: ಮಗುವನ್ನು ಮಾರಾಟ ಮಾಡಿಲ್ಲ, ದತ್ತು ನೀಡಿಲ್ಲ ಎಂದ ಬಾಲಕಿಯ ಪಾಲಕರು

ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸೋನು ಶ್ರೀನಿವಾಸ್ ಗೌಡ ಅವರು ಇತ್ತೀಚೆಗೆ ಅರೆಸ್ಟ್ ಆದರು. ಆ ಬಳಿಕ ಅವರನ್ನು ಬಂಧಿಸಲಾಯಿತು. ಯಾವುದೇ ಕಾನೂನಿನ ನಿಯಮ ಪಾಲಿಸದೆ ಅವರು ದತ್ತು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಸೋನು ಗೌಡ ಕೇಸ್: ಮಗುವನ್ನು ಮಾರಾಟ ಮಾಡಿಲ್ಲ, ದತ್ತು ನೀಡಿಲ್ಲ ಎಂದ ಬಾಲಕಿಯ ಪಾಲಕರು
ಸೋನು
TV9 Web
| Edited By: |

Updated on: Mar 26, 2024 | 8:27 AM

Share

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಟಿಕ್ ಟಾಕ್ ಹಾಗೂ ರೀಲ್ಸ್ ಮಾಡಿ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ, ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈಗ ಬಾಲಕಿಯ ಪಾಲಕರು ನೀಡಿದ ಹೇಳಿಕೆಯಿಂದ ಸೋನು ಶ್ರೀನಿವಾಸ್ ಗೌಡ ಕೊಂಚ ನಿಟ್ಟುಸಿರು ಬಿಡುವಂತೆ ಆಗಿದೆ. ‘ನಾವು ಮಗುವನ್ನು ಮಾರಿಲ್ಲ’ ಎಂದು ಪಾಲಕರು ಹೇಳಿಕೆ ನೀಡಿದ್ದಾರೆ.

ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸೋನು ಶ್ರೀನಿವಾಸ್ ಗೌಡ ಅವರು ಇತ್ತೀಚೆಗೆ ಅರೆಸ್ಟ್ ಆದರು. ಆ ಬಳಿಕ ಅವರನ್ನು ಬಂಧಿಸಲಾಯಿತು. ಯಾವುದೇ ಕಾನೂನಿನ ನಿಯಮ ಪಾಲಿಸದೆ ಅವರು ದತ್ತು ತೆಗೆದುಕೊಂಡಿದ್ದರು ಎನ್ನಲಾಗಿದೆ. ಮೊದಲು ಪೊಲೀಸ್​ ಕಸ್ಟಡಿಯಲ್ಲಿ ಇದ್ದ ಸೋನು, ಈಗ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈಗ ಮಗು ದತ್ತು ಪಡೆದ ಬಗ್ಗೆ ಪೋಷಕರು ಹೇಳಿದ್ದಾರೆ.

ಇತ್ತೀಚೆಗೆ ಬಾಲಕಿಯ ಪೋಷಕರಿಗೆ ಪೊಲೀಸರು ಸಮನ್ಸ್ ನೀಡಿದ್ದರು. ಪೊಲೀಸರು ಎದುರು ಬಾಲಕಿಯ ಪಾಲಕರು ಹಾಜರಾಗಿದ್ದಾರೆ. ‘ಸೋನು ಗೌಡ ಅವರನ್ನು ಮಗು ಹಚ್ಚಿಕೊಂಡಿತ್ತು. ಅನಾರೋಗ್ಯ ಉಂಟಾದಾಗ ಸೋನು ಸೋನು ಅಂತಾ ಕನವರಿಸ್ತಿತ್ತು. ಒಂದೆರಡು ದಿನ ಸೋನು ಜೊತೆ ಇರಲಿ ಅಂತಾ ಕಳಿಸಿದ್ದೆವು. ನಾವು ಮಗುವನ್ನ ಸೋನುಗೆ ಮಾರಾಟ ಮಾಡಿಲ್ಲ’ ಎಂದು ಬ್ಯಾಡರಹಳ್ಳಿ ಪೊಲೀಸರ ಮುಂದೆ ಮಗು ಪಾಲಕರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸೋನು ಶ್ರೀನಿವಾಸ ಗೌಡಗೆ ಹೆಚ್ಚಿದ ಸಂಕಷ್ಟ; 14 ದಿನ ನ್ಯಾಯಾಂಗ ಬಂಧನ

ಮಗುವಿನ ಪಾಲಕರು ರಾಯಚೂರು ಮೂಲದವರು. ರಾಯಚೂರಿನಲ್ಲಿ ಪೊಲೀಸರು ಸ್ಟೇಟ್​ಮೆಂಟ್ ಪಡೆದಿದ್ದಾರೆ. ಪೊಲೀಸರ ಮುಂದೆ ದತ್ತು ನೀಡಿಲ್ಲ ಎಂದು ಕೂಡ ಹೇಳಿದ್ದಾರೆ. ಪೋಷಕರ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ