AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ಎಫ್​ಐಆರ್​ನಲ್ಲಿ​ ಉಲ್ಲೇಖವಾದ ವಿಚಾರಗಳೇನು?

ಸೋನು ಶ್ರೀನಿವಾಸ ಗೌಡ ಮಗುವನ್ನು ಪಡೆದಿರೋದು ಕಾನೂನು ಬಾಹೀರ ಆಗಿದೆ. ಮಗುವಿನ ಪಾಲಕರಿಗೆ ಹಲವು ಸೌಲಭ್ಯ ನೀಡಿದ್ದಾಗಿ ಸೋನು ಶ್ರೀನಿವಾಸ ಗೌಡ ಹೇಳಿಕೊಂಡಿದ್ದರು. ಹೀಗಾಗಿ, ಇದು ಮಗುವಿನ ಮಾರಾಟದಂತೆ ಕಂಡು ಬಂದಿದೆ ಎಂದು ದೂರುದಾರರು ಹೇಳಿದ್ದಾರೆ.

Sonu Srinivas Gowda: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ಎಫ್​ಐಆರ್​ನಲ್ಲಿ​ ಉಲ್ಲೇಖವಾದ ವಿಚಾರಗಳೇನು?
ಸೋನು
ರಾಜೇಶ್ ದುಗ್ಗುಮನೆ
|

Updated on: Mar 22, 2024 | 10:33 AM

Share

‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅರೆಸ್ಟ್ ಆಗಿದ್ದಾರೆ. ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೆ ಅಕ್ರಮವಾಗಿ ದತ್ತು ಪಡೆದಿದ್ದೇ ಅವರ ಬಂಧನಕ್ಕೆ ಕಾರಣ. ಅಷ್ಟೇ ಅಲ್ಲ, ಹಲವು ನಿಯಮಗಳನ್ನು ಸೋನು ಶ್ರೀನಿವಾಸ ಗೌಡ ಗಾಳಿಗೆ ತೂರಿದ್ದಾರೆ. ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.

ಮಗು ದತ್ತು ಪಡೆಯಲು ಹಲವು ಪ್ರಕ್ರಿಯೆಗಳು ಇವೆ. ಆ ಪ್ರಕ್ರಿಯೆನ್ನು ಸೋನು ಶ್ರೀನಿವಾಸ್ ಗೌಡ ಪಾಲಿಸಿಲ್ಲ. ಹೀಗಾಗಿ ಸೋನು ಶ್ರೀನಿವಾಸ ಗೌಡ ಮಗುವನ್ನು ಪಡೆದಿರೋದು ಕಾನೂನು ಬಾಹೀರ ಆಗಿದೆ. ಮಗುವಿನ ಪಾಲಕರಿಗೆ ಹಲವು ಸೌಲಭ್ಯ ನೀಡಿದ್ದಾಗಿ ಸೋನು ಶ್ರೀನಿವಾಸ ಗೌಡ ಹೇಳಿಕೊಂಡಿದ್ದರು. ಹೀಗಾಗಿ, ಇದು ಮಗುವಿನ ಮಾರಾಟದಂತೆ ಕಂಡು ಬಂದಿದೆ ಎಂದು ದೂರುದಾರರು ಹೇಳಿದ್ದಾರೆ.

ಮಗುವಿಗೂ ಹಾಗೂ ಮಗುವನ್ನು ದತ್ತು ಪಡೆಯುವ ವ್ಯಕ್ತಿಗೂ ಕನಿಷ್ಠ 25 ವರ್ಷಗಳ ಅಂತರ ಇರಬೇಕು. ಆದರೆ, ಆ ನಿಯಮ ಇಲ್ಲಿ ಪಾಲನೆ ಆಗಿಲ್ಲ. ಮಗುವಿಗೆ ಕಿರುಕುಳ ನೀಡಿದ ಆರೋಪವೂ ಸೋನು ವಿರುದ್ಧ ಕೇಳಿ ಬಂದಿದೆ. ಇನ್ನು, ಮಗುವಿನ ಐಡೆಂಟಿಟಿ, ಅವರ ಹೆಸರು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವಂತಿಲ್ಲ. ಈ ಕೆಲಸವನ್ನು ಸೋನು ಶ್ರೀನಿವಾಸ ಗೌಡ ಮಾಡಿದ್ದಾರೆ. ಇದೆಲ್ಲವೂ ಅವರಿಗೆ ಮುಳುವಾಗುವ ಸೂಚನೆ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಸೋನು ಶ್ರೀನಿವಾಸ ಗೌಡ ಅವರು ಈ ಮೊದಲು ಮಗುವಿನ ದತ್ತು ತೆಗೆದುಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿ ಇದೆ ಎಂದು ಹೇಳಿದ್ದರು. ಆದರೆ, ಅವರು ಇದನ್ನು ಪಾಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಮೊದಲು ಕೂಡ ಹಲವು ವಿವಾದಗಳನ್ನು ಸೋನು ಮಾಡಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ