AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಶ್ರೀನಿವಾಸ ಗೌಡಗೆ ಹೆಚ್ಚಿದ ಸಂಕಷ್ಟ; 14 ದಿನ ನ್ಯಾಯಾಂಗ ಬಂಧನ

ಸೋನು ಶ್ರೀನಿವಾಸ ಗೌಡ ಅವರು ಕಳೆದ ವಾರ ಅರೆಸ್ಟ್ ಆದರು. ಆ ಬಳಿಕ ಈ ಪ್ರಕರಣದಲ್ಲಿ ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಈ ವೇಳೆ ಪೊಲೀಸರು ವಿಚಾರಣೆ ನಡೆಸಿದ್ದರು. ಈಗ ನ್ಯಾಯಾಂಗ ಬಂಧನ ವಿಧಿಸಿ CJM ನ್ಯಾಯಾಲಯ ಆದೇಶ ಹೊರಡಿಸಿದೆ.

ಸೋನು ಶ್ರೀನಿವಾಸ ಗೌಡಗೆ ಹೆಚ್ಚಿದ ಸಂಕಷ್ಟ; 14 ದಿನ ನ್ಯಾಯಾಂಗ ಬಂಧನ
ಸೋನು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 25, 2024 | 2:24 PM

Share

ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರಿಗೆ ದಿನ ಕಳೆದಂತೆ ಸಂಕಷ್ಟ ಹೆಚ್ಚುತ್ತಲೇ ಇದೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಅವರಿಗೆ ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅವರು ಜಾಮಿನಿಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸೋನು ಶ್ರೀನಿವಾಸ್ ಗೌಡ ಅವರು ಟಿಕ್​ಟಾಕ್ ಹಾಗೂ ರೀಲ್ಸ್ ಮಾಡಿ ಫೇಮಸ್ ಆದವರು. ನಂತರ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಸಾಕಷ್ಟು ಸುದ್ದಿ ಆಯಿತು. ನಂತರ ‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರಲ್ಲಿ ಸ್ಪರ್ಧಿ ಆಗಿ ಭಾಗಿ ಆಗಿದ್ದರು. ಈ ವೇಳೆ ಅವರ ಮೇಲೆ ಇದ್ದ ಅಭಿಪ್ರಾಯ ಕೆಲವರಿಗೆ ಬದಲಾಗಿತ್ತು. ಈಗ ಸೋನು ಶ್ರೀನಿವಾಸ ಗೌಡ ಅವರು ಕಾನೂನು ಬಾಹೀರವಾಗಿ ಮಗುವನ್ನು ದತ್ತು ಪಡೆದು ಸಂಕಷ್ಟ ಅನುಭವಿಸಿದ್ದಾರೆ.

ಇದನ್ನೂ ಓದಿ: ಹಣ ಕೊಟ್ಟು ಮಗುವನ್ನು ಖರೀದಿಸಿದ್ದರೆ ಸೋನು? ಮಗುವಿನ ಚಿಕ್ಕಪ್ಪ ಹೇಳಿದ್ದು ಹೀಗೆ

ಸೋನು ಶ್ರೀನಿವಾಸ ಗೌಡ ಅವರು ಕಳೆದ ವಾರ ಅರೆಸ್ಟ್ ಆದರು. ಆ ಬಳಿಕ ಈ ಪ್ರಕರಣದಲ್ಲಿ ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಈ ವೇಳೆ ಪೊಲೀಸರು ವಿಚಾರಣೆ ನಡೆಸಿದ್ದರು. ಈಗ ನ್ಯಾಯಾಂಗ ಬಂಧನ ವಿಧಿಸಿ CJM ನ್ಯಾಯಾಲಯ ಆದೇಶ ಹೊರಡಿಸಿದೆ.

ಸೋನು ಶ್ರೀನಿವಾಸ್ ಗೌಡ ಅವರು ರಾಯಚೂರು ಮೂಲದ ಬಾಲಕಿಯನ್ನು ದತ್ತು ಪಡೆದಿದ್ದರು. ಆ ಬಾಲಕಿಗೆ ಏಳು ವರ್ಷ. ತಂದೆ-ತಾಯಿಯ ಒಪ್ಪಿಗೆ ಪಡೆದು ಸೋನು ಮಗುವನ್ನು ದತ್ತು ಪಡೆದಿದ್ದರು. ಇಲ್ಲಿ ಯಾವುದೇ ನಿಯಮಗಳೂ ಫಾಲೋ ಆಗಿರಲಿಲ್ಲ. ಇದನ್ನು ತಿಳಿದ ಬಳಿಕ ಸೋನು ವಿರುದ್ಧ ಕೇಸ್ ದಾಖಲಾಯ್ತು. ಆ ಬಳಿಕ ಪೊಲೀಸರು ಎಫ್​ಐಆರ್ ದಾಖಲಿಸಿ ಸೋನು ಅವರನ್ನು ಬಂಧಿಸಿದ್ದಾರೆ. ಮಗುವನ್ನು ದತ್ತು ಪಡೆಯುವ ಮೊದಲು ಅರ್ಜಿ ಸಲ್ಲಿಕೆ ಮಾಡಬೇಕು. ಮಗುವಿಗೂ ಹಾಗೂ ದತ್ತು ಪಡೆಯುತ್ತಿರುವ ವ್ಯಕ್ತಿಗೂ 25 ವರ್ಷಗಳ ವಯಸ್ಸಿನ ಅಂತರ ಇರಬೇಕು. ಇದ್ಯಾವುದನ್ನೂ ಸೋನು ಫಾಲೋ ಮಾಡಿಲ್ಲ. ಮಗುವಿನ ಪಾಲಕರಿಗೆ ಸೋನು ಹಣ ನೀಡಿದ್ದಾರೆ ಎನ್ನುವ ಆರೋಪವೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:13 pm, Mon, 25 March 24

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ