AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದ ಗಣ್ಯರಿಂದ ಸೌಂದರ್ಯ ಜಗದೀಶ್​ ಅಂತಿಮ ದರ್ಶನ; ಏ.15ಕ್ಕೆ ಅಂತ್ಯಕ್ರಿಯೆ

ಸೌಂದರ್ಯ ಜಗದೀಶ್​ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕುಟುಂಬದವರು ಮಹಾಲಕ್ಷ್ಮೀ ಲೇಔಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ (ಏಪ್ರಿಲ್​ 15) ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಅವರ ನಿವಾಸಕ್ಕೆ ಆಗಮಿಸಿದ ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದಿದ್ದಾರೆ.

ಚಿತ್ರರಂಗದ ಗಣ್ಯರಿಂದ ಸೌಂದರ್ಯ ಜಗದೀಶ್​ ಅಂತಿಮ ದರ್ಶನ; ಏ.15ಕ್ಕೆ ಅಂತ್ಯಕ್ರಿಯೆ
ಸೌಂದರ್ಯ ಜಗದೀಶ್​
ಮದನ್​ ಕುಮಾರ್​
|

Updated on: Apr 14, 2024 | 6:30 PM

Share

ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿದ ನಿರ್ಮಾಪಕ ಸೌಂದರ್ಯ ಜಗದೀಶ್​ (Soundarya Jagadeesh) ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಇಂದು (ಏಪ್ರಿಲ್​ 14) ಬೆಳಗ್ಗೆ ಜಗದೀಶ್​ ಅವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾದರು. ಬಳಿಕ ಎಂ.ಎಸ್​. ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು. ಮಧ್ಯಾಹ್ನದ ವೇಳೆಗೆ ಸೌಂದರ್ಯ ಜಗದೀಶ್​ ಅವರ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬರಲಾಗಿದೆ. ನಟ ದರ್ಶನ್​ (Darshan) ಸೇರಿದಂತೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ.

ಸೋಮವಾರ (ಏಪ್ರಿಲ್​ 15) ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಸೌಂದರ್ಯ ಜಗದೀಶ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 9 ಗಂಟೆವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರುತ್ತದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆ ಒಳಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೌಂದರ್ಯ ಜಗದೀಶ್​ ಅವರ ನಿಧನದಿಂದ ಚಿತ್ರರಂಗಕ್ಕೆ ಆಘಾತ ಉಂಟಾಗಿದೆ.

ಉದ್ಯಮಿ ಆಗಿದ್ದ ಸೌಂದರ್ಯ ಜಗದೀಶ್​ ಅವರು ನಂತರ ಸಿನಿಮಾದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಚಿತ್ರರಂಗದ ಹಲವರ ಜೊತೆ ಅವರು ಒಡನಾಟ ಹೊಂದಿದ್ದರು. ಇಂದು ಶ್ರೀಮುರಳಿ, ದರ್ಶನ್​, ಉಪೇಂದ್ರ, ಗುರುಕಿರಣ್​, ತರುಣ್​ ಸುಧೀರ್​, ಸಾರಾ ಗೋವಿಂದು, ಕೆ. ಮಂಜು ಮುಂತಾದವರು ಬಂದು ಸೌಂದರ್ಯ ಜಗದೀಶ್​ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಜಗದೀಶ್​ ಪುತ್ರ ಸ್ನೇಹಿತ್​ ಅವರು ನಟನಾಗಿ ಗುರುತಿಸಿಕೊಂಡಿದ್ದಾರೆ. ಅಪ್ಪನ ಶವದ ಎದುರು ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಇದನ್ನೂ ಓದಿ: ಸೌಂದರ್ಯ ಜಗದೀಶ್​ ಸಾವಿನ ಹಿಂದಿರುವ 2 ಅನುಮಾನದ ಬಗ್ಗೆ ಸ್ನೇಹಿತರ ಸ್ಪಷ್ಟನೆ

ಸೌಂದರ್ಯ ಜಗದೀಶ್​ ಅವರ ಸಾವಿಗೆ ಸಂಬಂಧಿಸಿದಂತೆ ಕುಟುಂಬದವರು ಮಹಾಲಕ್ಷ್ಮೀ ಲೇಔಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಜಗದೀಶ್​ ಅವರು ಆರ್ಥಿಕ ಸಂಕಷ್ಟ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ಹೆಚ್ಚು ಸಾಲ ಆಗಿತ್ತು. ಮರು ಪಾವತಿ ಮಾಡಲಾಗದೇ ನೊಂದಿದ್ದರು. ಕಳೆದ ತಿಂಗಳು ಸೌಂದರ್ಯ ಜಗದೀಶ್​ ಅವರ ಅತ್ತೆ ನಿಧನರಾಗಿದ್ದರು. ಆ ಬಳಿಕ ಜಗದೀಶ್​ ಮಾನಸಿಕವಾಗಿ ಕುಗ್ಗಿದ್ದರು. ಬಳಿಕ ಕುಟುಂಬದವರು ಕೌನ್ಸಲಿಂಗ್​ ಮಾಡಿಸಿದ್ದರು. ಡಿಪ್ರೆಷನ್​ಗೆ ಜಗದೀಶ್​ ಅವರು ಔಷಧಿ ಸೇವಿಸುತ್ತಿದ್ದರು. ಕಳೆದು ಒಂದು ತಿಂಗಳಿಂದ ಒಂಟಿಯಾಗಿ ಮನೆಯಲ್ಲಿ ಇರುತ್ತಿದ್ದರು ಎಂಬುದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು