AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಗೌಡ ಕೇಸ್: ಮಗುವನ್ನು ಮಾರಾಟ ಮಾಡಿಲ್ಲ, ದತ್ತು ನೀಡಿಲ್ಲ ಎಂದ ಬಾಲಕಿಯ ಪಾಲಕರು

ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸೋನು ಶ್ರೀನಿವಾಸ್ ಗೌಡ ಅವರು ಇತ್ತೀಚೆಗೆ ಅರೆಸ್ಟ್ ಆದರು. ಆ ಬಳಿಕ ಅವರನ್ನು ಬಂಧಿಸಲಾಯಿತು. ಯಾವುದೇ ಕಾನೂನಿನ ನಿಯಮ ಪಾಲಿಸದೆ ಅವರು ದತ್ತು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಸೋನು ಗೌಡ ಕೇಸ್: ಮಗುವನ್ನು ಮಾರಾಟ ಮಾಡಿಲ್ಲ, ದತ್ತು ನೀಡಿಲ್ಲ ಎಂದ ಬಾಲಕಿಯ ಪಾಲಕರು
ಸೋನು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 26, 2024 | 8:27 AM

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಟಿಕ್ ಟಾಕ್ ಹಾಗೂ ರೀಲ್ಸ್ ಮಾಡಿ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ, ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈಗ ಬಾಲಕಿಯ ಪಾಲಕರು ನೀಡಿದ ಹೇಳಿಕೆಯಿಂದ ಸೋನು ಶ್ರೀನಿವಾಸ್ ಗೌಡ ಕೊಂಚ ನಿಟ್ಟುಸಿರು ಬಿಡುವಂತೆ ಆಗಿದೆ. ‘ನಾವು ಮಗುವನ್ನು ಮಾರಿಲ್ಲ’ ಎಂದು ಪಾಲಕರು ಹೇಳಿಕೆ ನೀಡಿದ್ದಾರೆ.

ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸೋನು ಶ್ರೀನಿವಾಸ್ ಗೌಡ ಅವರು ಇತ್ತೀಚೆಗೆ ಅರೆಸ್ಟ್ ಆದರು. ಆ ಬಳಿಕ ಅವರನ್ನು ಬಂಧಿಸಲಾಯಿತು. ಯಾವುದೇ ಕಾನೂನಿನ ನಿಯಮ ಪಾಲಿಸದೆ ಅವರು ದತ್ತು ತೆಗೆದುಕೊಂಡಿದ್ದರು ಎನ್ನಲಾಗಿದೆ. ಮೊದಲು ಪೊಲೀಸ್​ ಕಸ್ಟಡಿಯಲ್ಲಿ ಇದ್ದ ಸೋನು, ಈಗ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈಗ ಮಗು ದತ್ತು ಪಡೆದ ಬಗ್ಗೆ ಪೋಷಕರು ಹೇಳಿದ್ದಾರೆ.

ಇತ್ತೀಚೆಗೆ ಬಾಲಕಿಯ ಪೋಷಕರಿಗೆ ಪೊಲೀಸರು ಸಮನ್ಸ್ ನೀಡಿದ್ದರು. ಪೊಲೀಸರು ಎದುರು ಬಾಲಕಿಯ ಪಾಲಕರು ಹಾಜರಾಗಿದ್ದಾರೆ. ‘ಸೋನು ಗೌಡ ಅವರನ್ನು ಮಗು ಹಚ್ಚಿಕೊಂಡಿತ್ತು. ಅನಾರೋಗ್ಯ ಉಂಟಾದಾಗ ಸೋನು ಸೋನು ಅಂತಾ ಕನವರಿಸ್ತಿತ್ತು. ಒಂದೆರಡು ದಿನ ಸೋನು ಜೊತೆ ಇರಲಿ ಅಂತಾ ಕಳಿಸಿದ್ದೆವು. ನಾವು ಮಗುವನ್ನ ಸೋನುಗೆ ಮಾರಾಟ ಮಾಡಿಲ್ಲ’ ಎಂದು ಬ್ಯಾಡರಹಳ್ಳಿ ಪೊಲೀಸರ ಮುಂದೆ ಮಗು ಪಾಲಕರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸೋನು ಶ್ರೀನಿವಾಸ ಗೌಡಗೆ ಹೆಚ್ಚಿದ ಸಂಕಷ್ಟ; 14 ದಿನ ನ್ಯಾಯಾಂಗ ಬಂಧನ

ಮಗುವಿನ ಪಾಲಕರು ರಾಯಚೂರು ಮೂಲದವರು. ರಾಯಚೂರಿನಲ್ಲಿ ಪೊಲೀಸರು ಸ್ಟೇಟ್​ಮೆಂಟ್ ಪಡೆದಿದ್ದಾರೆ. ಪೊಲೀಸರ ಮುಂದೆ ದತ್ತು ನೀಡಿಲ್ಲ ಎಂದು ಕೂಡ ಹೇಳಿದ್ದಾರೆ. ಪೋಷಕರ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್