AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲಿನ ಅನುಭವ ಕೆಟ್ಟದಾಗಿತ್ತು, ಆದರೆ ಖುಷಿ ಇದೆ’; ಎಕ್ಸ್​ಪೀರಿಯನ್ಸ್ ಹೇಳಿಕೊಂಡ ಸೋನು ಶ್ರೀನಿವಾಸ್ ಗೌಡ

‘ಜೈಲಿನಲ್ಲಿ ತುಂಬಾನೇ ಸೊಳ್ಳೆ. ಆ ಜೀವನವೇ ಬೇರೆ. 23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅನ್ನೋದು ಬೇಸರದ ವಿಚಾರ. ಆದರೆ, ಕೆಟ್ಟದ್ದಿರಲಿ ಒಳ್ಳೆಯದಿರಲಿ ಜೀವನದಲ್ಲಿ ಎಲ್ಲವನ್ನೂ ಅನುಭವಿಸಬೇಕು. ಆ ಬಗ್ಗೆ ಖುಷಿ ಇದೆ’ ಎಂದಿದ್ದಾರೆ ಸೋನು.

‘ಜೈಲಿನ ಅನುಭವ ಕೆಟ್ಟದಾಗಿತ್ತು, ಆದರೆ ಖುಷಿ ಇದೆ’; ಎಕ್ಸ್​ಪೀರಿಯನ್ಸ್ ಹೇಳಿಕೊಂಡ ಸೋನು ಶ್ರೀನಿವಾಸ್ ಗೌಡ
ಸೋನು
ರಾಜೇಶ್ ದುಗ್ಗುಮನೆ
|

Updated on:Apr 13, 2024 | 12:05 PM

Share

ಕಾನೂನಿಗೆ ವಿರುದ್ಧವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿ ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರನ್ನು ಬಂಧಿಸಲಾಗಿತ್ತು. ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಅವರು ನಂತರ ನ್ಯಾಯಾಂಗ ಬಂಧನಕ್ಕೆ ಒಳಪಟ್ಟರು. ಇತ್ತೀಚೆಗೆ ಸೋನು ಶ್ರೀನಿವಾಸ್ ಗೌಡ ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಜೈಲಿನಲ್ಲಿ ಏನಾಯಿತು? ಜೈಲಿನ ಅನುಭವ ಹೇಗಿತ್ತು ಎನ್ನುವುದನ್ನು ಅವರು ವಿವರಿಸಿದ್ದಾರೆ.

‘ನನ್ನನ್ನು ಕಾನೂನಾತ್ಮಕವಾಗಿ ವಿಚಾರಣೆ ಮಾಡಿದರು. ಆ ಬಳಿಕ ನನ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಾಲ್ಕು ಗೋಡೆ, ಅಲ್ಲಿನ ಜನ ನೋಡಿ ನನಗೆ ಇದೆಲ್ಲ ಬೇಕಿತ್ತಾ ಅನಿಸಿತು. ಬೇರೆ ಬೇರೆ ಪ್ರಕರಣ ಮಾಡಿದವರು ಅಲ್ಲಿದ್ದರು. ಮೂರು ದಿನಕ್ಕೆ ಒಮ್ಮೆ ಫೋನ್ ಕೊಡ್ತಾರೆ. 3-4 ನಿಮಿಷ ಮಾತನಾಡಲು ಮೂರು ದಿನ ಕಾಯಬೇಕು. ಇದರಿಂದ ವ್ಯಕ್ತಿಯ ಬೆಲೆ ಗೊತ್ತಾಗುತ್ತದೆ. ನಾಲ್ಕು ಗೋಡೆ ಮಧ್ಯೆ ಇದ್ದು ಎಲ್ಲವೂ ಕಲಿತೆ’ ಎಂದಿದ್ದಾರೆ ಸೋನು ಗೌಡ.

‘ಜೈಲಿನಲ್ಲಿ ತುಂಬಾನೇ ಸೊಳ್ಳೆ. ಆ ಜೀವನವೇ ಬೇರೆ. 23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅನ್ನೋದು ಬೇಸರದ ವಿಚಾರ. ಆದರೆ, ಕೆಟ್ಟದ್ದಿರಲಿ ಒಳ್ಳೆಯದಿರಲಿ ಜೀವನದಲ್ಲಿ ಎಲ್ಲವನ್ನೂ ಅನುಭವಿಸಬೇಕು. ಆ ಬಗ್ಗೆ ಖುಷಿ ಇದೆ’ ಎಂದಿದ್ದಾರೆ ಸೋನು.

‘ಯಾರೂ ಇಲ್ಲದೆ ತುಂಬಾ ಕಷ್ಟಪಟ್ಟೆ. ಟ್ರೋಲ್ ಪೇಜ್​ಗಳು ನನ್ನನ್ನು ಸಪೋರ್ಟ್ ಮಾಡಿದ್ದಾರೆ. ಇದನ್ನು ನಾನು ನಿರೀಕ್ಷಿಸಿರಲಿಲ್ಲ. ಇದು ಖುಷಿ ನೀಡಿದೆ. ಬಂದವನು ಫೋನ್ ನೋಡಿಲ್ಲ. ನಂತರ ನೋಡಿದೆ. ನನ್ನದು ಸಣ್ಣ ಸರ್ಕಲ್. ಎಲ್ಲರೂ ನನ್ನ ಜೊತೆ ನಿಂತರು. ನನ್ನ ಪ್ರಕರಣದ ಬಗ್ಗೆ ಹೆಚ್ಚಿನದ್ದನ್ನು ಹೇಳೋಕೆ ಆಗಲ್ಲ’ ಎಂದಿದ್ದಾರೆ ಸೋನು ಶ್ರೀನಿವಾಸ್ ಗೌಡ. ಇದನ್ನೂ ಓದಿ: ಜೈಲಿನಿಂದ ಹೊರಬಂದ ಬಳಿಕ ಸೋನು ಶ್ರೀನಿವಾಸ್​ ಗೌಡ ಸಂಪೂರ್ಣ ಸೈಲೆಂಟ್​

ಸೋನು ಶ್ರೀನಿವಾಸ್ ಗೌಡ ಅವರು ಟಿಕ್​ಟಾಕ್ ಹಾಗೂ ರೀಲ್ಸ್ ಮಾಡಿ ಫೇಮಸ್ ಆಗಿದ್ದಾರೆ. ಅವರ ವೈಯಕ್ತಿಕ ವಿಡಿಯೋ ಲೀಕ್ ಆಗಿ ಸುದ್ದಿ ಆದರು. ನಂತರ ‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರ ಮೂಲಕ ಅವರು ಎಂಟ್ರಿ ಕೊಟ್ಟು ಗಮನ ಸೆಳೆದರು. ಈಗ ಅವರು ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Sat, 13 April 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು