AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ಎಫ್​ಐಆರ್​ನಲ್ಲಿ​ ಉಲ್ಲೇಖವಾದ ವಿಚಾರಗಳೇನು?

ಸೋನು ಶ್ರೀನಿವಾಸ ಗೌಡ ಮಗುವನ್ನು ಪಡೆದಿರೋದು ಕಾನೂನು ಬಾಹೀರ ಆಗಿದೆ. ಮಗುವಿನ ಪಾಲಕರಿಗೆ ಹಲವು ಸೌಲಭ್ಯ ನೀಡಿದ್ದಾಗಿ ಸೋನು ಶ್ರೀನಿವಾಸ ಗೌಡ ಹೇಳಿಕೊಂಡಿದ್ದರು. ಹೀಗಾಗಿ, ಇದು ಮಗುವಿನ ಮಾರಾಟದಂತೆ ಕಂಡು ಬಂದಿದೆ ಎಂದು ದೂರುದಾರರು ಹೇಳಿದ್ದಾರೆ.

Sonu Srinivas Gowda: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ಎಫ್​ಐಆರ್​ನಲ್ಲಿ​ ಉಲ್ಲೇಖವಾದ ವಿಚಾರಗಳೇನು?
ಸೋನು
ರಾಜೇಶ್ ದುಗ್ಗುಮನೆ
|

Updated on: Mar 22, 2024 | 10:33 AM

Share

‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅರೆಸ್ಟ್ ಆಗಿದ್ದಾರೆ. ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೆ ಅಕ್ರಮವಾಗಿ ದತ್ತು ಪಡೆದಿದ್ದೇ ಅವರ ಬಂಧನಕ್ಕೆ ಕಾರಣ. ಅಷ್ಟೇ ಅಲ್ಲ, ಹಲವು ನಿಯಮಗಳನ್ನು ಸೋನು ಶ್ರೀನಿವಾಸ ಗೌಡ ಗಾಳಿಗೆ ತೂರಿದ್ದಾರೆ. ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.

ಮಗು ದತ್ತು ಪಡೆಯಲು ಹಲವು ಪ್ರಕ್ರಿಯೆಗಳು ಇವೆ. ಆ ಪ್ರಕ್ರಿಯೆನ್ನು ಸೋನು ಶ್ರೀನಿವಾಸ್ ಗೌಡ ಪಾಲಿಸಿಲ್ಲ. ಹೀಗಾಗಿ ಸೋನು ಶ್ರೀನಿವಾಸ ಗೌಡ ಮಗುವನ್ನು ಪಡೆದಿರೋದು ಕಾನೂನು ಬಾಹೀರ ಆಗಿದೆ. ಮಗುವಿನ ಪಾಲಕರಿಗೆ ಹಲವು ಸೌಲಭ್ಯ ನೀಡಿದ್ದಾಗಿ ಸೋನು ಶ್ರೀನಿವಾಸ ಗೌಡ ಹೇಳಿಕೊಂಡಿದ್ದರು. ಹೀಗಾಗಿ, ಇದು ಮಗುವಿನ ಮಾರಾಟದಂತೆ ಕಂಡು ಬಂದಿದೆ ಎಂದು ದೂರುದಾರರು ಹೇಳಿದ್ದಾರೆ.

ಮಗುವಿಗೂ ಹಾಗೂ ಮಗುವನ್ನು ದತ್ತು ಪಡೆಯುವ ವ್ಯಕ್ತಿಗೂ ಕನಿಷ್ಠ 25 ವರ್ಷಗಳ ಅಂತರ ಇರಬೇಕು. ಆದರೆ, ಆ ನಿಯಮ ಇಲ್ಲಿ ಪಾಲನೆ ಆಗಿಲ್ಲ. ಮಗುವಿಗೆ ಕಿರುಕುಳ ನೀಡಿದ ಆರೋಪವೂ ಸೋನು ವಿರುದ್ಧ ಕೇಳಿ ಬಂದಿದೆ. ಇನ್ನು, ಮಗುವಿನ ಐಡೆಂಟಿಟಿ, ಅವರ ಹೆಸರು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವಂತಿಲ್ಲ. ಈ ಕೆಲಸವನ್ನು ಸೋನು ಶ್ರೀನಿವಾಸ ಗೌಡ ಮಾಡಿದ್ದಾರೆ. ಇದೆಲ್ಲವೂ ಅವರಿಗೆ ಮುಳುವಾಗುವ ಸೂಚನೆ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಸೋನು ಶ್ರೀನಿವಾಸ ಗೌಡ ಅವರು ಈ ಮೊದಲು ಮಗುವಿನ ದತ್ತು ತೆಗೆದುಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿ ಇದೆ ಎಂದು ಹೇಳಿದ್ದರು. ಆದರೆ, ಅವರು ಇದನ್ನು ಪಾಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಮೊದಲು ಕೂಡ ಹಲವು ವಿವಾದಗಳನ್ನು ಸೋನು ಮಾಡಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು