AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಗೌಡ ಮಗು ದತ್ತು ಪಡೆದ ಪ್ರಕರಣ; ತಂದೆ-ತಾಯಿಗೂ ಇದೆ ಸಂಕಷ್ಟ

ತಾವು ಮಗುವನ್ನು ಹೆತ್ತರೂ ಅದನ್ನು ಬೇರೆಯವರಿಗೆ ವಹಿಸಬೇಕಾದರೆ ಅದಕ್ಕೆ ಕಾನೂನಿನ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಪಾಲಿಸಿಯೇ ಹೋಗಬೇಕು. ಆದರೆ, ಈ ಪ್ರಕರಣದಲ್ಲಿ ಆ ರೀತಿ ನಿಯಮಗಳು ಪಾಲನೆ ಆಗಿಲ್ಲ. ಹೀಗಾಗಿ, ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ಅಧಿಕಾರಿಗಳು ವಿಚಾರಣೆ ವೇಳೆ ಮಗುವನ್ನು ಕೊಟ್ಟಿದ್ದಕ್ಕೆ ಅಧಿಕಾರಿಗಳು ಕಾರಣ ಕೇಳಲಿದ್ದಾರೆ.

ಸೋನು ಗೌಡ ಮಗು ದತ್ತು ಪಡೆದ ಪ್ರಕರಣ; ತಂದೆ-ತಾಯಿಗೂ ಇದೆ ಸಂಕಷ್ಟ
ಸೋನು
ರಾಜೇಶ್ ದುಗ್ಗುಮನೆ
|

Updated on: Mar 23, 2024 | 9:19 AM

Share

ಸೋನು ಶ್ರೀನಿವಾಸ ಗೌಡ (Sonu Srinivas Gowda) ಅವರು ಕಾನೂಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ. ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಈಗ ಈ ಪ್ರಕರಣದಲ್ಲಿ ಬಾಲಕಿಯ ತಂದೆ ತಾಯಿಗೂ ಸಂಕಷ್ಟ ಉಂಟಾಗುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ತಂದೆ ತಾಯಿಗೆ ನೋಟಿಸ್ ನೀಡಲಾಗಿದೆ.

ತಾವು ಮಗುವನ್ನು ಹೆತ್ತರೂ ಅದನ್ನು ಬೇರೆಯವರಿಗೆ ವಹಿಸಬೇಕಾದರೆ ಅದಕ್ಕೆ ಕಾನೂನಿನ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಪಾಲಿಸಿಯೇ ಹೋಗಬೇಕು. ಆದರೆ, ಈ ಪ್ರಕರಣದಲ್ಲಿ ಆ ರೀತಿ ನಿಯಮಗಳು ಪಾಲನೆ ಆಗಿಲ್ಲ. ಹೀಗಾಗಿ, ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿ ಅಧಿಕಾರಿಗಳು ವಿಚಾರಣೆ ವೇಳೆ ಮಗುವನ್ನು ಕೊಟ್ಟಿದ್ದಕ್ಕೆ ಅಧಿಕಾರಿಗಳು ಕಾರಣ ಕೇಳಲಿದ್ದಾರೆ. ಹಣ ಪಡೆದು ಮಗುವನ್ನು ನೀಡಿದ್ದೇವೆ ಎಂದರೆ ಪೋಷಕರಿಗೆ ಕಂಟಕ ಫಿಕ್ಸ್ ಎನ್ನಲಾಗಿದೆ.

ಮಗುವನ್ನು ಹಣಕ್ಕೆ ಮಾರಾಟ ಮಾಡಿದ್ರೆ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗುತ್ತದೆ. ಬಡತನದ ಕಾರಣದಿಂದ ಮಗುವನ್ನ ನೋಡಿಕೊಳ್ಳಲು ಕೊಟ್ಟಿದ್ದು ಎಂದರೆ ಸಮಸ್ಯೆ ಉಂಟಾಗೋ ಸಾಧ್ಯತೆ ಕಡಿಮೆ. ಮಗುವಿನ ಪಾಲಕರ ಹೇಳಿಕೆ ಮೇಲೆ ಮುಂದಿನ ಕ್ರಮ ನಿರ್ಧರ ಆಗಲಿದೆ.

ಇದನ್ನೂ ಓದಿ: ‘ಮಗು ಅಂದ್ರೆ ದುಡ್ಡು ಮಾಡೋ ವಸ್ತು ಅಲ್ಲ’; ಸೋನು ಶ್ರೀನಿವಾಸ ಗೌಡಗೆ ತರಾಟೆ

‘ಬಡತನ ಕಾರಣಕ್ಕೆ ಮಗುವನ್ನು ಸೋನು ಗೌಡಗೆ ನೀಡಲಾಗಿತ್ತು’ ಎಂದರೆ ಪೋಷಕರು ಹಾಗೂ ಮಗುವಿಗೆ ಕೌನ್ಸಿಲಿಂಗ್ ಅಧಿಕಾರಿಗಳು ಮಾಡಲಿದ್ದಾರೆ. ಕೌನ್ಸಿಲಿಂಗ್ ಸಮಯದಲ್ಲಿ ಮಗುವನ್ನ ನೋಡಿಕೊಳ್ಳಲು ಆಗುವುದಿಲ್ಲ ಎಂದರೆ ಮಗುವಿನ ಭವಿಷ್ಯಕ್ಕೆ ಸರ್ಕಾರದಿಂದ ಅರ್ಥಿಕ ಸಹಾಯ ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುತ್ತದೆ. ಇದಕ್ಕೂ ತಂದೆ ತಾಯಿಗಳು ಒಪ್ಪದೆ ಇದ್ದರೆ ಸರ್ಕಾರ ಮಗುವನ್ನು ಪಡೆದುಕೊಳ್ಳುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?