AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ಎಫ್​ಐಆರ್​ನಲ್ಲಿ​ ಉಲ್ಲೇಖವಾದ ವಿಚಾರಗಳೇನು?

ಸೋನು ಶ್ರೀನಿವಾಸ ಗೌಡ ಮಗುವನ್ನು ಪಡೆದಿರೋದು ಕಾನೂನು ಬಾಹೀರ ಆಗಿದೆ. ಮಗುವಿನ ಪಾಲಕರಿಗೆ ಹಲವು ಸೌಲಭ್ಯ ನೀಡಿದ್ದಾಗಿ ಸೋನು ಶ್ರೀನಿವಾಸ ಗೌಡ ಹೇಳಿಕೊಂಡಿದ್ದರು. ಹೀಗಾಗಿ, ಇದು ಮಗುವಿನ ಮಾರಾಟದಂತೆ ಕಂಡು ಬಂದಿದೆ ಎಂದು ದೂರುದಾರರು ಹೇಳಿದ್ದಾರೆ.

Sonu Srinivas Gowda: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ಎಫ್​ಐಆರ್​ನಲ್ಲಿ​ ಉಲ್ಲೇಖವಾದ ವಿಚಾರಗಳೇನು?
ಸೋನು
ರಾಜೇಶ್ ದುಗ್ಗುಮನೆ
|

Updated on: Mar 22, 2024 | 10:33 AM

Share

‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅರೆಸ್ಟ್ ಆಗಿದ್ದಾರೆ. ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೆ ಅಕ್ರಮವಾಗಿ ದತ್ತು ಪಡೆದಿದ್ದೇ ಅವರ ಬಂಧನಕ್ಕೆ ಕಾರಣ. ಅಷ್ಟೇ ಅಲ್ಲ, ಹಲವು ನಿಯಮಗಳನ್ನು ಸೋನು ಶ್ರೀನಿವಾಸ ಗೌಡ ಗಾಳಿಗೆ ತೂರಿದ್ದಾರೆ. ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.

ಮಗು ದತ್ತು ಪಡೆಯಲು ಹಲವು ಪ್ರಕ್ರಿಯೆಗಳು ಇವೆ. ಆ ಪ್ರಕ್ರಿಯೆನ್ನು ಸೋನು ಶ್ರೀನಿವಾಸ್ ಗೌಡ ಪಾಲಿಸಿಲ್ಲ. ಹೀಗಾಗಿ ಸೋನು ಶ್ರೀನಿವಾಸ ಗೌಡ ಮಗುವನ್ನು ಪಡೆದಿರೋದು ಕಾನೂನು ಬಾಹೀರ ಆಗಿದೆ. ಮಗುವಿನ ಪಾಲಕರಿಗೆ ಹಲವು ಸೌಲಭ್ಯ ನೀಡಿದ್ದಾಗಿ ಸೋನು ಶ್ರೀನಿವಾಸ ಗೌಡ ಹೇಳಿಕೊಂಡಿದ್ದರು. ಹೀಗಾಗಿ, ಇದು ಮಗುವಿನ ಮಾರಾಟದಂತೆ ಕಂಡು ಬಂದಿದೆ ಎಂದು ದೂರುದಾರರು ಹೇಳಿದ್ದಾರೆ.

ಮಗುವಿಗೂ ಹಾಗೂ ಮಗುವನ್ನು ದತ್ತು ಪಡೆಯುವ ವ್ಯಕ್ತಿಗೂ ಕನಿಷ್ಠ 25 ವರ್ಷಗಳ ಅಂತರ ಇರಬೇಕು. ಆದರೆ, ಆ ನಿಯಮ ಇಲ್ಲಿ ಪಾಲನೆ ಆಗಿಲ್ಲ. ಮಗುವಿಗೆ ಕಿರುಕುಳ ನೀಡಿದ ಆರೋಪವೂ ಸೋನು ವಿರುದ್ಧ ಕೇಳಿ ಬಂದಿದೆ. ಇನ್ನು, ಮಗುವಿನ ಐಡೆಂಟಿಟಿ, ಅವರ ಹೆಸರು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವಂತಿಲ್ಲ. ಈ ಕೆಲಸವನ್ನು ಸೋನು ಶ್ರೀನಿವಾಸ ಗೌಡ ಮಾಡಿದ್ದಾರೆ. ಇದೆಲ್ಲವೂ ಅವರಿಗೆ ಮುಳುವಾಗುವ ಸೂಚನೆ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಸೋನು ಶ್ರೀನಿವಾಸ ಗೌಡ ಅವರು ಈ ಮೊದಲು ಮಗುವಿನ ದತ್ತು ತೆಗೆದುಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿ ಇದೆ ಎಂದು ಹೇಳಿದ್ದರು. ಆದರೆ, ಅವರು ಇದನ್ನು ಪಾಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಮೊದಲು ಕೂಡ ಹಲವು ವಿವಾದಗಳನ್ನು ಸೋನು ಮಾಡಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ