AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದ ಗಣ್ಯರಿಂದ ಸೌಂದರ್ಯ ಜಗದೀಶ್​ ಅಂತಿಮ ದರ್ಶನ; ಏ.15ಕ್ಕೆ ಅಂತ್ಯಕ್ರಿಯೆ

ಸೌಂದರ್ಯ ಜಗದೀಶ್​ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕುಟುಂಬದವರು ಮಹಾಲಕ್ಷ್ಮೀ ಲೇಔಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ (ಏಪ್ರಿಲ್​ 15) ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಅವರ ನಿವಾಸಕ್ಕೆ ಆಗಮಿಸಿದ ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದಿದ್ದಾರೆ.

ಚಿತ್ರರಂಗದ ಗಣ್ಯರಿಂದ ಸೌಂದರ್ಯ ಜಗದೀಶ್​ ಅಂತಿಮ ದರ್ಶನ; ಏ.15ಕ್ಕೆ ಅಂತ್ಯಕ್ರಿಯೆ
ಸೌಂದರ್ಯ ಜಗದೀಶ್​
ಮದನ್​ ಕುಮಾರ್​
|

Updated on: Apr 14, 2024 | 6:30 PM

Share

ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿದ ನಿರ್ಮಾಪಕ ಸೌಂದರ್ಯ ಜಗದೀಶ್​ (Soundarya Jagadeesh) ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಇಂದು (ಏಪ್ರಿಲ್​ 14) ಬೆಳಗ್ಗೆ ಜಗದೀಶ್​ ಅವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾದರು. ಬಳಿಕ ಎಂ.ಎಸ್​. ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು. ಮಧ್ಯಾಹ್ನದ ವೇಳೆಗೆ ಸೌಂದರ್ಯ ಜಗದೀಶ್​ ಅವರ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬರಲಾಗಿದೆ. ನಟ ದರ್ಶನ್​ (Darshan) ಸೇರಿದಂತೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ.

ಸೋಮವಾರ (ಏಪ್ರಿಲ್​ 15) ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಸೌಂದರ್ಯ ಜಗದೀಶ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 9 ಗಂಟೆವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇರುತ್ತದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆ ಒಳಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೌಂದರ್ಯ ಜಗದೀಶ್​ ಅವರ ನಿಧನದಿಂದ ಚಿತ್ರರಂಗಕ್ಕೆ ಆಘಾತ ಉಂಟಾಗಿದೆ.

ಉದ್ಯಮಿ ಆಗಿದ್ದ ಸೌಂದರ್ಯ ಜಗದೀಶ್​ ಅವರು ನಂತರ ಸಿನಿಮಾದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಚಿತ್ರರಂಗದ ಹಲವರ ಜೊತೆ ಅವರು ಒಡನಾಟ ಹೊಂದಿದ್ದರು. ಇಂದು ಶ್ರೀಮುರಳಿ, ದರ್ಶನ್​, ಉಪೇಂದ್ರ, ಗುರುಕಿರಣ್​, ತರುಣ್​ ಸುಧೀರ್​, ಸಾರಾ ಗೋವಿಂದು, ಕೆ. ಮಂಜು ಮುಂತಾದವರು ಬಂದು ಸೌಂದರ್ಯ ಜಗದೀಶ್​ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಜಗದೀಶ್​ ಪುತ್ರ ಸ್ನೇಹಿತ್​ ಅವರು ನಟನಾಗಿ ಗುರುತಿಸಿಕೊಂಡಿದ್ದಾರೆ. ಅಪ್ಪನ ಶವದ ಎದುರು ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಇದನ್ನೂ ಓದಿ: ಸೌಂದರ್ಯ ಜಗದೀಶ್​ ಸಾವಿನ ಹಿಂದಿರುವ 2 ಅನುಮಾನದ ಬಗ್ಗೆ ಸ್ನೇಹಿತರ ಸ್ಪಷ್ಟನೆ

ಸೌಂದರ್ಯ ಜಗದೀಶ್​ ಅವರ ಸಾವಿಗೆ ಸಂಬಂಧಿಸಿದಂತೆ ಕುಟುಂಬದವರು ಮಹಾಲಕ್ಷ್ಮೀ ಲೇಔಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಜಗದೀಶ್​ ಅವರು ಆರ್ಥಿಕ ಸಂಕಷ್ಟ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ಹೆಚ್ಚು ಸಾಲ ಆಗಿತ್ತು. ಮರು ಪಾವತಿ ಮಾಡಲಾಗದೇ ನೊಂದಿದ್ದರು. ಕಳೆದ ತಿಂಗಳು ಸೌಂದರ್ಯ ಜಗದೀಶ್​ ಅವರ ಅತ್ತೆ ನಿಧನರಾಗಿದ್ದರು. ಆ ಬಳಿಕ ಜಗದೀಶ್​ ಮಾನಸಿಕವಾಗಿ ಕುಗ್ಗಿದ್ದರು. ಬಳಿಕ ಕುಟುಂಬದವರು ಕೌನ್ಸಲಿಂಗ್​ ಮಾಡಿಸಿದ್ದರು. ಡಿಪ್ರೆಷನ್​ಗೆ ಜಗದೀಶ್​ ಅವರು ಔಷಧಿ ಸೇವಿಸುತ್ತಿದ್ದರು. ಕಳೆದು ಒಂದು ತಿಂಗಳಿಂದ ಒಂಟಿಯಾಗಿ ಮನೆಯಲ್ಲಿ ಇರುತ್ತಿದ್ದರು ಎಂಬುದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್